Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರ್ಜಿಕಲ್ ದಾಳಿ: ಸಂಸದೀಯ ಸಮಿತಿಗೆ...

ಸರ್ಜಿಕಲ್ ದಾಳಿ: ಸಂಸದೀಯ ಸಮಿತಿಗೆ ಸೇನೆಯಿಂದ ವಿವರಣೆ

ವಾರ್ತಾಭಾರತಿವಾರ್ತಾಭಾರತಿ14 Oct 2016 11:15 PM IST
share

ಹೊಸದಿಲ್ಲಿ, ಅ.14: ಸೇನೆಯು ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕರ ನೆಲೆಗಳ ಮೇಲೆ ಇತ್ತೀಚೆಗೆ ನಡೆಸಿರುವ ಸೀಮಿತ ದಾಳಿಯ ವಿವರವನ್ನು ರಕ್ಷಣೆಯ ಕುರಿತಾದ ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರಿಗೆ ಶುಕ್ರವಾರ ನೀಡಿದೆ. ಮೊದಲು ಅದು ಈ ವಿವರ ನೀಡಲು ನಿರಾಕರಿಸಿತ್ತು.

ಸೇನಾ ಸಿಬ್ಬಂದಿಯ ಉಪಮುಖ್ಯಸ್ಥ ಲೆ.ಜ. ಬಿಪಿನ್ ರಾವತ್ ಸೆ.29ರ ಸರ್ಜಿಕಲ್ ದಾಳಿಯ ವಿವರವನ್ನು ಸಮಿತಿಗೆ ನೀಡಿದರೆಂದು ಸಭೆಯಲ್ಲಿ ಭಾಗವಹಿಸಿದ್ದ ಕನಿಷ್ಠ ಮೂವರು ಸದಸ್ಯರು ತಿಳಿಸಿದ್ದಾರೆ.
ಸೂಕ್ಷ್ಮ ವಿಷಯದ ಕುರಿತಾಗಿ ಸೇನೆಯು ಸಂಕ್ಷಿಪ್ತ ಹೇಳಿಕೆ ನೀಡಿದೆ. ಆದರೆ, ಪ್ರಶ್ನೆಗಳಿಗೆ ಅದು ಉತ್ತರಿಸಿಲ್ಲವೆಂದು ಸದಸ್ಯರೊಬ್ಬರು ಹೇಳಿದ್ದಾರೆ.
ಆದರೆ, ಕಾಂಗ್ರೆಸ್‌ನ ಮಧುಸೂದನ ಮಿಸ್ತ್ರಿ ಪ್ರಶ್ನೆಗಳನ್ನು ಕೇಳ ಬಯಸಿದ್ದರು. ಅದಕ್ಕೆ ಸಮಿತಿಯ ಅಧ್ಯಕ್ಷ ನಿವೃತ್ತ ಮೇ.ಜ. ಬಿಸಿ ಖಂಡೂರಿ ನಕಾರ ಸೂಚಿಸಿದರು. ಇಬ್ಬರ ನಡುವೆ ಬಿಸಿಬಿಸಿ ವಾಗ್ವಾದ ನಡೆಯಿತು. ಅಂತಿಮವಾಗಿ ಯಾವ ಪ್ರಶ್ನೆಯನ್ನೂ ಕೇಳಲಾಗಿಲ್ಲವೆಂದು ಎನ್‌ಡಿಎಯ ಸದಸ್ಯರೊಬ್ಬರು ತಿಳಿಸಿದ್ದಾರೆ.
ಮೊದಲು, ಸ್ಥಾಯಿ ಸಮಿತಿಯು, ನಿಯಂತ್ರಣ ರೇಖೆಯಾಚೆ ನಡೆದ ಸೀಮಿತ ದಾಳಿಯ ಕುರಿತು ರಕ್ಷಣಾ ಸಚಿವಾಲಯದ ಪ್ರತಿನಿಧಿಗಳಿಂದ ವಿವರಣೆ ಪಡೆಯುವುದೆಂದಿತ್ತು. ಆದರೆ, ಬಳಿಕ ಕಾರ್ಯಸೂಚಿಯನ್ನು ಬದಲಾಯಿಸಿ, ಇ-ಪೋಸ್ಟಲ್ ಬ್ಯಾಲೆಟ್ ವ್ಯವಸ್ಥೆ ಅನುಷ್ಠಾನದ ಸ್ಥಿತಿಗತಿಯ ಕುರಿತು ರಕ್ಷಣೆ, ಕಾನೂನು ಸಚಿವಾಲಯಗಳ ಅಧಿಕಾರಿಗಳು ಹಾಗೂ ಚುನಾವಣಾ ಆಯೋಗದಿಂದ ವಿವರ ಆಲಿಸುವ ಬಗ್ಗೆ ನಿರ್ಧರಿಸಲಾಯಿತೆಂದು ಅವರು ಹೇಳಿದ್ದಾರೆ.
ನಿನ್ನೆ ಕಾಂಗ್ರೆಸ್‌ಗೆ ಇಬ್ಬರು ಹಿರಿಯ ಸದಸ್ಯರಾದ ಅಂಬಿಕಾ ಸೋನಿ ಹಾಗೂ ಮಿಸ್ತ್ರಿ ಕಾರ್ಯಸೂಚಿಯ ಬದಲಾವಣೆ ಅಂಗೀಕಾರಾರ್ಹವಲ್ಲವೆಂದು ಆಕ್ಷೇಪಿಸಿದ್ದರು.
ಗೌಪ್ಯದ ಹೆಸರಲ್ಲಿ ಸೀಮಿತ ದಾಳಿಯ ಕುರಿತು ಸಮಿತಿಗೆ ವಿವರಣೆ ನೀಡದಿರುವುದು ಸಂಸದರ ಮೇಲೆ ವಿಶ್ವಾಸವಿಲ್ಲ ಎನ್ನುವುದಕ್ಕೆ ಸಮವಾಗುತ್ತದೆ. ಅವರು ಗೌಪ್ಯದ ಪ್ರಮಾಣ ವಚನ ಸ್ವೀಕರಿಸಿದವರಾಗಿದ್ದಾರೆ. ಇದು ತಮಗೆ ಅಂಗೀಕಾರಾರ್ಹವಲ್ಲವೆಂದು ಅವರು ನಿನ್ನೆ ಜಂಟಿ ಹೇಳಿಕೆ ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X