Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕಾನ್ಸಾಸ್ ಗಾರ್ಡನ್ ಸಿಟಿಯಲ್ಲಿ ಮುಸ್ಲಿಮರ...

ಕಾನ್ಸಾಸ್ ಗಾರ್ಡನ್ ಸಿಟಿಯಲ್ಲಿ ಮುಸ್ಲಿಮರ ವಿರುದ್ಧ ಬಾಂಬ್ ದಾಳಿಗೆ ಸಂಚು: ಮೂವರ ಬಂಧನ

ವಾರ್ತಾಭಾರತಿವಾರ್ತಾಭಾರತಿ15 Oct 2016 1:32 PM IST
share
ಕಾನ್ಸಾಸ್ ಗಾರ್ಡನ್ ಸಿಟಿಯಲ್ಲಿ ಮುಸ್ಲಿಮರ ವಿರುದ್ಧ ಬಾಂಬ್ ದಾಳಿಗೆ ಸಂಚು: ಮೂವರ ಬಂಧನ

ಕಾನ್ಸಾಸ್, ಅ.15: ಸೊಮಾಲಿ ವಲಸಿಗರು ವಾಸಿಸುತ್ತಿರುವ ಪಶ್ಚಿಮ ಕಾನ್ಸಾಸ್ ನ ಗಾರ್ಡನ್ ಸಿಟಿಯ ಅಪಾರ್ಟುಮೆಂಟ್ ಕಾಂಪ್ಲೆಕ್ಸ್ ಒಂದರ ಮೇಲೆ ಬಾಂಬ್ ದಾಳಿ ನಡೆಸಲು ಸಂಚು ನಡೆಸಿದ್ದಾರೆನ್ನಲಾದ ಕಾನ್ಸಾಸ್ ತೀವ್ರಗಾಮಿಗಳ ಗುಂಪಿನ ಮೂರು ಮಂದಿ ಸದಸ್ಯರನ್ನು ಶುಕ್ರವಾರ ಬಂಧಿಸಲಾಗಿದೆ. ನವೆಂಬರ್ ತಿಂಗಳಲ್ಲಿ ನಡೆಯುವ ಚುನಾವಣೆಯ ನಂತರ ಈ ಬಾಂಬ್ ದಾಳಿ ನಡೆಸಲು ಯೋಜಿಸಲಾಗಿತ್ತೆಂದು ತಿಳಿದು ಬಂದಿದೆ.

ಎಂಟು ತಿಂಗಳು ಕಾಲ ನಡೆದ ಎಫ್ ಬಿ ಐ ತನಿಖೆಯ ನಂತರ ಈ ಬಂಧನ ನಡೆದಿದೆ. ಬಂಧಿತರನ್ನುಕರ್ಟಿಸ್ ವೇನ್ ಅಲ್ಲೆನ್ (49),ಪ್ಯಾಟ್ರಿಕ್ ಯುಜೀನ್ ಸ್ಟೀನ್ (47) ಮತ್ತು ಗವಿನ್ ವೇನ್ ರೈಟ್ (49) ಎಂದು ಗುರುತಿಸಲಾಗಿದೆ.

ಕ್ರುಸೇಡರ್ಸ್ ಎಂಬ ಹೆಸರಿನ ಉಗ್ರಗಾಮಿ ಸಂಘಟನೆಯ ಸದಸ್ಯರು ಅವರೆಂದು ಹೇಳಲಾಗಿದ್ದು ಅವರು ಸರಕಾರ ವಿರೋಧಿ, ಮುಸ್ಲಿಂ ವಿರೋಧಿ ಹಾಗೂ ವಲಸಿಗ ವಿರೋಧಿ ಭಾವನೆಗಳನ್ನು ಹೊಂದಿದ್ದಾರೆನ್ನಲಾಗಿದೆ. ಈ ಸಂಘಟನೆ ಉಗ್ರವಾದಿ ಕೃತ್ಯಗಳಲ್ಲಿ ತೊಡಗಿದೆಯೇ ಎಂಬ ಬಗೆಗಿನ ತನಿಖೆಯನ್ನು ಎಫ್ ಬಿ ಐ ಫೆಬ್ರವರಿ ತಿಂಗಳಲ್ಲಿ ಕೈಗೆತ್ತಿಕೊಂಡಿದ್ದು ಕಾನ್ಸಾಸ್ ನಲ್ಲಿ ನಡೆದ ಸಂಘಟನೆಯ ಸಭೆಗಳಲ್ಲಿ ವಿಶ್ವಾಸನೀಯ ಮೂಲವೊಂದು ಕೂಡ ಭಾಗವಹಿಸಿತ್ತೆನ್ನಲಾಗಿದೆ.

ಜೂನ್ ತಿಂಗಳಲ್ಲಿ ನಡೆದ ಸಂಘಟನೆಯ ಸಭೆಯೊಂದರಲ್ಲಿ ಸ್ಟೀನ್, ಒರ್ಲಾಂಡೋ ನೈಟ್ ಕ್ಲಬ್‌ ಶೂಟಿಂಗ್ ಮಾದರಿಯ ದಾಳಿಯನ್ನು ಗಾರ್ಡನ್ ಸಿಟಿಯ ಮುಸ್ಲಿಂ ವಲಸಿಗರ ಮೇಲೆ ನಡೆಸುವ ಪ್ರಸ್ತಾಪ ಮಾಡಿದ್ದನೆಂದು ಹೇಳಲಾಗಿದೆ. ಅಲ್ಲಿ ಹೆಚ್ಚಿನ ಸಂಖ್ಯೆಯ ಸೊಮಾಲಿಗಳು ವಾಸಿಸುತ್ತಿರುವುದರಿಂದ ಹಾಗೂ ಅಲ್ಲಿನ ಅಪಾರ್ಟುಮೆಂಟ್ ಒಂದನ್ನು ಮಸೀದಿಯಾಗಿ ಪರಿವರ್ತಿಸಿದ್ದರಿಂದ ದಾಳಿ ನಡೆಸಲು ಯೋಜಿಸಲಾಗಿತ್ತು ಎಂದು ವರದಿಯೊಂದು ತಿಳಿಸಿದೆ.

ರಕ್ತದೋಕುಳಿಯಿಂದ ಮಾತ್ರ ದೇಶದಲ್ಲಿ ಬದಲಾವಣೆ ತರಲು ಸಾಧ್ಯವೆಂದೂ ಆತ ಹೇಳಿಕೊಂಡಿದ್ದನೆನ್ನಲಾಗಿದೆ. ಗಾರ್ಡನ್ ಸಿಟಿಯಲ್ಲಿ ಟೈಸನ್ ಫುಡ್ಸ್ ಕಸಾಯಿಖಾನೆಯಿರುವ ಕಾರಣ ಅಲ್ಲಿ ವಲಸಿಗರು ಹೆಚ್ಚಾಗಿ ವಾಸಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X