Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಾಡಿನಲ್ಲಿ ಸಮಾನತೆ, ಸೌಹಾರ್ದದ ಬೀಜ...

ನಾಡಿನಲ್ಲಿ ಸಮಾನತೆ, ಸೌಹಾರ್ದದ ಬೀಜ ಬಿತ್ತಿದ ‘ಚಲೋ ಉಡುಪಿ’

ಮಂಜುನಾಥ ದಾಸನಪುರಮಂಜುನಾಥ ದಾಸನಪುರ11 Oct 2016 11:40 PM IST
share
ನಾಡಿನಲ್ಲಿ ಸಮಾನತೆ, ಸೌಹಾರ್ದದ ಬೀಜ ಬಿತ್ತಿದ ‘ಚಲೋ ಉಡುಪಿ’

ಬೆಂಗಳೂರು, ಅ.11: ಸಂಘಪರಿವಾರದ ಜನವಿರೋಧಿ ಸಿದ್ಧಾಂತಗಳನ್ನು ದಲಿತ ಹಾಗೂ ಹಿಂದುಳಿದ ಸಮುದಾ ಯದ ಯುವಜನತೆಗೆ ತಿಳಿಸುವಲ್ಲಿ ಉಡುಪಿ ಚಲೋ ಜಾಥಾ ಯಶಸ್ಸು ಕಂಡಿದೆ ಎಂದು ದಲಿತ, ದಮನಿತರ ಸ್ವಾಭಿಮಾನಿ ಸಮಾವೇಶದ ಸಂಚಾಲಕ ಭಾಸ್ಕರ್ ಪ್ರಸಾದ್ ತಿಳಿಸಿದ್ದಾರೆ.

ದಲಿತ ಯುವಕರು ಎತ್ತ ಸಾಗಬೇಕು. ಮನುವಾದಿಗಳ ಜನವಿರೋಧಿ ನೀತಿಯ ಕುರಿತು ಜನರಲ್ಲಿ ಜಾಗೃತಿ ಮೂಡಿಸು ವುದು ಸೇರಿದಂತೆ ಹಲವು ವಿಷಯಗಳ ಕುರಿತು ವಾರ್ತಾಭಾರತಿಯೊಂದಿಗೆ ಅವರು ಮಾತನಾಡಿದರು.
ವಾರ್ತಾಭಾರತಿ: ಉಡುಪಿ ಚಲೋ ಸಮಾವೇಶ ನಿರೀಕ್ಷಿಸಿದಂತೆ ಯಶಸ್ವಿಯಾಗಿದೆಯೆ?

