Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ...

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಸಂಘಟನೆಗಳ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ13 Oct 2016 5:01 PM IST
share
ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಸಂಘಟನೆಗಳ ಆಗ್ರಹ

ಮಂಗಳೂರು, ಅ.13: ನಗರದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಸಂಚಾರಿ ಪೀಠ ಆರಂಭಿಸಬೇಕು ಎಂದು ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳ ವಕೀಲರ ಸಂಘಟನೆಗಳು ಸರಕಾರವನ್ನು ಆಗ್ರಹಿಸಿವೆ.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಂಗಳೂರು ಬಾರ್ ಅಸೋಸಿಯೇಶನ್ ಅಧ್ಯಕ್ಷ ಎಸ್.ಪಿ.ಚೆಂಗಪ್ಪ, ಸ್ಮಾರ್ಟ್ ಸಿಟಿಯಾಗಿರುವ ಮಂಗಳೂರಿಗೆ ಸಂಚಾರಿ ಪೀಠ ಅನಿವಾರ್ಯ ಎಂದು ಹೇಳಿದರು.

ಸಂಚಾರಿ ಪೀಠ ಸ್ಥಾಪನೆಗಾಗಿ ಈಗಾಗಲೇ ದೇಶದ ಮುಖ್ಯ ನ್ಯಾಯಾಧೀಶರು, ರಾಜ್ಯ ಮುಖ್ಯ ನ್ಯಾಯಾಧೀಶರು, ಸಿಎಂ ಮತ್ತಿತರರಿಗೆ ಮನವಿ ಸಲ್ಲಿಸಲಾಗಿದೆ. ವಕೀಲರೇ ಆಗಿರುವ ಐವನ್ ಡಿಸೋಜ, ಯು.ಟಿ.ಖಾದರ್, ಎಂ.ವೀರಪ್ಪ ಮೊಯ್ಲಿ, ಡಿ.ವಿ.ಸದಾನಂದ ಗೌಡ ಮೊದಲಾದ ನಾಯಕರು ತಮ್ಮ ಪರವಾಗಿದ್ದಾರೆ. ಮುಂದಿನ ದಿನಗಳಲ್ಲಿ ವಿವಿಧ ಸಂಘಟನೆಗಳ ಜತೆಗೂಡಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಚೆಂಗಪ್ಪ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ ಹಿಂದುಳಿದ ಪ್ರದೇಶದ ಜನರು ಮತ್ತು ನೆರೆಯ ಜಿಲ್ಲೆಗಳ ಗ್ರಾಮೀಣ ಪ್ರದೇಶದ ಜನರಿಗೆ ಕಾನೂನು ಕೈಗೆಟುಕದ ಮಾತಾಗಿದೆ. ಈ ಪ್ರದೇಶದ ಜನರು ತಾಲೂಕು ಮಟ್ಟದ ನ್ಯಾಯಾಲಯಗಳಿಂದ ಜಿಲ್ಲಾ ಮಟ್ಟಕ್ಕೆ ಬರುವುದೇ ದುಸ್ತರವಾಗಿದ್ದು, ಉಚ್ಚ ನ್ಯಾಯಾಲಯದ ಕದ ತಟ್ಟುವುದು ಕನಸಿನ ಮಾತು. ಇದರಿಂದ ನ್ಯಾಯ ಉಳ್ಳವರ ಪಾಲಾಗುವ ಸಾಧ್ಯತೆ ಹೆಚ್ಚು. ಇಲ್ಲೇ ಪೀಠ ಸ್ಥಾಪನೆಯಾದರೆ ಹೆಚ್ಚಿನ ಖರ್ಚು, ಸಮಯ, ಪ್ರಯಾಣದ ತ್ರಾಸ ಉಳಿಸಬಹುದು ಎಂದು ಅವರು ಹೇಳಿದರು.

