Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಕ್ಷಣೆಗೆ ಕೇಂದ್ರ ಮಹತ್ವದ ಕಾಯ್ದೆ ಜಾರಿ

ರಕ್ಷಣೆಗೆ ಕೇಂದ್ರ ಮಹತ್ವದ ಕಾಯ್ದೆ ಜಾರಿ

ಹೊರ ರಾಜ್ಯದ ಮೀನುಗಾರರಿಗೆ ಗುರುತಿನ ಚೀಟಿ ಕಡ್ಡಾಯ

ವಾರ್ತಾಭಾರತಿವಾರ್ತಾಭಾರತಿ11 Oct 2016 10:33 PM IST
share
ರಕ್ಷಣೆಗೆ ಕೇಂದ್ರ ಮಹತ್ವದ  ಕಾಯ್ದೆ ಜಾರಿ

ಕಾರವಾರ, ಅ.11: ಸಮುದ್ರದ ಮೂಲಕ ದೇಶದೊಳಗೆ ನುಸುಳಬಹುದಾದ ಸಮಾಜ ಘಾತುಕ ಶಕ್ತಿಗಳನ್ನು ತಡೆಯಲು ಕೇಂದ್ರ ಸರಕಾರ ನೂತನ ಕಾಯ್ದೆಗಳನ್ನು ಜಾರಿಗೆ ತರುತ್ತಿದೆ. ಆ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಸಮುದ್ರದಲ್ಲಿ ಮೀನುಗಾರಿಕಾ ದೋಣಿಗಳಲ್ಲಿ ಕಾರ್ಯನಿರ್ವಹಿಸುವ ಹೊರ ರಾಜ್ಯದ ಕಾರ್ಮಿಕರು ಗುರುತಿನ ಚೀಟಿ ಹೊಂದುವುದು ಕಡ್ಡಾಯವಾಗಲಿದೆ.

ಕೇಂದ್ರ ಸರಕಾರ ಈ ಕ್ರಮವನ್ನು ಕೈಗೊಂಡಿದ್ದು ಜಿಲ್ಲೆಯ ಕರಾವಳಿಯ ಬೋಟ್ ಮಾಲಕರ ಬೋಟಿನಲ್ಲಿ ದುಡಿಯುವ ಹೊರ ಜಿಲ್ಲೆಯ, ರಾಜ್ಯದ ಕಾರ್ಮಿಕರಿಗೆ ಬೋಟಿನಲ್ಲಿ ಕಾರ್ಯನಿರ್ವಹಿಸಬೇಕಾದರೆ ಮೀನುಗಾರಿಕಾ ಇಲಾಖೆ ನೀಡುವ ಗುರುತಿನ ಚೀಟಿ ಅತ್ಯವಶ್ಯಕ.ವಾಗಿದೆ.

ಸ್ಥಳೀಯ ಮೀನುಗಾರರು ಈಗಾಗಲೇ ಬಯೋಮೆಟ್ರಿಕ್ಾರ್ಡ್‌ಗಳನ್ನು ಹೊಂದಿದ್ದಾರೆ. ಅದರೆ ದೂರದ ಓಡಿಶಾ, ಜಾರ್ಖಂಡ್ ಹಾಗೂ ಇನ್ನಿತರ ಹೊರ ರಾಜ್ಯಗಳಿಂದ ಬಂದಿರುವ ಕಾರ್ಮಿಕರ ಬಳಿ ಯಾವುದೇ ಗುರುತಿನ ಚೀಟಿ ಲಭ್ಯ ಇಲ್ಲದೆ ಇರುವುದನ್ನು ಗಮನಿಸಿ ಈ ಕ್ರಮಕೈಗೊಳ್ಳಲಾಗುತ್ತಿದೆ. ಈ ಗುರುತಿನ ಚೀಟಿಯನ್ನು ಆಧಾರ್ ಕಾರ್ಡ್ ಹೊಂದಿರುವವರಿಗೆ ಮಾತ್ರ ನೀಡಲಾಗುವುದು. ತಾತ್ಕಾಲಿಕ ಗುರುತಿನ ಚೀಟಿ ಪಡೆಯಲು ಮೀನುಗಾರಿಕಾ ಉಪನಿರ್ದೇಶಕರು ಗುರುತಿನ ಚೀಟಿ ನೀಡುವ ಅಧಿಕೃತ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ಹಿಂದೆ ಮೀನುಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಇಲ್ಲಿನ ಪೊಲೀಸ್ ಇಲಾಖೆಯ ನಿರ್ದೇಶನದಂತೆ ಕಾರವಾರದ ಬೃತಹ್ ಯೋಜನೆಗಳಾದ ಸೀಬರ್ಡ್, ಕೈಗಾ ಇನ್ನಿತರ ಯೋಜನೆಗಳ ರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡು ಹೊರ ರಾಜ್ಯದ ಮೀನುಗಾರಿಕಾ ಕಾರ್ಮಿಕರ ಮಾಹಿತಿ ಸಂಗ್ರಹ ಅಗತ್ಯವಾಗಿತ್ತು.

ಈಗಾಗಲೇ ಅನೇಕ ಬಾರಿ ಕರಾವಳಿ ರಕ್ಷಣಾಪಡೆಯ ಅಧಿಕಾರಿಗಳು ಸಮುದ್ರದಲ್ಲಿ ಗಸ್ತು ನಡೆಸುವಾಗ ಬೋಟ್‌ನಲ್ಲಿ ಯಾವುದೇ ಗುರುತಿನ ಚೀಟಿ ಹೊಂದಿರದ ಬೋಟುಗಳನ್ನು ವಶಕ್ಕೆ ತೆಗೆದುಕೊಂಡಿದ್ದರು.