ಉಡುಪಿ ಚಲೋ ಸಮಾವೇಶಕ್ಕೆ ಕನಿಷ್ಠ 20ರಿಂದ 25ಸಾವಿರ ಮಂದಿ ಸೇರಬೇಕೆಂದು ನಿರೀಕ್ಷಿಸಿದ್ದೆವು. ಆದರೆ, ನಮಗೆ ಜನತೆಯ ಸಂಖ್ಯೆ ಮುಖ್ಯವಾಗಿರಲಿಲ್ಲ. ಸಂಘಪರಿವಾರದ ಪ್ರಯೋಗ ಶಾಲೆಯಾಗಿರುವ ಸ್ಥಳದಲ್ಲಿ ಸಮಾನತೆಯ, ಸೌಹಾರ್ದದ ಬಹುಸಂಸ್ಕೃತಿಯ ಬೀಜವನ್ನು ಬಿತ್ತಬೇಕಾಗಿತ್ತು. ಆ ಬಿತ್ತನೆ ಕಾರ್ಯ ಯಶಸ್ವಿಯಾಗಿದೆ. ವಾರ್ತಾಭಾರತಿ: ಉಡುಪಿ ಚಲೋ ಮುಖಾಂತರ ಸಂಪರ್ಕಕ್ಕೆ ಬಂದಿರುವ ಯುವಕರೊಂದಿಗೆ ಹೇಗೆ ತೊಡಗಿಸಿಕೊಳ್ಳುತ್ತೀರಾ?
-ಉಡುಪಿ ಚಲೋ ಎನ್ನುವುದು ಕೇವಲ ಒಂದು ಸಮಾವೇಶಕ್ಕೆ ಸೀಮಿತ ವಾಗಿಲ್ಲ. ಇದರ ನಂತರ ಪ್ರತಿ ಜಿಲ್ಲೆಯಲ್ಲಿ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರನ್ನು ಒಟ್ಟುಗೂಡಿಸುವಂತಹದ್ದು, ಬಹು ಸಂಸ್ಕೃತಿಯ ಅಗತ್ಯತೆಯ ಕುರಿತು ಜನರಲ್ಲಿ ತಿಳುವಳಿಕೆ ಹಾಗೂ ಪ್ರತಿ ಜಿಲ್ಲೆಯಲ್ಲಿ ಸಮಾವೇಶವನ್ನು ಮಾಡುತ್ತಿದ್ದೇವೆ. ಹೀಗಾಗಿ ಉಡುಪಿ ಚಲೋ ಸಮಾವೇಶದಲ್ಲಿ ಸಂಪರ್ಕಕ್ಕೆ ಬಂದಿರುವ ಯುವ ಜನತೆ, ತಮ್ಮ ತಮ್ಮ ಜಿಲ್ಲೆಗಳಲ್ಲಿ ಜನಪರ ಆಶಯಗಳ ಕುರಿತು ಕೆಲಸ ಮಾಡಲಿದ್ದಾರೆ.
ವಾರ್ತಾಭಾರತಿ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಚಲೋ ಹಾಗೂ ಮುಂದಿನ ದಿನಗಳಲ್ಲಿ ಮಾಡಲು ಉದ್ದೇಶಿಸಿರುವ ಜನಜಾಗೃತಿ ಕಾರ್ಯಕ್ರಮಗಳು ಪ್ರಭಾವ ಬೀರುತ್ತದೆಯೆ?
-ಖಂಡಿತವಾಗಿಯೂ ಪ್ರಭಾವ ಬೀರಲಿದೆ. ಸಂಘಪರಿವಾರದಲ್ಲಿ ಒಳ ಹಾಗೂ ಹೊರಗಿನ ರಾಜಕೀಯ ಬಣ್ಣವನ್ನು ಅರಿಯುವಂತಹ, ವಿಶ್ಲೇಷಿಸುವಂತಹ ಬೌದ್ಧಿಕತೆಯನ್ನು ನಮ್ಮ ಯುವ ಜನತೆ ಅರಿಯಲಿದ್ದಾರೆ. ಈ ಅರಿವಿನ ಮೂಲಕ ಹಳ್ಳಿ, ಹಳ್ಳಿಗಳಿಗೆ ತೆರಳಿ ಮನುವಾದಿಗಳ ಕಪಟ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಜನತೆಯಲ್ಲಿ ಜಾಗೃತಿ ಮೂಡಿಸಲಿದ್ದಾರೆ. ಆ ಮೂಲಕ ನಮ್ಮ ರಾಜಕೀಯ ಶತ್ರು ಹಾಗೂ ಮಿತ್ರರ್ಯಾರು ಎಂಬುದನ್ನು ತಿಳಿಸಿಕೊಡಲಿದ್ದಾರೆ.
ವಾರ್ತಾಭಾರತಿ: ಯುವ ಜನತೆಗೆ ಏನು ಹೇಳಲು ಬಯಸುತ್ತೀರಾ?
-ಸಂಘಪರಿವಾರದ ಹಿಡಿತದಲ್ಲಿರುವ ದೇಶ ಅವನತಿಯತ್ತ ಸಾಗುತ್ತಿದೆ. ಇಂತಹ ಸಂದಿಗ್ಧ ಸಂದರ್ಭದಲ್ಲಿ ಯುವ ಜನತೆಯ ಜವಾಬ್ದಾರಿ ಹೆಚ್ಚಿದೆ. ಮತಾಂಧ ಧರ್ಮಗಳನ್ನು ಹರಡುವ ಸಂಘಟನೆಗಳಿಗೆ ಕಾಲಹರಣ ಮಾಡುವುದಕ್ಕಿಂತ ಸಮಾನತೆಯ, ಸೌಹಾರ್ದದ, ಸಂವಿಧಾನ ಆಶಯಗಳನ್ನು ರಕ್ಷಿಸುವಂತಹ ಮಹತ್ತರವಾದ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿ.

share
ಮಂಜುನಾಥ ದಾಸನಪುರ
ಮಂಜುನಾಥ ದಾಸನಪುರ
Next Story
X