Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಡತನ: ದೇಶದ ಸ್ಥಿತಿ ಗಂಭೀರ

ಬಡತನ: ದೇಶದ ಸ್ಥಿತಿ ಗಂಭೀರ

ವಾರ್ತಾಭಾರತಿವಾರ್ತಾಭಾರತಿ13 Oct 2016 11:51 PM IST
share

ಹೊಸದಿಲ್ಲಿ,ಅ.13: ಈ ವರ್ಷದ ಜಾಗತಿಕ ಹಸಿವು ಸೂಚ್ಯಂಕ(ಜಿಎಚ್‌ಐ)ವನ್ನು ಲೆಕ್ಕ ಹಾಕಲಾಗಿದ್ದು, 118 ಅಭಿವೃದ್ಧಿಶೀಲ ದೇಶಗಳ ಪೈಕಿ ಭಾರತ 97ನೇ ಸ್ಥಾನದಲ್ಲಿದೆ. ದೇಶದಲ್ಲಿ ಹಸಿವಿನ ಪಿಡುಗು ಗಂಭೀರ ಮಟ್ಟದಲ್ಲಿ ಮುಂದುವರಿದಿರುವುದನ್ನು ಇದು ಬೆಟ್ಟು ಮಾಡಿದೆ.

ತೀರ ಬಡ ಆಫ್ರಿಕನ್ ದೇಶಗಳಾದ ನೈಗರ್, ಚಾಡ್, ಇಥಿಯೋಪಿಯಾ ಮತ್ತು ಸಿಯೆರಾ ಲಿಯೋನ್, ನೆರೆಯ ದೇಶಗಳಾದ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ಪಟ್ಟಿಯಲ್ಲಿ ಭಾರತಕ್ಕಿಂತಲೂ ಕೆಳಗಿನ ಸ್ಥಾನಗಳಲ್ಲಿವೆ. ಇತರ ನೆರೆಯ ದೇಶಗಳಾದ ಶ್ರೀಲಂಕಾ, ಬಾಂಗ್ಲಾದೇಶ, ನೇಪಾಳ ಮತ್ತು ಚೀನಾ ಭಾರತಕ್ಕಿಂತ ಮೇಲಿನ ಸ್ಥಾನಗಳಲ್ಲಿವೆ.

ಅಪೌಷ್ಟಿಕ ಜನಸಂಖ್ಯೆ ಪ್ರಮಾಣ, ಐದು ವರ್ಷ ವಯೋಮಾನದೊಳಗಿನ ಎತ್ತರಕ್ಕನುಗುಣವಾದ ತೂಕವನ್ನು ಹೊಂದಿರದ ಕೃಶ ಮತ್ತು ಬೆಳವಣಿಗೆ ಕುಂಠಿತ ಮಕ್ಕಳು ಹಾಗೂ ಒಂದೇ ವಯೋಗುಂಪಿನಲ್ಲಿ ಶಿಶು ಮರಣ ದರ ಈ ಮುಖ್ಯ ಮಾನದಂಡಗಳನ್ನು ಆಧರಿಸಿ ಜಿಎಚ್‌ಐ ಅನ್ನು ಲೆಕ್ಕ ಹಾಕಲಾಗುತ್ತದೆ.

131 ದೇಶಗಳನ್ನು ಅಧ್ಯಯನಕ್ಕೊಳಪಡಿಸ ಲಾಗಿದ್ದು, ಈ ಪೈಕಿ 118 ದೇಶಗಳಿಗೆ ದತ್ತಾಂಶಗಳು ಲಭ್ಯವಾಗಿವೆ.

