Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗಂಜಿಕೇಂದ್ರ ಸ್ಥಗಿತ : ತಹಶೀಲ್ದಾರ್...

ಗಂಜಿಕೇಂದ್ರ ಸ್ಥಗಿತ : ತಹಶೀಲ್ದಾರ್ ವಿರುದ್ಧ ನಿರಾಶ್ರಿತರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ12 Oct 2016 10:29 PM IST
share
ಗಂಜಿಕೇಂದ್ರ ಸ್ಥಗಿತ : ತಹಶೀಲ್ದಾರ್ ವಿರುದ್ಧ ನಿರಾಶ್ರಿತರ ಪ್ರತಿಭಟನೆ

ಅಂಕೋಲಾ,ಅ.12: ಕೇಣಿಯ ಗಾಂವ್ಕರವಾಡದಲ್ಲಿ ಮಳೆಯ ತೀವ್ರತೆಗೆ ಹಳ್ಳ ತುಂಬಿದ ಪರಿಣಾಮ ಸುಮಾರು 40ಕ್ಕೂ ಅಧಿಕ ಮನೆಗಳು ಜಲಾವೃತಗೊಂಡು ನಿರಾಶ್ರಿತರಾದ ಸ್ಥಳೀಯರಿಗೆ ತಾಲೂಕು ಆಡಳಿತದಿಂದ ಮಂಗಳವಾರ ಕೇಣಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಂಜಿಕೇಂದ್ರ ಆರಂಭಿಸಿದ್ದರು. ಆದರೆ ಬುಧವಾರ ಇದ್ದಕ್ಕಿದ್ದಂತೆಯೇ ಗಂಜಿಕೇಂದ್ರ ಸ್ಥಗಿತಗೊಳಿಸಿದ್ದರಿಂದ ರೊಚ್ಚಿಗೆದ್ದ ಸ್ಥಳೀಯ ನಿರಾಶ್ರಿತರು ತಹಶೀಲ್ದಾರರ ವಿರುದ್ಧ ಧಿಕ್ಕಾರ ಕೂಗಿ ಬುಧವಾರ ಪ್ರತಿಭಟನೆ ನಡೆಸಿದ್ದಾರೆ.

ಹಿಂದೆಂದೂ ಕಂಡುಬರದ ಕೇಣಿ ಹಳ್ಳವು ಮಂಗಳವಾರ ಬೆಳಗಿನಜಾವ ಮಳೆಯ ತೀವ್ರತೆಗೆ ಉಕ್ಕಿದ ಪರಿಣಾಮ ಹಲವು ಮನೆಗಳಿಗೆ ನೀರು ನುಗ್ಗಿ ಬಹುತೇಕ ಸಾಮಗ್ರಿಗಳು ಹಾನಿಗೊಳಗಾಗಿದ್ದವು. ಇತರ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದವರು ಇಲ್ಲಿಯ ಜನರನ್ನು ಮಂಗಳವಾರ ಬೆಳಗಿನಜಾವವೇ ಸ್ಥಳಾಂತರಿಸಿ 40 ಕುಟುಂಬದ 150ಕ್ಕೂ ಅಧಿಕ ಸದಸ್ಯರಿಗೆ ತಾಲ್ಲೂಕ ಆಡಳಿತದಿಂದ ಗಂಜಿ ಕೇಂದ್ರವನ್ನು ಆರಂಭಿಸಿಲಾಯಿತು.

ಇದ್ದಕ್ಕಿಂತೆಯೇ ತಾಲೂಕು ಆಡಳಿತ ಗಂಜಿ ಕೇಂದ್ರವನ್ನು ಸ್ಥಗಿತಗೊಳಿಸಿದ್ದರಿಂದ ಸ್ಥಳೀಯ ಪುರಸಭೆ ಸದಸ್ಯ ಸಂದೀಪ ಬಂಟ ಅವರು ಬೆಳಗಿನ ಉಪಹಾರ ಮತ್ತು ಚಹಾ ವ್ಯವಸ್ಥೆ ಕಲ್ಪಿಸಿದ್ದರು. ಮಧ್ಯಾಹ್ನದ ಊಟಕ್ಕೂ ಕೂಡ ಇವರು ಸಾಮಗ್ರಿ ಪೂರೈಸಿದ್ದರು. ಆದರೆ ತಾಲೂಕಾಡಳಿತದ ಈ ಕ್ರಮವನ್ನು ಖಂಡಿಸಿ ತಹಶೀಲ್ದಾರರು ಗಂಜಿಕೇಂದ್ರಕ್ಕೆ ಆಗಮಿಸುವಂತೆ ಒತ್ತಾಯಿಸಿದರು.

