Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಡುಮಲೆಯಲ್ಲಿ ಗರಡಿ, ಐತಿಹ್ಯಗಳ...

ಪಡುಮಲೆಯಲ್ಲಿ ಗರಡಿ, ಐತಿಹ್ಯಗಳ ಜೀರ್ಣೋದ್ಧಾರ: ಹರಿಕೃಷ್ಣ ಬಂಟ್ವಾಳ

ವಾರ್ತಾಭಾರತಿವಾರ್ತಾಭಾರತಿ14 Oct 2016 4:14 PM IST
share
ಪಡುಮಲೆಯಲ್ಲಿ ಗರಡಿ, ಐತಿಹ್ಯಗಳ ಜೀರ್ಣೋದ್ಧಾರ: ಹರಿಕೃಷ್ಣ ಬಂಟ್ವಾಳ

ಮಂಗಳೂರು, ಅ.14: ಕೋಟಿಚೆನ್ನಯರ ಜನ್ಮಸ್ಥಾನ ಪುತ್ತೂರು ತಾಲೂಕಿನ ಪಡವನ್ನೂರು ಗ್ರಾಮದ ಪಡುಮಲೆಯಲ್ಲಿ ಗರಡಿ ನಿರ್ಮಾಣ ಮತ್ತು ಅವರ ಆರಾಧ್ಯ ದೇವರುಗಳಾದ ನಾಗಬೆರ್ಮರ ಗುಡಿ ನಿರ್ಮಾಣ ಸಹಿತ ಜೀವನಗಾಥೆ ಸಾರುವ 26 ಐತಿಹ್ಯಗಳನ್ನು ಸರ್ವಧರ್ಮೀಯರ ಸಹಕಾರದೊಂದಿಗೆ ಜೀರ್ಣೋದ್ಧಾರಕ್ಕೆ ತೀರ್ಮಾನಿಸಲಾಗಿದೆ ಎಂದು ಪಡುಮಲೆ ಕೋಟಿ -ಚೆನ್ನಯ ಜನ್ಮಸ್ಥಳ ಸಂಚಲನ ಸಮಿತಿ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ.

ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪೂರ್ವಭಾವಿಯಾಗಿ ಅಕ್ಟೋಬರ್ 16 ರಂದು ಪೂರ್ವಾಹ್ನ 10 ಕ್ಕೆ ಸೋಣ ನೇಮದ ಸತ್ಯದ ಛಾವಡಿಯಲ್ಲಿ ಪಡುಮಲೆ ಗ್ರಾಮಸ್ಥರ ಸಭೆ ನಡೆಯಲಿದ್ದು ಊರ ಮತ್ತು ಪರವೂರ ಭಕ್ತಾದಿಗಳು ಆಗಮಿಸಲಿದ್ದಾರೆ. ಅ. 17 ಮತ್ತು 18 ರಂದು ಗರಡಿ ನಿರ್ಮಾಣ ಪ್ರಯುಕ್ತ ನಾಗಬ್ರಹ್ಮ ದೇವರ ಪ್ರತಿಷ್ಠೆ ಮತ್ತು ಮಲ್ಲಯ್ಯ ಬುದ್ಧಿವಂತ ಪ್ರೇತಕ್ಕೆ ಮೋಕ್ಷ ಸಹಿತ ವೈದಿಕ ವಿಧಿ-ವಿಧಾನಗಳು ಜರಗಲಿವೆ ಎಂದು ತಿಳಿಸಿದರು.

ಕೋಟಿಚೆನ್ನಯರ ಜನ್ಮಸ್ಥಾನ ಪ್ರಸ್ತುತ ಚಲನಚಿತ್ರ ನಟ ವಿನೋದ ಆಳ್ವರ ಪತ್ನಿಯ ಹೆಸರಿನಲ್ಲಿ ಹಕ್ಕು ಹೊಂದಿದ್ದು, ಟ್ರಸ್ಟ್‌ಗೆ 1.5 ಎಕರೆಯನ್ನು ದಾನದ ರೂಪದಲ್ಲಿ ಹಕ್ಕುಪತ್ರ ನೀಡಲು ಮುಂದಾಗಿದ್ದಾರೆ. ಅದಕ್ಕಾಗಿ ಕಂದಾಯ ಇಲಾಖೆಯಿಂದ ದಾಖಲಾತಿಗಳ ಪ್ರಕ್ರಿಯೆ ನಡೆಯುತ್ತಿದೆ. ಇದಕ್ಕಾಗಿ ವಿವಿಧ ಜಾತಿಮತಗಳ ಪ್ರಮುಖರನ್ನೊಳಗೊಂಡ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿ ಕಾರ್ಯಾಧ್ಯಕ್ಷ ಮಾಜಿ ಶಾಸಕ ಎ. ರುಕ್ಮಯ್ಯ ಪೂಜಾರಿ, ಉಪಾಧ್ಯಕ್ಷರುಗಳಾದ ವಿಜಯಕುಮಾರ್ ಸೊರಕೆ, ಮನೋಜ್ ರೈ ಪೇರಾಲು, ಪದ್ಮನಾಭ ಕೋಟ್ಯಾನ್ ನೀರುಮಾರ್ಗ, ರೋಹಿನಾಥ್ ಪಾದೆ, ಶ್ರೀಧರ ಪಟ್ಲ, ಶೇಖರ ನಾರಾವಿ, ಸಂತೋಷ್ ಕುಮಾರ್ ಕಾಪಿನಡ್ಕ, ಕೃಷ್ಣ ಪೂಜಾರಿ ಕಲ್ಲಡ್ಕ, ಮಾಜಿ ಜಿ.ಪಂ.ಸದಸ್ಯ ಶೈಲೇಶ್ ಕುಮಾರ್, ಉದ್ಯಮಿ ಲೋಕನಾಥ್, ಸುರೇಶ್ಚಂದ್ರ ಕೋಟ್ಯಾನ್, ಲೋಕಯ್ಯ ಬಜ್ಪೆ ಮತ್ತಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X