Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉನಾ ಸಂತ್ರಸ್ತರನ್ನು ಪ್ರದರ್ಶನಕ್ಕಿಡಲಿದೆ...

ಉನಾ ಸಂತ್ರಸ್ತರನ್ನು ಪ್ರದರ್ಶನಕ್ಕಿಡಲಿದೆ ಆರೆಸ್ಸೆಸ್

ಗಾಯದ ಮೇಲೆ ಬರೆ

ವಾರ್ತಾಭಾರತಿವಾರ್ತಾಭಾರತಿ14 Oct 2016 1:38 PM IST
share
ಉನಾ ಸಂತ್ರಸ್ತರನ್ನು ಪ್ರದರ್ಶನಕ್ಕಿಡಲಿದೆ ಆರೆಸ್ಸೆಸ್

ಹರ್ಯಾಣ, ಅ.14: ಗೋ ರಕ್ಷಕ ಸಂಘಟನೆಗಳು ಕಾನೂನು ಕೈಗೆತ್ತಿಕೊಂಡರೂ ಅವರ ಬೆಂಬಲಕ್ಕೆ ನಿಂತಿದೆಯೆಂಬ ಆರೋಪ ಹೊತ್ತಿರುವ ಆರೆಸ್ಸೆಸ್‌ ಶುಕ್ರವಾರದಿಂದ ಬಿಜೆಪಿಗೆ ಮತ ಯಾಚಿಸುವ ಸಲುವಾಗಿ ಉನಾದಲ್ಲಿ ಗೋರಕ್ಷಕರಿಂದ ಅಮಾನುಷ ಹಲ್ಲೆಗೊಳಗಾದ ದಲಿತರನ್ನು ಉತ್ತರ ಪ್ರದೇಶದಾದ್ಯಂತ ಪೆರೇಡ್ ಮಾಡಲಿದೆಯೆಂದು ತಿಳಿದು ಬಂದಿದೆ.

ಸಂಘದ ಬೌದ್ಧ ಘಟಕ ಭಾರತೀಯ ಬೌದ್ಧಿಕ್ ಸಂಘ್ ಈ ಮೂವರು ದಲಿತ ಯುವಕರೊಂದಿಗೆ ರಾಜ್ಯದ 75 ಜಿಲ್ಲೆಗಳಾದ್ಯಂತ ಸಂಚರಿಸಲಿದೆ. ಅವರಲ್ಲೊಬ್ಬ ಎದೆ ಹಾಗೂ ತಲೆಗಾದ ಗಾಯಗಳಿಂದ ಇನ್ನಷ್ಟೇ ಚೇತರಿಸಿಕೊಳ್ಳುತ್ತಿದ್ದಾನೆ. ಈ ಮೂವರಿಗೂ ಅವರು ಆ ದಿನ ಅವರು ಅನುಭವಿಸಿದ ಯಾತನೆ ಎಳ್ಳಷ್ಟೂ ಕಡಿಮೆಯಾಗಿಲ್ಲ.

ದಲಿತರ ಯಾತ್ರೆ -ದಲಿತ ಚೇತನಾ ಧಮ್ಮ ವಾಹನ್ ಯಾತ್ರ ಹಿರಿಯ ಆರೆಸ್ಸೆಸ್ ನಾಯಕ ಇಂದ್ರೇಶ್ ಕುಮಾರ್ ಅವರ ನೇತೃತ್ವದಲ್ಲಿ ಶುಕ್ರವಾರ ಆರಂಭವಾಗಲಿದೆ. ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್, ಹಿರಿಯ ಬಿಜೆಪಿ ನಾಯಕ ಸತ್ಯನಾರಾಯಣ ಜತೀಯ ಮುಂತಾದವರು ಭಾಗವಹಿಸಲಿದ್ದು ಯಾತ್ರೆಯು ಅಂಬೇಡ್ಕರ್ ಅವರು ಬೌದ್ಧ ಧರ್ಮಕ್ಕೆ ಮತಾಂತರಗೊಂಡ ದಿನವಾದ ಅಕ್ಟೋಬರ್ 14 ರಂದು ಆರಂಭಗೊಳ್ಳಲಿದೆ.

ದಲಿತರು, ಇತರ ಹಿಂದುಳಿದ ವರ್ಗದವರನ್ನು ಹಾಗೂ ಬೌದ್ಧ ಧರ್ಮದವರನ್ನು ಬಿಜೆಪಿಯತ್ತ ಆಕರ್ಷಿಸಲು ಬೌದ್ಧ ಭಿಕ್ಷುಗಳು ಮೇ ಅಂತ್ಯದಲ್ಲಿ ಈ ಯಾತ್ರೆಯನ್ನು ಮೂಲತಃ ಆರಂಭಿಸಿದ್ದರೂ ಅದು ಇಲ್ಲಿಯವರೆಗೆ ಹೇಳಿಕೊಳ್ಳುವಂತಹ ಪರಿಣಾಮ ಬೀರಿಲ್ಲವಾಗಿದೆ. ತಮ್ಮ ವಿರುದ್ಧ ದಲಿತ ವಿರೋಧಿ ಅಲೆಯಿದೆಯೆಂದು ಗೊತ್ತಿರುವ ಹೊರತಾಗಿಯೂ ಈ ಉನಾ ಸಂತ್ರಸ್ತರನ್ನು ಅದ್ಹೇಗೋ ಓಲೈಸಿ ಅವರನ್ನು ಉತ್ತರ ಪ್ರದೇಶಕ್ಕೆ ಮತಗಳನ್ನು ಸೆಳೆಯಲು ಕರೆತರಲು ಬಿಜೆಪಿ ಈಗ ಸಫಲವಾಗಿದೆ.

ದೌರ್ಜನ್ಯಕ್ಕೊಳಗಾದ ಯುವಕರಾದ ಅಶೋಕ್ ಸರ್ವಯ್ಯ, ಬೆಚಾರ್ ಸರ್ವಯ್ಯ ಮತ್ತು ರಮೇಶ್ ಸರ್ವಯ್ಯ ಅವರು ಈ ಜಾಥಾದಲ್ಲಿ ಭಾಗವಹಿಸುತ್ತಿರುವರಾದರೂ ಇನ್ನೊಬ್ಬ ಸಂತ್ರಸ್ತ ವಶ್ರಮ್ ಸರ್ವಯ್ಯ ಅವರು ಈಗಲೂ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವುದರಿಂದ ಅವರ ಪರವಾಗಿ ಅವರ ಸಹೋದರ ಕ್ರಾಂತಿ ಸರ್ವಯ್ಯ ಈ ರ್ಯಾಲಿಯಲ್ಲಿ ಭಾಗವಹಿಸುತ್ತಿದ್ದಾರೆ.

ಕೃಪೆ : catchnews.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X