Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಹದಾಯಿ; ಅ.21ರ ಸಭೆ ಫಲಪ್ರದ: ಸಿಎಂ...

ಮಹದಾಯಿ; ಅ.21ರ ಸಭೆ ಫಲಪ್ರದ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ವಾರ್ತಾಭಾರತಿವಾರ್ತಾಭಾರತಿ13 Oct 2016 1:55 PM IST
share
ಮಹದಾಯಿ; ಅ.21ರ ಸಭೆ ಫಲಪ್ರದ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ಬೆಂಗಳೂರು, ಅ.13: ಮಹದಾಯಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿ ಅ. 21ರಂದು ಮುಂಬಯಿಯಲ್ಲಿ ನಡೆಯಲಿರುವ ಸಭೆ ಫಲಪ್ರದವಾಗಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ. ವಾರ್ತಾಭಾರತಿ ಪತ್ರಿಕೆಯ 14ನೆ ವಾರ್ಷಿಕೋತ್ಸವದ ಅಂಗವಾಗಿ ಹೊರತಂದ ವಿಶೇಷಾಂಕವನ್ನು ಬಿಡುಗಡೆ ಮಾಡಿದ ಬಳಿಕ ಮುಖ್ಯಮಂತ್ರಿಯವರು ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು. ಮಹದಾಯಿ ನದಿ ನೀರಿನ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವುದು ಸೂಕ್ತ ಎಂದು ನ್ಯಾಯ ಮಂಡಳಿ ಸಲಹೆ ನೀಡಿದೆ. ಈ ಹಿನ್ನೆಲೆಯಲ್ಲಿ ಗೋವಾ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಪತ್ರ ಬರೆದು, ದೂರವಾಣಿ ಮೂಲಕವೂ ಮಾತುಕತೆ ನಡೆಸಿ ಸಭೆ ನಡೆಸಲು ಮನವಿ ಮಾಡಿದ್ದೆ. ಜೊತೆಗೆ ಗೋವಾ ಅಥವಾ ಮಹಾರಾಷ್ಟ್ರ ಮುಖ್ಯಮಂತ್ರಿಯವರು ಸಭೆ ಆಯೋಜಿಸಿದರೂ ಪಾಲ್ಗೊಳ್ಳುವುದಾಗಿ ತಿಳಿಸಿದ್ದೆ. ಹೀಗಾಗಿ ಮಹಾರಾಷ್ಟ್ರ ಮುಖ್ಯಮಂತ್ರಿಯವರೇ ಸಭೆ ಆಯೋಜಿಸಿದ್ದಾರೆ. ಈ ಸಭೆಗೆ ಪೂರ್ವಭಾವಿಯಾಗಿ 19ರಂದು ತಾವು ಸರ್ವಪಕ್ಷ ಸಭೆ ಕರೆದಿರುವುದಾಗಿ ಸಿಎಂ ತಿಳಿಸಿದರು. ಮಹದಾಯಿ ನದಿಯಿಂದ ಹನಿ ನೀರನ್ನೂ ಕರ್ನಾಟಕಕ್ಕೆ ಬಿಡುವುದಿಲ್ಲ ಎಂದು ಗೋವಾದ ಕಾಂಗ್ರೆಸ್ ನಾಯಕರು ಹೇಳಿಕೆ ನೀಡಿರುವ ಕುರಿತು ಸುದ್ದಿಗಾರರು ಪ್ರಶ್ನಿಸಿದಾಗ, ಯಾರೋ ವಿರೋಧ ಮಾಡಿದ್ದಾರೆ ಎಂಬುದು ಪ್ರಶ್ನೆಯಲ್ಲ. ನ್ಯಾಯ ಮಂಡಳಿ ಸಲಹೆ ಮೇರೆಗೆ ಸಭೆ ನಡೆಯುತ್ತಿದೆ. ಸಭೆಗೆ ಮುನ್ನ ಗೋವಾ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳೂ ಅಲ್ಲಿ ಸರ್ವಪಕ್ಷ ಮುಖಂಡರ ಸಭೆ ನಡೆಸಿ ಎಲ್ಲರ ಸಹಕಾರ ಪಡೆದುಕೊಂಡೇ ಸಭೆಗೆ ಬರಲಿದ್ದಾರೆ ಎಂದು ಹೇಳಿದರು. ಇದು ಮೊದಲ ಸಭೆ. ಹೀಗಾಗಿ ಯಾರು ಏನೇ ಹೇಳಿದರೂ ಸಭೆಯಲ್ಲಿ ಎಲ್ಲದರ ಬಗ್ಗೆ ಸಮಗ್ರವಾಗಿ ಚರ್ಚೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ತಿಳಿಸಿದರು. ರಾಜ್ಯ ಬಿಜೆಪಿ ನಾಯಕರು ಮಹಾರಾಷ್ಟ್ರ ಮುಖ್ಯಮಂತ್ರಿಯವರ ಜೊತೆ ಮಾತುಕತೆ ನಡೆಸಿರುವ ಕುರಿತು ಪತ್ರಕರ್ತರು ಗಮನಸೆಳೆದಾಗ, ವಿವಾದ ಇರುವುದು ಗೋವಾದ ಜೊತೆಗೆ. ಹೀಗಾಗಿ ಆ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸುವುದು ಸೂಕ್ತ. ಇಷ್ಟಕ್ಕೂ ಈ ಬಗ್ಗೆ ಆರಂಭದಲ್ಲೇ ವಿವಾದ ಸೃಷ್ಟಿ ಮಾಡಲು ತನಗೆ ಇಷ್ಟವಿಲ್ಲ. ಮಾತುಕತೆ ಫಲಪ್ರದವಾಗಲಿ ಎಂಬುದು ತಮ್ಮ ಬಯಕೆ. ಎಲ್ಲರೂ ಹಾರೈಕೆಯೂ ಆದೇ ಆಗಿರಬೇಕು ಎಂದರು. ಕಾವೇರಿ ಜಲ ವಿವಾದ ವಿಚಾರದಲ್ಲಿ ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾಭಾರತಿ ಸಭೆ ಕರೆದಾಗ ತಾವು ಸರ್ವಪಕ್ಷ ಮುಖಂಡರ ಜೊತೆ ಚರ್ಚಿಸಿಯೇ ಅಲ್ಲಿಗೆ ಹೋಗಿದ್ದು. ಇಷ್ಟಕ್ಕೂ ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಒಂದೇ ಅಲ್ಲ, ಬೇರೆ ಬೇರೆ ಪಕ್ಷಗಳೂ ಇವೆ ಎಂದು ಹೇಳಿದರು. ಕಾವೇರಿ ಜಲ ವಿವಾದದ ವಿಷಯದಲ್ಲಿ ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಅಧ್ಯಯನ ನಡೆಸಲು ತಮಿಳುನಾಡಿಗೆ ಹೋಗಿದ್ದ ತಂಡಕ್ಕೆ ಅಲ್ಲಿಯ ಅಧಿಕಾರಿಗಳು ತಪ್ಪು ಮಾಹಿತಿ ನೀಡಿದ್ದಾರೆ ಎಂದು