ಕಲ್ಯಾಣ ನಿಧಿ ಹೆಚ್ಚಿಸಲು ಮನವಿ

ಕರ್ನಾಟಕ ನ್ಯಾಯವಾದಿಗಳ ಕಲ್ಯಾಣ ಅಧಿನಿಯಮ 1983ಕ್ಕೆ ತಿದ್ದುಪಡಿ ತರುವ ಮೂಲಕ ವಕೀಲರಿಗೆ ಅನ್ಯಾಯವಾಗಿದೆ. ಈ ವಿಧೇಯಕದಲ್ಲಿ ತಂದಿರುವ ವೈದ್ಯಕೀಯ ವೆಚ್ಚಕ್ಕೆ ಸಂಬಂಧಿಸಿ ತಿದ್ದುಪಡಿಯು ವಕೀಲರ ಸ್ವಾಸ್ಥ್ಯ ಹದಗೆಡಿಸುವಂತಿದೆ. ಈ ಸಮಸ್ಯೆ ಪರಿಹರಿಸಿ ರಾಜ್ಯ ವಕೀಲರ ಪರಿಷತ್ ಸದಸ್ಯರಿಗೆ ಸಮಾನವಾಗಿ ಕನಿಷ್ಠ 10 ಲಕ್ಷ ರೂ. ಪರಿಹಾರ ನಿಧಿ ಕೊಡಬೇಕು.

15 ವರ್ಷ ವೃತ್ತಿ ಪೂರೈಸಿರುವ ಸದಸ್ಯ ಪ್ರತಿವರ್ಷ ಡಿಸೆಂಬರ್‌ನಲ್ಲಿ ಒಂದು ಸಾವಿರ ರೂ. ಹಾಗೂ ಅವಧಿ ಪೂರ್ಣಗೊಳಿಸಿದ ವಕೀಲ ಡಿಸೆಂಬರ್‌ನಲ್ಲಿ 500 ರೂ. ಸಂದಾಯ ಮಾಡಬೇಕು ಎನ್ನುವ ಕ್ರಮವನ್ನು ಕೈಬಿಡಬೇಕು. ಅತ್ಯಂತ ಕ್ಲಪ್ತ ಸಮಯದಲ್ಲಿ ಪರಿಹಾರ ಬಿಡುಗಡೆ ಮಾಡಬೇಕು ಎಂದು ಅವರು ಮನವಿ ಮಾಡಿದರು.

ಸರಕಾರ ಯುವ ವಕೀಲರಿಗೆ ನೀಡುವ ಪ್ರೋತ್ಸಾಹ ಧನವನ್ನು 24 ತಿಂಗಳಿಗೆ ಮಾತ್ರ ಮೀಸಲಿರಿಸದೆ, ಕನಿಷ್ಠ 36 ತಿಂಗಳಿಗೆ ವಿಸ್ತರಿಸಬೇಕು. ಕಾನೂನು ಪದವೀಧರರಿಗೆ ಪ್ರೋತ್ಸಾಹ ಧನ, ಅವಧಿ ಹೆಚ್ಚಿಸಬೇಕು ಮತ್ತು ಪ್ರೋತ್ಸಾಹ ಧನ ಕೊಡಲು ನಿಗದಿತ 40 ಸಾವಿರ ರೂ. ಆದಾಯ ಮಿತಿ ತೆಗೆದು ಹಾಕಬೇಕು ಎಂದು ಅವರು ಈ ಸಂದರ್ಭ ಒತ್ತಾಯಿಸಿದರು.

ಗೋಷ್ಠಿಯಲ್ಲಿ ಮಂಗಳೂರು ವಕೀಲರ ಸಂಘದ ಉಪಾಧ್ಯಕ್ಷ ಯಶೋದರ ಕರ್ಕೇರ, ಪ್ರಧಾನ ಕಾರ್ಯದರ್ಶಿ ರಾಘವೆಂದ್ರ ಎಚ್.ವಿ., ಕಾರ್ಯಕಾರಿ ಸಮಿತಿ ಸದಸ್ಯರಾದ ಸುಂದರ ಗೌಡ, ಶ್ರೀಧರ ಶೆಟ್ಟಿ ಪುಳಿಂಚ, ರವೀಂದ್ರ ಮನ್ನಿಪ್ಪಾಡಿ, ಮೂಡುಬಿದಿರೆ ವಕೀಲರ ಸಂಘದ ಬಾಹುಬಲಿ ಪ್ರಸಾದ್ ಅಲ್ಲದೆ, ಉಡುಪಿ, ಕೊಡಗು ಜಿಲ್ಲೆಯ ವಿವಿಧ ತಾಲೂಕು ವಕೀಲರ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X