Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ವಿಶ್ವದಲ್ಲಿದಲಿತರಿಗೆ ಅತಿ...

‘ವಿಶ್ವದಲ್ಲಿದಲಿತರಿಗೆ ಅತಿ ಹೆಚ್ಚುಹಕ್ಕುನೀಡಿರುವುದು ಭಾರತ’

ಕ್ರಾಂತಿ, ಆಂದೋಲನ ಅನಗತ್ಯ

ವಾರ್ತಾಭಾರತಿವಾರ್ತಾಭಾರತಿ14 Oct 2016 11:54 PM IST
share
‘ವಿಶ್ವದಲ್ಲಿದಲಿತರಿಗೆ ಅತಿ ಹೆಚ್ಚುಹಕ್ಕುನೀಡಿರುವುದು ಭಾರತ’

ಬೆಂಗಳೂರು, ಅ.14: ಭಾರತದಲ್ಲಿ ದಲಿತರಿಗೆ ನೀಡಿರು ವಷ್ಟು ಹಕ್ಕುಗಳನ್ನು ವಿಶ್ವದ ಯಾವುದೇ ದೇಶದಲ್ಲಿ ನೀಡಲಾಗಿಲ್ಲ. ದಲಿತರು ತಮ್ಮ ಹಕ್ಕುಗಳನ್ನು ಪಡೆಯಲು ಯಾವುದೇ ಕ್ರಾಂತಿ ಅಥವಾ ಆಂದೋಲನ ಮಾಡುವ ಅಗತ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಶುಕ್ರವಾರ ನಗರದ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ನಿವೃತ್ತ ಐಎಎಸ್ ಅಕಾರಿ ಹಾಗೂ ಛಲವಾದಿ ಮಹಾಸಭಾ ಅಧ್ಯಕ್ಷ ಕೆ.ಶಿವರಾಮ್ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ವನ್ನು ಉದ್ದೇಶಿಸಿ ಅವರು ಮಾತನಾಡಿದರು.

ದಲಿತ ಸಮುದಾಯವು ಭಾರತದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಯ ಅವಿಭಾಜ್ಯ ಅಂಗ. ಅದಕ್ಕಾಗಿಯೇ ಸಂವಿಧಾನ ರಚನೆಕಾರರು ಅವರಿಗೆ ವಿಶೇಷ ಹಕ್ಕುಗಳನ್ನು ನೀಡಿದ್ದಾರೆ. ದಲಿತರ ಹಕ್ಕುಗಳಿಗೆ ಸಂವಿಧಾನದ ರಕ್ಷಣೆಯಿದೆ ಎಂದು ರಾಜನಾಥ್‌ಸಿಂಗ್ ಹೇಳಿದರು.
ದಲಿತ ಸಮುದಾಯದವರು ಸ್ವಾಭಿಮಾನಿಗಳಾಗಿ ಬದಕಲು ಅನುಕೂಲವಾಗುವಂತೆ ಕೇಂದ್ರ ಸರಕಾರವು ಮುದ್ರಾ ಯೋಜನೆಯನ್ನು ಜಾರಿಗೆ ತಂದಿದೆ. ಅಲ್ಲದೆ, ಪ್ರತಿ ತಿಂಗಳು ಕನಿಷ್ಠ ಒಬ್ಬ ದಲಿತ ಹಾಗೂ ಮಹಿಳೆಗೆ ಸ್ವಂತ ಉದ್ಯಮ ಸ್ಥಾಪನೆಗೆ ಸಾಲ ಸೌಲಭ್ಯ ಒದಗಿಸುವಂತೆ ಎಲ್ಲ ಬ್ಯಾಂಕುಗಳಿಗೆ ಕೇಂದ್ರ ಸರಕಾರ ಸೂಚನೆ ನೀಡಿದೆ ಎಂದು ಅವರು ಹೇಳಿದರು.

ಪ್ರಾಚೀನ ಭಾರತದಲ್ಲಿ ಅಸ್ಪಶ್ಯತೆ ಇರಲಿಲ್ಲ. ಆದರೆ, ನಮ್ಮನ್ನು ಆಳಿದವರು ಅದನ್ನು ಹೇರಿದ್ದಾರೆ. ಸಂತ ರವಿದಾಸ, ಜ್ಞಾನದೇವ, ಕಂಬನ್ ಸೇರಿದಂತೆ ಹಲವಾರು ಸಂತರು, ಮಹನೀಯರು ದಲಿತ ಸಮುದಾಯಕ್ಕೆ ಸೇರಿದವರಾ ಗಿದ್ದಾರೆ. ಭಾರತವನ್ನು ಸಶಕ್ತ, ಸ್ವಾಭಿಮಾನಿ, ಸ್ವಾವಲಂಬಿ ಯನ್ನಾಗಿ ಮಾಡಲು ಎಲ್ಲ ವರ್ಗದ ಜನರು ಒಗ್ಗಟ್ಟಾಗ ಬೇಕು ಎಂದು ರಾಜನಾಥ್‌ಸಿಂಗ್ ಕರೆ ನೀಡಿದರು.ಸ್ಪಶ್ಯತೆಯಿಂದಾಗಿ ಅಪಮಾನ, ಸಂಘರ್ಷವನ್ನು ಎದುರಿಸಿದ ಅಂಬೇಡ್ಕರ್ ಎಂದಿಗೂ ತಮ್ಮ ದೇಶಭಕ್ತಿ ಯಿಂದ ವಿಮುಖರಾಗಲಿಲ್ಲ. ಅಂಬೇಡ್ಕರ್ ದಲಿತರ ರಾಜಕೀಯ ಅಕಾರದ ಬಗ್ಗೆ ಮಾತನಾಡಿದರೆ, ಮಹಾತ್ಮ ಗಾಂ ಅವರ ಸಾಮಾಜಿಕ ಅಕಾರದ ಬಗ್ಗೆ ಹಾಗೂ ಪಂಡಿತ್ ದೀನ್‌ದಯಾಳ್ ಉಪಾಧ್ಯಾಯ ದಲಿತರ ಆರ್ಥಿಕ ಸಶಕ್ತೀಕರಣದ ಬಗ್ಗೆ ಪ್ರತಿಪಾದನೆ ಮಾಡಿದರು. ಪ್ರಧಾನಿ ನರೇಂದ್ರಮೋದಿ ನಮ್ಮ ಸರಕಾರವನ್ನು ಬಡವರಿಗೆ ಅರ್ಪಣೆ ಮಾಡಿದ್ದಾರೆ ಎಂದು ಹೇಳಿದರು.

