Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರ್ಜಿಕಲ್ ದಾಳಿ ಕಟ್ಟುಕಥೆ ಎಂದ ಪಾಕ್ :...

ಸರ್ಜಿಕಲ್ ದಾಳಿ ಕಟ್ಟುಕಥೆ ಎಂದ ಪಾಕ್ : ಮಾಧ್ಯಮ ವರದಿ ತಿರಸ್ಕರಿಸಿದ ಭಾರತ

ವಾರ್ತಾಭಾರತಿವಾರ್ತಾಭಾರತಿ14 Oct 2016 2:37 PM IST
share
ಸರ್ಜಿಕಲ್ ದಾಳಿ ಕಟ್ಟುಕಥೆ ಎಂದ ಪಾಕ್ : ಮಾಧ್ಯಮ ವರದಿ ತಿರಸ್ಕರಿಸಿದ ಭಾರತ

ಹೊಸದಿಲ್ಲಿ,ಅ.14: ಪಾಕಿಸ್ತಾನಿ ದೈನಿಕ ನ್ಯೂಸ್ ಇಂಟರ್‌ನ್ಯಾಷನಲ್ ತನ್ನ ಶುಕ್ರವಾರದ ಸಂಚಿಕೆಯಲ್ಲಿ ಪ್ರಕಟಿಸಿರುವ ವರದಿಯೊಂದನ್ನು ತಿರಸ್ಕರಿಸಿರುವ ಭಾರತವು ಅದು ‘ಸಂಪೂರ್ಣ ಕಟ್ಟುಕಥೆ ಮತ್ತು ಆಧಾರರಹಿತ ’ಎಂದು ಬಣ್ಣಿಸಿದೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕರ ಶಿಬಿರಗಳ ಮೇಲೆ ಯಾವುದೇ ಸರ್ಜಿಕಲ್(ಸೀಮಿತ) ದಾಳಿಗಳು ನಡೆದಿಲ್ಲ ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಅವರು ಇಲ್ಲಿಯ ಜರ್ಮನ್ ರಾಯಭಾರಿಗೆ ತಿಳಿಸಿದ್ದಾರೆ ಎಂದು ನ್ಯೂಸ್ ಇಂಟರ್‌ನ್ಯಾಷನಲ್ ತನ್ನ ವರದಿಯಲ್ಲಿ ಹೇಳಿದೆ.

ಭಾರತವು ನಡೆಸಿದ್ದು ಸೀಮಿತ ದಾಳಿ ಅಲ್ಲವೇ ಅಲ್ಲ, ನಿಯಂತ್ರಣ ರೇಖೆಯಲ್ಲಿ ಅದು ಮಾಮೂಲಾಗಿ ನಡೆಸುತ್ತಿರುವ ಗುಂಡು ಹಾರಾಟ ಎಂದು ಪಾಕಿಸ್ತಾನವು ನಿರಂತರವಾಗಿ ಪ್ರತಿಪಾದಿಸುತ್ತಲೇ ಇದೆ. ಇದೀಗ ಇದನ್ನೇ ಮಾಧ್ಯಮಗಳ ಮೂಲಕ ವ್ಯವಸ್ಥಿತವಾಗಿ ಪ್ರಚಾರ ಮಾಡಲು ಅದು ಮುಂದಾಗಿದೆ.

ನ್ಯೂಸ್ ಇಂಟರ್‌ನ್ಯಾಷನಲ್ ಹೇಳಿದ್ದೇನು..?

ನವಾಝ್ ಶರೀಫ್ ಸಕಾರ ಮತ್ತು ಪಾಕ್ ಸೇನೆಯನ್ನು ಉತ್ತೇಜಿಸುವ ತನ್ನ ವರದಿಯಲ್ಲಿ ‘ಭಾರತದ ವಿದೇಶಾಂಗ ಕಾರ್ಯದರ್ಶಿಗಳು ಸೀಮಿತ ದಾಳಿ ನಡೆದಿರು ವುದನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ ಎಂದು ಬರ್ಲಿನ್‌ನಲ್ಲಿ ಬಲ್ಲ ಅಧಿಕೃತ ಮೂಲವೊಂದು ಪಾಕಿಸ್ತಾನಿ ಅಧಿಕಾರಿಗಳಿಗೆ ತಿಳಿಸಿದ್ದಾರೆ ’ಎಂದು ದೈನಿಕವು ಹೇಳಿದೆ.

