Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 9-11 ಖಾತೆ ಮ್ಯುಟೇಷನ್ ವಿಭಾಗ ಸರಿಪಡಿಸಲು...

9-11 ಖಾತೆ ಮ್ಯುಟೇಷನ್ ವಿಭಾಗ ಸರಿಪಡಿಸಲು ಸಿಎಂಗೆ ಸಾರ್ವಜನಿಕರ ಮನವಿ

ವಾರ್ತಾಭಾರತಿವಾರ್ತಾಭಾರತಿ12 Oct 2016 10:02 PM IST
share

ಉಪ್ಪಿನಂಗಡಿ, ಅ.12: 9-11 ಮುಖಾಂತರ ಖರೀದಿಸಿರುವ ಜಾಗದ ಮ್ಯುಟೇಷನ್ ಯಾ ಖಾತೆಯಾಗುವ ಪ್ರಕ್ರಿಯೆ ಕಳೆದ ಗ್ರಾಮ ಪಂಚಾಯತ್ ಚುನಾವಣೆ ಬಳಿಕ ಸ್ಥಗಿತಗೊಂಡಿದ್ದು ಇದರಿಂದಾಗಿ ಬಡವರು ತೀರಾ ಸಮಸ್ಯೆ ಎದುರಿಸುವಂತಾಗಿದ್ದು, ಇದನ್ನು ಶೀಘ್ರ ಬಗೆಹರಿಸುವಂತೆ ಕೊಲ ಗ್ರಾಮಸ್ಥರು ಮುಖ್ಯಮಂತ್ರಿಯನ್ನು ಆಗ್ರಹಿಸಿದ್ದಾರೆ.

ಈ ಸಮಸ್ಯೆಯಿಂದಾಗಿ ಮನೆ ನಿರ್ಮಾಣ ಸಾಲ ಅಥವಾ ಅಡಮಾನ ಸಾಲ ಮಾಡಲು ಬ್ಯಾಂಕಿಗೆ ಹೋದರೆ ಮ್ಯುಟೇಷನ್ ಖಾತೆ ತರಬೇಕು ಎಂದು ಹೇಳಿ ವಾಪಸ್ ಕಳುಹಿಸುತ್ತಿದ್ದು, ಈ ಬಗ್ಗೆ ಗ್ರಾಮ ಪಂಚಾಯತ್‌ಗಳಲ್ಲಿ ಕೇಳಿದರೆ ತಾಂತ್ರಿಕ ದೋಷದಿಂದ ತೆಗೆಯಲು ಆಗುವುದಿಲ್ಲ ಎಂದು ತಿಳಿಸುತ್ತಿದ್ದಾರೆ. ಹೀಗಾಗಿ ಸಮಸ್ಯೆ ತೀರಾ ಜಟಿಲಗೊಂಡಿದ್ದು, ಇದರಿಂದಾಗುವ ಸಮಸ್ಯೆ ಸರಿಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

1997-98ರ ಬಳಿಕ ಪಡೆದ ಕದೀಂ ವರ್ಗ ಕೃಷಿ ಕೃತಾವಳಿ ಭೂಮಿ ಖುಷ್ಕಿ ಜಾಗದ ಕಾಡು ಬಾಣೆ ಜಾಗ ಖರೀದಿ ಮಾಡಿದವರ ಹೆಸರಿನಲ್ಲಿ ಅಕ್ರಮ ಸಕ್ರಮದಡಿ ಫಾರಂ ನಂಬರ್ 50 ಮತ್ತು 53ರಲ್ಲಿ ಅರ್ಜಿ ಕೊಟ್ಟಿದ್ದು, ಕೃಷಿ ಜಾಗವನ್ನು ಸಕ್ರಮ ಮಾಡಲು ಸರಕಾರದ ತಡೆ ಇದ್ದ ಕಾರಣ ಈ ತನಕ ಮಂಜೂರು ಆಗಿರುವುದಿಲ್ಲ. ಹೀಗಾಗಿ ಖರೀದಿ ಮಾಡಿದವರ ಹೆಸರಿನಲ್ಲಿ ಯಾವುದೇ ಅಕ್ರಮ-ಸಕ್ರಮ ಅರ್ಜಿ ಸಲ್ಲಿಕೆ ಆಗಿರುವುದಿಲ್ಲ, ಹಾಗೂ ಬಹುತೇಕ ರೈತರು ತಿಳುವಳಿಕೆ ಕೊರತೆಯಿಂದ ಅಕ್ರಮ-ಸಕ್ರಮ ಅರ್ಜಿ ಕೊಡದೆ ಬಾಕಿಯಾಗಿರುತ್ತಾರೆ. ಆದ ಕಾರಣ ಈ ಸಮಸ್ಯೆಯಲ್ಲಿ ಸಿಲುಕಿರುವ ರೈತರಿಗೆ ಅನುಕೂಲ ಆಗುವ ಸಲುವಾಗಿ ಕೃಷಿ ರೈತರಿಗೆ ಅಕ್ರಮ ಸಕ್ರಮದ ಅಡಿಯಲ್ಲಿ ಅರ್ಜಿ ಕೊಡಲು ಅವಕಾಶ ಕಲ್ಪಿಸಿ ಕಂದಾಯ ಇಲಾಖೆಗೆ ಶಿಫಾರಸ್ಸು ಮಾಡುವಂತೆ ಮುಖ್ಯಮಂತ್ರಿಯನ್ನು ಆಗ್ರಹಿಸಿದ್ದಾರೆ.

ಅದಾಗ್ಯೂ ರೈತರ ತೋಟಗಳಿಗೆ ಕೊಳವೆ ಬಾವಿ ತೆರೆಯಲು ಮತ್ತು ವಿದ್ಯುತ್ ಸಕ್ರಮಗೊಳಿಸಲು ಅವಕಾಶ ಒದಗಿಸಿಕೊಡಬೇಕಾಗಿಯೂ ಮನವಿಯಲ್ಲಿ ತಿಳಿಸಲಾಗಿದೆ.

ಕೊಯ್ಲದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ನೀಡಿದ ನಿಯೋಗದಲ್ಲಿ ಗಂಡಿಬಾಗಿಲು ಶಾಲಾಭಿವೃದ್ಧಿ ಸಮಿತಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಅಬ್ದುಲ್ ರಶೀದ್ ಹಾಜಿ ಬಡ್ಡಮೆ, ಕೃಷಿಕರಾದ ಪಿ.ಎಸ್. ಶಿವಶಂಕರ್ ಭಟ್, ಪಿ. ಯಾಕೂಬ್, ಹಸನಬ್ಬ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X