Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭೂ ಹಕ್ಕು ನೀಡಲು ಒತ್ತಾಯಿಸಿ ಆದಿವಾಸಿಗಳ...

ಭೂ ಹಕ್ಕು ನೀಡಲು ಒತ್ತಾಯಿಸಿ ಆದಿವಾಸಿಗಳ ಧರಣಿ

ವಾರ್ತಾಭಾರತಿವಾರ್ತಾಭಾರತಿ14 Oct 2016 10:10 PM IST
share
ಭೂ ಹಕ್ಕು  ನೀಡಲು ಒತ್ತಾಯಿಸಿ ಆದಿವಾಸಿಗಳ ಧರಣಿ

ಚಿಕ್ಕಮಗಳೂರು, ಅ.14: ಭೂ ಹೀನರಿಗೆ ಭೂಮಿಯ ಹಕ್ಕು ಕೊಡಲು ಸರಕಾರ ನಿರ್ಲಕ್ಷ ವಹಿಸುತ್ತಿದೆ. ರಾಜ್ಯದಲ್ಲಿ ಬಗರ್ ಹುಕುಂ ಸಾಗುವಳಿದಾರರಿಗೆ ಫಾರಂ ನಂಬರ್ 50-53ರಲ್ಲಿನ ಅರ್ಜಿಗಳು ಇತ್ಯರ್ಥವಾಗುತ್ತಿಲ್ಲ. ಈ ಬಗ್ಗೆ ಸರಕಾರ ಗಂಭೀರ ಕ್ರಮ ಅನುಸರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಬುಡಕಟ್ಟು ಕೃಷಿಕರ ಸಂಘದ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿ ಮನವಿ ಸಲ್ಲಿಸಿದರು.

ತೋಟಿ, ತಳವಾರಿ, ನೀರಗಂಟಿ ಇತ್ಯಾದಿ ವರ್ಗಗಳಿಗೆ ಸರಕಾರದ ಸ್ವಾಧೀನದಲ್ಲಿರುವ ಭೂಮಿ ದಕ್ಕುತ್ತಿಲ್ಲ. ಡಾ.ಬಿ.ಆರ್. ಅಂಬೇಡ್ಕರ್‌ರ ಶತಮಾನೋತ್ಸವದಂದು ಘೋಷಿಸಿದ ಹೆಚ್ಚುವರಿ ಭೂಮಿಯಲ್ಲಿ ಶೆ.75ರಷ್ಟು ದಲಿತರಿಗೆ, ಆದಿವಾಸಿಗಳಿಗೆ ಮೀಸಲಿಟ್ಟು ಹಂಚುವ ಕಾರ್ಯ ಸಂಪೂರ್ಣವಾಗಿ ಕೈಬಿಡಲಾಗಿದೆ. ಭೂ ನ್ಯಾಯಮಂಡಳಿ ರಚನೆಯಾಗಿದ್ದರೂ ಸ್ಥಳೀಯ ಶಾಸಕರು, ಅಧಿಕಾರಿಗಳು, ಬಗರ್ ಹುಕುಂ ಸಮಿತಿ ಸಭೆ ಸೇರಿ ಬಡವರಿಗೆ ಭೂಮಿ ಮಂಜೂರಾತಿ ಮಾಡುತ್ತಿಲ್ಲ ಎಂದು ಧರಣಿ ನಿರತರು ಆರೋಪಿಸಿದರು.