ಅ.4ರಂದು ಬರ್ಲಿನ್‌ನಲ್ಲಿ ಪಾಕ್ ರಾಯಭಾರಿ ಕಚೇರಿಯ ಅಧಿಕಾರಿ ರುಕ್ಸಾನಾ ಅಫ್ಝಲ್ ಅವರು ಜರ್ಮನ್ ವಿದೇಶಾಂಗ ಸಚಿವಾಲಯದ ಅಧಿಕಾರಿಗಳಾದ ಕ್ಯಾರೆನ್ ಗೋಬೆಲ್ಸ್ ಮತ್ತು ಜೆನ್ಸ್ ವ್ಯಾಗ್ನರ್ ಹಾಗೂ ಅಫಘಾನ್-ಪಾಕ್ ವಿಭಾಗದ ಹಿರಿಯ ಅಧಿಕಾರಿ ಸಿಮೋನ್ ಸ್ಟೆಮ್ಮರ್ ಅವರನ್ನು ಭೇಟಿಯಾಗಿದ್ದರು. ಅಫ್ಝಲ್ ಉರಿ ಭಯೋತ್ಪಾದಕ ದಾಳಿಯ ವಿಷಯವನ್ನೆತ್ತಿದಾಗ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಮತ್ತು ದಿಲ್ಲಿಯಲ್ಲಿರುವ ಜರ್ಮನ್ ರಾಯಭಾರಿ ನಡುವೆ ನಡೆದಿತ್ತೆನ್ನಲಾದ ಮಾತುಕತೆಗಳ ಬಗ್ಗೆ ಸ್ಟೆಮ್ಮರ್ ಅವರಿಗೆ ತಿಳಿಸಿದ್ದರು ಎಂದು ಅದು ತನ್ನ ವರದಿಯಲ್ಲಿ ತಿಳಿಸಿದೆ.

‘ತಥಾಕಥಿತ ಸರ್ಜಿಕಲ್ ದಾಳಿ ಮಂತ್ರದೊಂದಿಗೆ ’ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸೇರಿದಂತೆ ತನ್ನ ಹಲವಾರು ಗುರಿಗಳನ್ನು ಸಾಧಿಸಲು ಆಡಳಿತ ಬಿಜೆಪಿ ಸರಕಾರವು ಬಯಸಿದೆ ಎಂದೂ ವರದಿಯು ಇನ್ನೊಂದು ‘ಅಧಿಕೃತ ಮೂಲ’ವನ್ನು ಉಲ್ಲೇಖಿಸಿದೆ.

ಉರಿ ದಾಳಿಯ ಬಗ್ಗೆಯೂ ಶಂಕಿಸಿತ್ತು

ನ್ಯೂಸ್ ಇಂಟರ್‌ನ್ಯಾಷನಲ್ ಉರಿ ದಾಳಿಯ ಬಗ್ಗೆಯೂ ಕೊಂಕು ನುಡಿದಿತ್ತು. ದಾಳಿಯ ಮರುದಿನದ ತನ್ನ ವರದಿಯಲ್ಲಿ ಶರೀಫ್ ಅವರು ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದಲ್ಲಿ ಪಾಲ್ಗೊಳ್ಳಲು ನ್ಯೂಯಾರ್ಕ್‌ಗೆ ತೆರಳುತ್ತಿದ್ದಂತೆ ಭಾರತವು ಪಾಕಿಸ್ತಾನದ ಕಡೆಗೆ ಬೆಟ್ಟು ಮಾಡಲು ಸಾಧ್ಯವಾಗುವಂತೆ ಆಯ್ದ ಸಮಯದಲ್ಲಿಯೇ ಉರಿ ದಾಳಿ ನಡೆದಿದೆ ಎಂದು ಅದು ಹೇಳಿತ್ತು. ಉರಿ ಸೇರಿದಂತೆ ಭಾರತದ ಗುಪ್ತಚರ ವೈಫಲ್ಯಗಳನ್ನು ಟೀಕಿಸಿದ್ದ ಅದು ಭಾರತವೇ ಉರಿ ದಾಳಿಯನ್ನು ಪ್ರಾಯೋಜಿಸಿತ್ತು ಎಂದು ಅಧಿಕೃತವಾಗಿ ಹೇಳುವುದರಿಂದ ಸ್ವಲ್ಪವೇ ದೂರವುಳಿದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X