ದಲಿತ ಸಮುದಾಯದ ರಾಜ್ಯದ ನಿವೃತ್ತ ಐಎಎಸ್ ಅಕಾರಿಯೊಬ್ಬರು ಬಿಜೆಪಿ ಸೇರಲು ಉತ್ಸುಕರಾಗಿದ್ದಾರೆ. ಅದಕ್ಕಾಗಿ ನೀವು ಬೆಂಗಳೂರಿಗೆ ಬರಬೇಕು ಎಂದು ಯಡಿ ಯೂರಪ್ಪ, ಕೇಂದ್ರ ಸಚಿವರಾದ ಅನಂತ್‌ಕುಮಾರ್, ಸದಾನಂದಗೌಡ ಕೆಲವು ದಿನಗಳ ಹಿಂದಷ್ಟೆ ನನಗೆ ಹೇಳಿದರು. ಅವರ ಆಹ್ವಾನವನ್ನು ತಕ್ಷಣ ಒಪ್ಪಿಕೊಂಡು ಇಲ್ಲಿಗೆ ಬಂದಿದ್ದೇನೆ ಎಂದು ಅವರು ತಿಳಿಸಿದರು.ಂಬೇಡ್ಕರ್ ಇಂದು(ಅ.14ರಂದು) ಬೌದ್ಧಧರ್ಮ ಸ್ವೀಕರಿಸಿದ ದಿನ. ಬೌದ್ಧ ಧರ್ಮವು ನಮ್ಮ ದೇಶದ ಮಣ್ಣಿನೊಂದಿಗೆ ಬೆರೆತ ಧರ್ಮ. ಶಾಂತಿ, ಸಹೋದರತೆ, ಸಹಬಾಳ್ವೆಯನ್ನು ಪ್ರತಿಪಾದನೆ ಮಾಡುವ ಧರ್ಮ ಎಂದು ರಾಜನಾಥ್‌ಸಿಂಗ್ ಹೇಳಿದರು.
ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವ ಕೆ.ಶಿವರಾಮ್ ಇಂದಿನಿಂದಲೇ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳ ಬೇಕು. ರಾಜ್ಯದ ಎಲ್ಲ ಜಿಲ್ಲೆಗಳು, ತಾಲೂಕುಗಳು, ಗ್ರಾಮಗಳಿಗೆ ತೆರಳಿ ಬಿಜೆಪಿಯ ತತ್ವ, ಸಿದ್ಧಾಂತಗಳನ್ನು ಜನರಿಗೆ ತಿಳಿಸಬೇಕು. ಆ ಮೂಲಕ ನಮ್ಮ ಸರಕಾರಕ್ಕೆ ತಳಮಟ್ಟದಿಂದ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದು ಅವರು ಕರೆ ನೀಡಿದರು.

ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತ್ ಕುಮಾರ್, ಡಿ.ವಿ.ಸದಾನಂದಗೌಡ, ಸಂಸದ ಪಿ.ಸಿ. ಮೋಹನ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಳಾದ ಅರವಿಂದ ಲಿಂಬಾವಳಿ, ಸಿ.ಟಿ.ರವಿ, ಶೋಭಾ ಕರಂದ್ಲಾಜೆ, ಶಾಸಕರಾದ ಸುರೇಶ್‌ಕುಮಾರ್, ವಿ.ಸೋಮಣ್ಣ, ಗೋ.ಮದುಸೂಧನ್, ಡಿ.ಎಸ್.ವೀರಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಪ್ರಮುಖ ನಾಯಕರ ಗೈರು
ಬಿಜೆಪಿ ಕೋರ್ ಕಮಿಟಿ ಸದಸ್ಯರಾದ ವಿರೋಧ ಪಕ್ಷದ ನಾಯಕ ಜಗದೀಶ್‌ಶೆಟ್ಟರ್, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಸಂಸದ ಪ್ರಹ್ಲಾದ್‌ಜೋಶಿ, ಮಾಜಿ ಡಿಸಿಎಂ ಆರ್.ಅಶೋಕ್, ಗೋವಿಂದ ಕಾರಜೋಳ, ನಳಿನ್‌ಕುಮಾರ್ ಕಟೀಲ್, ಸಿ.ಎಂ.ಉದಾಸಿ ಸೇರಿದಂತೆ ಇನ್ನಿತರ ಪ್ರಮುಖ ನಾಯಕರ ಗೈರು ಎದ್ದು ಕಾಣುತ್ತಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X