Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಲು ಸಾಲು ರಜೆಗಳ ಎಫೆಕ್ಟ್:...

ಸಾಲು ಸಾಲು ರಜೆಗಳ ಎಫೆಕ್ಟ್: ಎಟಿಎಂಗಳಲ್ಲಿ ಹಣ ಖಾಲಿ

ವಾರ್ತಾಭಾರತಿವಾರ್ತಾಭಾರತಿ12 Oct 2016 9:56 PM IST
share
ಸಾಲು ಸಾಲು ರಜೆಗಳ ಎಫೆಕ್ಟ್: ಎಟಿಎಂಗಳಲ್ಲಿ ಹಣ ಖಾಲಿ

ಶಿವಮೊಗ್ಗ, ಅ. 12: ತಿಂಗಳ ಮೊದಲಾರ್ಧದಲ್ಲಿ ಆಗಮಿಸಿದ ಸಾಲು ಸಾಲು ಸರಕಾರಿ ರಜೆಯ ನೇರ ಎಫೆಕ್ಟ್ ಎಟಿಎಂಗಳ ಮೇಲೆ ಬಿದ್ದಿದೆ. ಎಟಿಎಂ ಕೇಂದ್ರಗಳಿಂದ ಹಣ ಪಡೆಯಲು ಬ್ಯಾಂಕ್ ಗ್ರಾಹಕರು ಅಕ್ಷರಶಃ ಹರಸಾಹಸ ನಡೆಸುವಂತಾಗಿದೆ.

ಇತರೆ ದಿನಗಳಿಗೆ ಹೋಲಿಕೆ ಮಾಡಿದರೆ, ಕಳೆದೆರೆಡು ದಿನಗಳಿಂದ ಎಟಿಎಂಗಳಿಂದ ಹಣ ತೆಗೆದುಕೊಳ್ಳುವ ಗ್ರಾಹಕರ ಸಂಖ್ಯೆ ದುಪ್ಪಟ್ಟಾಗಿದೆ. ಇದರಿಂದ ಶಿವಮೊಗ್ಗ ನಗರ ಹಾಗೂ ಜಿಲ್ಲೆಯ ಪ್ರಮುಖ ಬ್ಯಾಂಕ್‌ಗಳ ಎಟಿಎಂಗಳು ಹಣವಿಲ್ಲದೆ ಬರಿದಾಗಿರುವ ಮಾಹಿತಿಗಳು ಸಾರ್ವಜನಿಕರಿಂದ ಕೇಳಿಬರುತ್ತಿವೆ. ಪ್ರಮುಖ ಬ್ಯಾಂಕ್ ಸೇರಿದಂತೆ ಇತರೆ ಎಲ್ಲ ಬ್ಯಾಂಕ್‌ಗಳ ಎಟಿಎಂಗಳಲ್ಲಿ ಗ್ರಾಹಕರು ಹಣಕ್ಕಾಗಿ ತಮ್ಮ ಕ್ರೆಡಿಟ್, ಡಿಬಿಟ್ ಕಾರ್ಡ್‌ಗಳನ್ನು ತೂರಿಸಿದರೇ, ಎಟಿಎಂ. ಸ್ಕ್ರೀನ್‌ನಲ್ಲಿ ಹಣ ಲಭ್ಯವಿಲ್ಲ ಎಂಬ ಸಂದೇಶ ಬರುತ್ತಿದೆ. ಇದರಿಂದ ಗ್ರಾಹಕರು ಎಟಿಎಂಗಳಿಂದ ನಿರಾಸೆಯಿಂದ ಹಿಂದಿರುಗುತ್ತಿರುವ ದೃಶ್ಯ ಹಲವೆಡೆ ಕಂಡುಬರುತ್ತಿದೆ.

ರಜೆಯ ಸಾಲು: ಅ. 8 ಎರಡನೆ ಶನಿವಾರ, ಅ.9 ರವಿವಾರ, ಅ. 10 ಸೋಮವಾರ ಅ.11 ಮಂಗಳವಾರ ಕ್ರಮವಾಗಿ ಆಯುಧ ಪೂಜೆ, ವಿಜಯದಶಮಿ ಹಾಗೂ ಅ. 12 ಮೊಹರಂ ಕಡೆಯ ದಿನದ ಅಂಗವಾಗಿ ಬ್ಯಾಂಕ್‌ಗಳಿಗೆ ರಜೆಯಿತ್ತು. ಸಾಲು ಸಾಲು ರಜೆಯ ಮೋಜು ಅನುಭವಿಸಲು ಪ್ರವಾಸ, ಧಾರ್ಮಿಕ ಕ್ಷೇತ್ರಗಳ ಪ್ರಯಾಣ, ಬಂಧು ಬಳಗದವರನ್ನು ಭೆೇಟಿಯಾಗಲು ತೆರಳುವವರು ಸೇರಿದಂತೆ ವಿವಿಧ ಕಾರಣಗಳಿಗಾಗಿ ಪ್ರಯಾಣ ಬೆಳೆಸುವವರ ಸಂಖ್ಯೆ ಹೆಚ್ಚಿದೆ. ಪ್ರಸ್ತುತ ಏಕಕಾಲಕ್ಕೆ ಐದು ದಿವಸಗಳ ರಜೆ ಬಂದಿದೆ. ಜೊತೆಗೆ ಹಬ್ಬಗಳ ಸಂಭ್ರಮ ಬೇರೆ. ಇದರಿಂದ ಎಟಿಎಂಗಳಿಂದ ಹಣ ಡ್ರಾ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ ಎಟಿಎಂಗಳಲ್ಲಿ ಹಣವಿಲ್ಲದೆ ಬರಿದಾಗಿರುವ ಸಾಧ್ಯತೆಯಿದೆ ಎಂದು ಬ್ಯಾಂಕ್ ಉದ್ಯೋಗಿಯೋರ್ವರು ಹೇಳುತ್ತಾರೆ. ‘ಕಳೆದೆರೆಡು ದಿನಗಳಿಂದ ಎ.ಟಿ.ಎಂ.ನಿಂದ ಹಣ ತೆಗೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಎ.ಟಿ.ಎಂ.ನಲ್ಲಿ ಹಣ ಬರಿದಾಗಿದೆ. ಗ್ರಾಹಕರಿಗೆ ಹಣವಿಲ್ಲವೆಂದು ಹೇಳಿ ಹೇಳಿ ತಮಗೆ ಸಾಕಾಗಿ ಹೋಗಿದೆ’ ಎಂದು ಎಟಿಎಂವೊಂದರ ಕಾವಲುಗಾರ ತನ್ನ ಅಳಲು ತೋಡಿಕೊಳ್ಳುತ್ತಾನೆ. ‘ಸುರಕ್ಷತೆಯ ದೃಷ್ಟಿಯಿಂದ ತಮ್ಮ ಬಳಿ ಹಣ ಇಟ್ಟುಕೊಳ್ಳುವುದಿಲ್ಲ. ಅಗತ್ಯವಿರುವ ಹಣವನ್ನು ಎಟಿಎಂಗಳ ಮೂಲಕ ಪಡೆದುಕೊಳ್ಳುತ್ತೇನೆ. ಆದರೆ ನಗರದ ಕೆಲ ಎಟಿಎಂಗಳಲ್ಲಿ ಹಣ ಖಾಲಿಯಾಗಿದೆ’ ಎಂದು ನಾಗರಿಕರೊಬ್ಬರು ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X