ತಾತ್ಕಾಲಿಕ ಗುರುತಿನ ಚೀಟಿ ಪಡೆಯಬೇಕಾದರೂ ಬೋಟ್‌ನ ಮಾಲಕರು, ತಮ್ಮ ಬೋಟ್‌ನಲ್ಲಿ ಕೆಲಸ ನಿರ್ವಹಿಸುತ್ತಿರುವ ಹೊರ ರಾಜ್ಯದ ಕಾರ್ಮಿಕರ ಸಂಪೂರ್ಣ ಮಾಹಿತಿಯನ್ನು ನಿಗದಿತ ಅರ್ಜಿಯಲ್ಲಿ ಫೋಟೊ ಸಹಿತ ಪಡೆದು ಕರಾವಳಿ ಕಾವಲು ಪಡೆಗೆ ನೀಡಬೇಕು. ಬಳಿಕ ಪೊಲೀಸರ ಸಹಕಾರದಿಂದ ದಾಖಲೆಗಳ ಪರಿಶೀಲನೆ ನಡೆಸಿ, ಜಿಲ್ಲಾ ಮೀನುಗಾರಿಕಾ ನಿರ್ದೇಶಕರ ಮೂಲಕ ಆಯಾ ಕಾರ್ಮಿಕರಿಗೆ ಗುರುತಿನ ಚೀಟಿ ನೀಡಲಾಗುವುದು ಎಂದು ಕರಾವಳಿ ಕಾವಲು ಪಡೆಯ ಮೂಲಗಳು ಮಾಹಿತಿ ನೀಡಿವೆ.

ಕರಾವಳಿಯಲ್ಲಿ ಒಟ್ಟು 9,432 ಬೋಟುಗಳು

ಜಿ

ಲ್ಲೆಯ ಕರಾವಳಿಯಲ್ಲಿ ಅಧಿಕೃತವಾಗಿ 9,432 ವಿವಿಧ ಮಾದರಿಯ ಬೋಟುಗಳು ಮೀನುಗಾರಿಕಾ ಇಲಾಖೆಯಲ್ಲಿ ನೋಂದಣಿ ಯಾಗಿವೆ. ಅವುಗಳನ್ನು ಟ್ರಾಲ್ ಬೋಟುಗಳು 2,222, ಔಟ್ ಬೋರ್ಡ್ ಇಂಜಿನ್‌ನ 1,088 ಬೋಟುಗಳು ಹಾಗೂ 6,122 ನಾಡದೋಣಿಗಳು ಸೇರಿವೆ. ಅಕ್ರಮ ನಡೆದರೆ ಮಾಲಕರೇ ಜವಾಬ್ದಾರರು

ತಾತ್ಕಾಲಿಕ ಗುರುತಿನ ಚೀಟಿ ಪಡೆಯುವ ಸಂದರ್ಭದಲ್ಲಿ ಬೋಟ್ ಮಾಲಕರು ಇಲಾಖೆಗೆ ತಮ್ಮ ಬೋಟುಗಳು ಯಾವುದೇ ಅಹಿತಕರ ಚಟುವಟಿಕೆಯಲ್ಲಿ ತೊಡಗಿಕೊಂಡಿಲ್ಲ. ಬೋಟ್ ಮೂಲಕ ದುಡಿಯುವ ಕಾರ್ಮಿಕರು ಅಕ್ರಮ ನಡೆಸಿದರೆ ಬೋಟ್ ಮಾಲಕರೇ ಜವಾಬ್ದಾರರು ಎನ್ನುವ ಮುಚ್ಚಳಿಕೆ ಪತ್ರನ್ನು ಬರೆದುಕೊಡಬೇಕಾಗಿದೆ. ಇದು ಬೋಟ್ ಮಾಲಕರಿಗೆ ತಲೆ ನೋವಾಗಿ ಪರಿಣಮಿಸಿದೆ ಎನ್ನಲಾಗಿದೆ.

ಹೊರ ರಾಜ್ಯದ ಮೀನುಗಾರರಿಗೆ ಕೇಂದ್ರ ಸರಕಾರ ನೀಡಲು ಉದ್ದೇಶಿಸಿರುವ ತಾತ್ಕಾಲಿಕ ಗುರುತಿನ ಚೀಟಿ ಹೊಂದಿದ್ದರೆ ಮೀನುಗಾರಿಕೆ ನಡೆಸಲು ಯಾವುದೇ ಅಭ್ಯಂತರ ಇಲ್ಲ. ಇದರಿಂದ ಸಮುದ್ರದಲ್ಲಿ ಗಸ್ತು ನಡೆಸುವ ಕೋಸ್ಟ್‌ಗಾರ್ಡ್ ಹಾಗೂ ಕರಾವಳಿ ಕಾವಲು ಪಡೆಯವರ ವಿಚಾರಣೆ ವೇಳೆ ಆವಶ್ಯಕ. ಸಮುದ್ರ ಮಾರ್ಗದ ಮೂಲಕ ನಡೆಯಬಹುದಾದ ಅಕ್ರಮ, ಸಮಾಜಘಾತುಕ ಚಟುವಟಿಕೆಗಳನ್ನು ತಡೆಯಲು ಗುರುತಿನ ಚೀಟಿ ಅಗತ್ಯ. ಈ ತಾತ್ಕಾಲಿಕ ಗುರುತಿನ ಚೀಟಿ ಜಿಲ್ಲೆಗೆ ಮಾತ್ರ ಸೀಮಿತವಾಗಿರುತ್ತದೆ. ಅದು ಬೇರೆ ಜಿಲ್ಲೆ ಅಥವಾ ರಾಜ್ಯಗಳಲ್ಲಿ ಮಾನ್ಯತೆ ಹೊಂದಿರುವುದಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X