ಅಂತಾರಾಷ್ಟ್ರೀಯ ಆಹಾರ ನೀತಿ ಸಂಶೋಧನಾ ಸಂಸ್ಥೆಯು ವಾರ್ಷಿಕ ಜಿಎಚ್‌ಐ ಅನ್ನು ಲೆಕ್ಕ ಹಾಕುತ್ತದೆ. ಭಾರತದಲ್ಲಿ ಅಂದಾಜು ಶೇ.15ರಷ್ಟು ಜನಸಂಖ್ಯೆಪೌಷ್ಟಿಕ ಆಹಾರದ ಕೊರತೆಯಿಂದ ಬಳಲುತ್ತಿದೆ ಎಂಬ ಅಂಶವನ್ನು ಪರಿಗಣಿಸಿ ಭಾರತದ ಜಿಎಚ್‌ಐ ಅನ್ನು ಸಂಸ್ಥೆಯು ನಿರ್ಧರಿಸಿದೆ.

ಭಾರತದಲ್ಲಿ ಐದು ವರ್ಷಕ್ಕಿಂತ ಕಡಿಮೆ ವಯೋಮಾನದ ಮಕ್ಕಳ ಪೈಕಿ ಶೇ.15ರಷ್ಟು ಮಕ್ಕಳು ಕೃಶಕಾಯರಾಗಿದ್ದರೆ ಬೆಳವಣಿಗೆ ಕುಂಠಿತಗೊಂಡಿರುವ ಮಕ್ಕಳ ಪ್ರಮಾಣ ಶೇ.39ರಷ್ಟಿದೆ. ಇದು ಸಮತೋಲಿತ ಆಹಾರದ ಕೊರತೆಯನ್ನು ಸೂಚಿಸುತ್ತದೆ. ಐದು ವರ್ಷ ವಯೋಮಾನದೊಳಗೆ ಮರಣ ಪ್ರಮಾಣವು ಶೇ.4.8ರಷ್ಟಿದ್ದು, ಇದು ಭಾಗಶಃ ಅಸಮರ್ಪಕ ಪೋಷಕಾಂಶಗಳು ಮತ್ತು ಅನಾರೋಗ್ಯಕರ ವಾತಾವರಣವನ್ನು ಬೆಟ್ಟು ಮಾಡುತ್ತಿದೆ ಎಂದು ವರದಿಯು ಹೇಳಿದೆ.

ಭಾರತವು ವಿಶ್ವದಲ್ಲಿ ಎರಡು ಅತ್ಯಂತ ಬೃಹತ್ ಮಕ್ಕಳ ಪೌಷ್ಟಿಕಾಂಶ ಕಾರ್ಯಕ್ರಮಗಳಾದ ಆರು ವರ್ಷದೊಳಗಿನ ಮಕ್ಕಳಿಗಾಗಿ ಐಸಿಡಿಎಸ್ ಮತ್ತು ಶಾಲಾ ಮಕ್ಕಳಿಗಾಗಿ ಮಧ್ಯಾಹ್ನದೂಟ ಹೊಂದಿದೆಯಾದರೂ ಅಪೌಷ್ಟಿಕತೆ ಮಕ್ಕಳನ್ನು ಕಾಡುವುದು ಮುಂದುವರಿದಿದೆ.

2002ರಲ್ಲಿ ಭಾರತವು 83ನೇ ಮತ್ತು 2008ರಲ್ಲಿ 102ನೆ ಸ್ಥಾನದಲ್ಲಿತ್ತು. ದೇಶದಲ್ಲಿ ಹಸಿವಿನ ಸಮಸ್ಯೆ ಸ್ವಲ್ಪ ಮಟ್ಟಿಗೆ ನೀಗಿದೆಯಾದರೂ ಇತರ ಹಲವಾರು ರಾಷ್ಟ್ರಗಳು ಭಾರತಕ್ಕಿಂತ ಹೆಚ್ಚಿನ ಪ್ರಗತಿಯನ್ನು ಸಾಧಿಸಿವೆ ಎನ್ನುವುದನ್ನು ಇದು ಸೂಚಿಸುತ್ತಿದೆ. ಹೀಗಾಗಿ ಭಾರತದ ಸ್ಥಾನ 15 ವರ್ಷಗಳ ಹಿಂದೆ ಇದ್ದುದಕ್ಕಿಂತ ಕೆಳಗೆ ಕುಸಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X