ಅ.17ಕ್ಕೆ ರಾಜ್ಯ ಸರಕಾರಿ ಹಾಸ್ಟೆಲ್ ಹೊರಗುತ್ತಿಗೆ ನೌಕರರ ಉಡುಪಿ ಜಿಲ್ಲಾ ಸಮಾವೇಶ
ಕುಂದಾಪುರ, ಅ.14: ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಉಡುಪಿ ಜಿಲ್ಲಾ ಸಮಿತಿ ನೌಕರರ ಸಮಾವೇಶ ಅ.17ರಂದು ಅಪರಾಹ್ನ 3 ಗಂಟೆಗೆ ಕುಂದಾಪುರದ ಕಾರ್ಮಿಕ ಭವನದಲ್ಲಿ ನಡೆಯಲಿದೆ.
ನೇರ ನೇಮಕಾತಿಯನ್ನು ಕೈಬಿಡಲು ಒತ್ತಾಯಿಸಿ, ಹೊರ ಗುತ್ತಿಗೆ ನೌಕರರನ್ನು ಖಾಯಂಗೊಳಿಸಲು ಆಗ್ರಹಿಸಿ, 10ನೆ ತರಗತಿಯ ಶಿಕ್ಷಣ ಅರ್ಹತೆಯ ಷರತ್ತನ್ನು ರದ್ದು ಮಾಡುವಂತೆ ಆಗ್ರಹಿಸಿ ಬೆಂಗಳೂರು ವಿಧಾನಸೌಧ ಚಲೋ ಹೋರಾಟ ಕಾರ್ಯಕ್ರಮವನ್ನು ರೂಪಿಸಲು ಈ ಸಮಾವೇಶದಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಹಾಸ್ಟೆಲ್ ಹಾಗೂ ಹೊರಗುತ್ತಿಗೆ ನೌಕರರ ಸಂಘದ ರಾಜ್ಯ ಅಧ್ಯಕ್ಷ ನಿತ್ಯಾನಂದ ಸ್ವಾಮಿ ಸಮಾವೇಶವನ್ನು ಉದ್ಘಾಟಿಸ ಲಿದ್ದಾರೆ ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story