ಮದ್ದಡ್ಕ: ಇಂದು ಜಾತ್ಯತೀತ ಇಂಡಿಯಾ ಸಮಾವೇಶ
ಬೆಳ್ತಂಗಡಿ, ಅ.13: ಎಸ್ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಜಾತ್ಯತೀತ ಇಂಡಿಯಾ ಸಮಾವೇಶದ ಸಾರ್ವಜನಿಕ ಕಾರ್ಯಕ್ರಮವು ಅ.14ರಂದು ಸಂಜೆ 4ಕ್ಕೆ ಮುದ್ದಡ್ಕ ಜಂಕ್ಷನ್ನಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಎಸ್ಡಿಪಿಐ ಜಿಲ್ಲಾಧ್ಯಕ್ಷ ಹನೀಫ್ಖಾನ್ ಕೊಡಾಜೆ, ರಾಜ್ಯ ಕಾರ್ಯದರ್ಶಿ ಅಲ್ಫೊನ್ಸೊ ಫ್ರಾಂಕೋ, ಜಿಲ್ಲಾ ಸಮಿತಿ ಸದಸ್ಯ ಇಕ್ಬಾಲ್ ಬೆಳ್ಳಾರೆ, ಎಸ್ಡಿಪಿಐ ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ಭಾಗವಹಿಸಲಿದ್ದಾರೆ ಎಂದು ಎಸ್ಡಿಪಿಐ ಬೆಳ್ತಂಗಡಿ ಕ್ಷೇತ್ರ ಪ್ರ.ಕಾರ್ಯದರ್ಶಿ ಅಶ್ಫಾಕ್ ಎಂ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story