ಭಾವಿಸುವುದಿಲ್ಲ. ವಾಸ್ತವ ಸ್ಥಿತಿ ಅರಿಯಲು ಹೋದಾಗ ತಪ್ಪುಮಾಹಿತಿ ನೀಡಲು ಹೇಗೆ ಸಾಧ್ಯ ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು. ಕಾವೇರಿ ಜಲ ವಿವಾದ ಸಂಬಂಧ ಮುಖ್ಯ ಅರ್ಜಿ ಸುಪ್ರೀಂಕೋರ್ಟ್‌ನಲ್ಲಿ ಅ.18ರಂದು ವಿಚಾರಣೆಗೆ ಬರಲಿದೆ. ಈ ಸಂಬಂಧ ರಾಜ್ಯದ ಜಲ ಸಂಪನ್ಮೂಲ ಮತ್ತು ಕಾನೂನು ಇಲಾಖೆ ಅಧಿಕಾರಿಗಳು ಪೂರ್ವ ತಯಾರಿ ನಡೆಸಿದ್ದಾರೆ ಎಂದರು. ಬೆಂಗಳೂರಿನಲ್ಲಿ ಉಕ್ಕಿನ ಸೇತುವೆ ನಿರ್ಮಾಣ ಸಂಬಂಧ ಬಂದಿರುವ ಎಲ್ಲ ಆಕ್ಷೇಪಣೆಗಳ ಬಗ್ಗೆ ಪರಿಶೀಲಿಸುತ್ತೇವೆ. ಜೊತೆಗೆ ಸೇತುವೆ ನಿರ್ಮಾಣ ಕುರಿತಾದ ಎಲ್ಲ ವಿವರಗಳನ್ನೂ ವೆಬ್ಸೈಟ್

 
ನಲ್ಲಿ ಅಳವಡಿಸಲಾಗಿದೆ ಎಂದು ಹೇಳಿದ ಮುಖ್ಯಮಂತ್ರಿಯವರು, ಶಾಸಕ ಸ್ಥಾನಕ್ಕೆ ರಾಜೀನಾಮೆ ಕುರಿತು ಶ್ರೀನಿವಾಸ ಪ್ರಸಾದ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಇದಕ್ಕೂ ಮುನ್ನ ವಾರ್ತಾಭಾರತಿಯ ವಿಶೇಷಾಂಕ ಬಿಡುಗಡೆ ಮಾಡಿ ಮಾತನಾಡಿದ ಮುಖ್ಯಮಂತ್ರಿಯವರು, ವಿದ್ಯುನ್ಮಾನ ಮಾಧ್ಯಮಗಳ ಸಂಖ್ಯೆ ಹೆಚ್ಚಾದರೂ ಜನ ಪತ್ರಿಕೆ ಓದುವ ಹವ್ಯಾಸ ಮತ್ತು ಆಭ್ಯಾಸದಿಂದ ದೂರವಾಗಿಲ್ಲ. ಜೊತೆಗೆ ಮುದ್ರಣ ಮಾಧ್ಯಮದ ಮಹತ್ವವೂ ಕಡಿಮೆಯಾಗಿಲ್ಲ ಎಂದು ಹೇಳಿದರು. ಪತ್ರಿಕೆಗಳು ಮೌಲ್ಯಯುತ ಮತ್ತು ಸಮಾಜಮುಖಿಯಾದ ಸುದ್ದಿಗಳನ್ನು ಪ್ರಕಟಿಸಬೇಕು. ಪತ್ರಿಕೋದ್ಯಮ ಎಂದರೆ ಅದು ತನಿಖೆ ಆಧಾರಿತವಾಗಿರಬೇಕು. ಆದರೆ, ಇಂದಿನ ದಿನಗಳಲ್ಲಿ ಊಹಾ ಪತ್ರಿಕೋದ್ಯಮ ಹೊಸದಾಗಿ ಶುರುವಾಗಿದೆ. ಇದರಿಂದ ಸತ್ಯ ಮತ್ತು ಅಸತ್ಯತೆ ತಿಳಿಯುವುದಿಲ್ಲ. ಸತ್ಯಕ್ಕೆ ಹತ್ತಿರವಾದ ಸುದ್ದಿಗಳನ್ನು ಮಾತ್ರ ಪತ್ರಿಕೆಗಳು ಜನರ ಮುಂದಿಡಬೇಕು. ಆ ದಿಕ್ಕಿನಲ್ಲಿ ‘ವಾರ್ತಾಭಾರತಿ’ ಕೆಲಸ ಮಾಡಲಿ ಎಂದು ಹಾರೈಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X