ಅರಣ್ಯಾಧಾರಿತ ಆದಿವಾಸಿಗಳ ಹೋರಾಟದ ಪರಿಶ್ರಮದಿಂದ ಜಾರಿಗೆ ಬಂದ 2006-2008ರ ಅರಣ್ಯ ಹಕ್ಕು ಕಾಯ್ದೆ ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಿ ಸಮುದಾಯ ಅಭಿವೃದ್ಧಿ ಹಾಗೂ ವ್ಯೆಯಕ್ತಿಕ ಭೂಮಿಯ ಹಕ್ಕನ್ನು ಕೊಡದೆ, ಆಳುವ ಜಾತಿವಾದಿ ಸರಕಾರಗಳು ಸಂವಿಧಾನ ಹಾಗೂ ಹೈಕೋರ್ಟ್ ಆದೇಶದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ತಲೆ ತಲಾಂತರದಿಂದ ಆದಿವಾಸಿ ಸಮುದಾಯಗಳ ಅರಣ್ಯದ ಮೇಲಿನ ಹಕ್ಕನ್ನು ಧಿಕ್ಕರಿಸಿ ಆದಿವಾಸಿಗಳ ನೆಲೆಯಾದ ಕಾಡು, ನೆಲ, ಸಂಪನ್ಮೂಲಗಳ ಆಸರೆಯಿಂದ ಒಕ್ಕಲೆಬ್ಬಿಸಿ ಬೀದಿಪಾಲು ಮಾಡುತ್ತಿದ್ದಾರೆ. ಆದರೆ ನಮ್ಮನ್ನಾಳುವ ಸರಕಾರ ಶಾಶ್ವತ ಜೀವನಾಧಾರ ಭೂಮಿ ಹಂಚುವ ಯೋಜನೆ ಜಾರಿಗೊಳಿಸುವುದು ಸಾಮಾಜಿಕ ನ್ಯಾಯದ ಬದ್ದತೆಯಾಗಿದೆ ಎಂದು ಹೇಳಿದ್ದಾರೆ.

ಜಿಲ್ಲೆಯ ಎಲ್ಲ ಭೂ ಮಂಜೂರಾತಿ ಸಮಿತಿ ಕಡ್ಡಾಯವಾಗಿ ಸಭೆ ನಡೆಸಿ ಹತ್ತಾರು ವರ್ಷಗಳಿಂದ ಇತ್ಯರ್ಥವಾಗದೆ ಉಳಿದಿರುವ ಫಾರಂ ನಂ.50-53ರಲ್ಲಿನ ಅರ್ಜಿಗಳನ್ನು ಕೂಡಲೇ ಇತ್ಯರ್ಥಗೊಳಿಸಬೇಕು. ಸಾಗುವಳಿ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಅರ್ಜಿ ಸಲ್ಲಿಸದ ದಲಿತ, ಆದಿವಾಸಿ, ಬಡವರಿಗೆ, ಸಣ್ಣ ರೈತರಿಗೆ ಪುನಃ ಅರ್ಜಿ ಸಲ್ಲಿಕೆಗೆ ಅವಕಾಶ ನಿಡಬೇಕು. ಜಿಲ್ಲೆಯಲ್ಲಿ ಅರಣ್ಯ ಹಕ್ಕು 2006-2008, ತಿದ್ದುಪಡಿ ನಿಯಮ 2012ರ ಆದೇಶದಂತೆ ಆದಿವಾಸಿಗಳು ಮತ್ತು ಅರಣ್ಯ ವಾಸಿಗಳಿಗೆ ಸಮುದಾಯ ಹಕ್ಕನ್ನು ಮನ್ನಣೆ ಮಾಡಿ ಹಕ್ಕುಪತ್ರ ನೀಡಬೇಕು. ಆದಿವಾಸಿಗಳಿಗೆ ನೀಡುತ್ತಿರುವ ಅನಗತ್ಯ ಕಿರುಕುಳ ಮತ್ತು ಒಕ್ಕಲೆಬ್ಬಿಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬುಡಕಟ್ಟು ಸಂಘದ ಅಧ್ಯಕ್ಷ ಕೆ.ಎನ್. ವಿಠಲ್, ಆದಿವಾಸಿ ದಲಿತ ಭೂ ಹಕ್ಕಿನ ಆಂದೋಲನದ ಸದಸ್ಯೆ ಎಚ್.ಎನ್. ಜ್ಯೋತಿ, ತಾಲೂಕು ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಸುರೇಶ್, ಕೊಪ್ಪದ ಶೇಖರ್, ಚಿಕ್ಕಮಗಳೂರಿನ ಕೃಷ್ಣಪ್ಪ, ನ.ರಾ.ಪುರದ ಮಂಜುನಾಥ್, ಶೃಂಗೇರಿಯ ಆನಂದ್ ಕಾಮ್ಲೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X