ಪುರಸಭೆ ಸದಸ್ಯ ಸಂದೀಪ ಬಂಟ ತಹಶೀಲ್ದಾರ ಕಚೇರಿಗೆ ಆಗಮಿಸಿ, ಸ್ಥಳಕ್ಕೆ ಭೇಟಿ ನೀಡುವಂತೆ ವಿನಂತಿಸಿ ಕೊಂಡರೂ ಕೂಡ ಭೇಟಿ ನೀಡುವ ವಿನಯತೆಯನ್ನೂ ತೋರದೆ ಈಗ ಬಿಸಿಲು ಬಿದ್ದಿದ್ದು, ಗಂಜಿಕೇಂದ್ರವನ್ನು ಸ್ಥಗಿತಗೊಳಿಸಲಾಗಿದೆ ಎಂದು ತಮ್ಮ ಅಸಡ್ಡೆಯನ್ನು ಹೊರಹಾಕಿ ವಾಹನವೇರಿ ಕಚೇರಿಯಿಂದ ತೆರಳಿದರು. ಈ ವಿಷಯವನ್ನು ತಿಳಿದ ನೂರಾರು ನಿರಾಶ್ರಿತರು ತಹಶೀಲ್ದಾರ ಕಚೇರಿಗೆ ಆಗಮಿಸಿ ಅವರ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ಬಿಸಿ ತಟ್ಟಿದ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ತಹಶೀಲ್ದಾರ ವಿ.ಜಿ. ಲಾಂಜೇಕರ ಅವರು ತಮ್ಮ ಕ್ರಮದಿಂದ ನುಣುಚಿಕೊಳ್ಳಲು ಪ್ರಯತ್ನಿಸಿದರಾದರೂ ಸ್ಥಳೀಯರು ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ನಿರಾಶ್ರಿತರ ಒತ್ತಡಕ್ಕೆ ಮಣಿದು ಗಂಜಿಕೇಂದ್ರಕ್ಕೆ ತೆರಳಿ ನಿರಾಶ್ರಿತರ ಮನೆಗಳು ಸ್ವಚ್ಛಗೊಳ್ಳುವವರೆಗೂ ಗಂಜಿಕೇಂದ್ರವನ್ನು ಮುಂದುವರಿಸುವುದಾಗಿ ಭರವಸೆ ನೀಡಿ ಅಲ್ಲಿಂದ ಕಾಲ್ಕಿತ್ತರು. ತಹಶೀಲ್ದಾರರ ಕ್ರಮವನ್ನು ವಿವಿಧ ಪಕ್ಷದ ಪ್ರಮುಖರು ಖಂಡಿಸಿದ್ದಾರೆ.

ಪುರಸಭೆ ಸದಸ್ಯ ಸಂದೀಪ ಬಂಟ, ಪ್ರಮುಖರಾದ ಯಾದು ಗಾಂವ್ಕರ, ಬೀದಿ ಗಾಂವ್ಕರ, ಲೋಕೇಶ ಗಾಂವ್ಕರ, ಸುಜಾತಾ ಗಾಂವ್ಕರ, ಅರುಣ್ ಗಾಂವ್ಕರ, ಪುತ್ತು ಗಾಂವ್ಕರ, ಶಂಕರ ಗಾಂವ್ಕರ, ಭವಾನಿ ಗಾಂವ್ಕರ, ಸುಮಿತ್ರಾ ಗಣಪತಿ ಗಾಂವ್ಕರ, ಸುವರ್ಣ ಗಾಂವ್ಕರ, ಮಹೇಶ ಗಾಂವ್ಕರ, ಧಾಕು ನಾಯ್ಕ, ಶಿವಾನಂದ ಗಾಂವ್ಕರ ಮತ್ತಿತರರು ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X