Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾರ್ವಜನಿಕ ಸ್ಮಶಾನದಲ್ಲಿ ದಲಿತ ವ್ಯಕ್ತಿಯ...

ಸಾರ್ವಜನಿಕ ಸ್ಮಶಾನದಲ್ಲಿ ದಲಿತ ವ್ಯಕ್ತಿಯ ಶವ ಸಂಸ್ಕಾರಕ್ಕೆ ವಿರೋಧ!

ವಾರ್ತಾಭಾರತಿವಾರ್ತಾಭಾರತಿ15 Oct 2016 7:27 PM IST
share
ಸಾರ್ವಜನಿಕ ಸ್ಮಶಾನದಲ್ಲಿ ದಲಿತ ವ್ಯಕ್ತಿಯ ಶವ ಸಂಸ್ಕಾರಕ್ಕೆ ವಿರೋಧ!

ಭುವನೇಶ್ವರ, ಅ.15: ಎಚ್‌ಐವಿ ವೈರಾಣುವಿಗೆ ಬಲಿಯಾದ ದಲಿತನೊಬ್ಬನ ಅಂತ್ಯಸಂಸ್ಕಾರವನ್ನು ಸಾರ್ವಜನಿಕ ಶ್ಮಶಾನದಲ್ಲಿ ನಡೆಸಲು ಸ್ಥಳೀಯರು ಆಕ್ಷೇಪಿಸಿದುದರಿಂದ ಆತನ ಮನೆಯೆದುರೇ ಅಂತಿಮಕ್ರಿಯೆ ನಡೆಸಬೇಕಾಯಿತು.

35ರ ಹರೆಯದ ಪ್ರಕಾಶ್ ಜೇನಾ (ಹೆಸರು ಬದಲಾಯಿಸಲಾಗಿದೆ) ಎಂಬ ಈ ವ್ಯಕ್ತಿಗೆ ಮುಂಬೈಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಎಚ್‌ಐವಿ ಸೋಂಕು ತಗಲಿತ್ತೆನ್ನಲಾಗಿದೆ. ಆರೋಗ್ಯ ಹದಗೆಡಲು ತೊಡಗಿದ ಬಳಿಕ ಆತ ಒಡಿಶಾದ ಬಾಲ್ಸೂರು ಜಿಲ್ಲೆಯ ಸೋರೊ ಬ್ಲಾಕ್‌ನ ತನ್ನ ತಂದೆಯ ಗ್ರಾಮಕ್ಕೆ ಮರಳಿ ಬಂದಿದ್ದನು. ಜೇನಾನನ್ನು ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತ ಶುಕ್ರವಾರ ಕೊನೆಯುಸಿರೆಳೆದಿದ್ದನು.

ಜೇನಾನ ಮೃತದೇಹವನ್ನು ಹಂಸಿಯಾನಿಪಾಡದ ಸಾರ್ವಜನಿಕ ಶ್ಮಶಾನಕ್ಕೆ ಒಯ್ಯಲು ಕುಟುಂಬಿಕರು ಯೋಚಿಸಿದಾಗ, ಅವರು ಅಲ್ಲಿಗೆ ಹೋಗಬಾರದೆಂದು ಗ್ರಾಮಸ್ಥರು ತಡೆದರು.

ತಾವು ಗ್ರಾಮಸ್ಥರ ಮನವೊಲಿಸಲು ಯತ್ನಿಸಿದೆವಾದರೂ, ಅವರು ಕಿವಿಗೊಡಲಿಲ್ಲ. ಎಚ್‌ಐವಿಗೆ ಬಲಿಯಾದವನ ಅಂತ್ಯಕ್ರಿಯೆಯನ್ನು ಸಾರ್ವಜನಿಕ ರುದ್ರಭೂಮಿಯಲ್ಲಿ ಮಾಡಬಾರದೆಂದು ಗ್ರಾಮಸ್ಥರು ಪಟ್ಟು ಹಿಡಿದರು. ಅನಿವಾರ್ಯವಾಗಿ ಮೃತನ ಮನೆಯ ಮುಂದೆಯೇ ಚಿತೆಯನ್ನು ನಿರ್ಮಿಸಬೇಕಾಯಿತೆಂದು ಸೋರೊ ಪೊಲೀಸ್ ಠಾಣೆಯ ನಿರೀಕ್ಷಕ ಕಾರ್ತಿಕ್ ಮಲಿಕ್ ತಿಳಿಸಿದ್ದಾರೆ.

ಮೃತನ ಪತ್ನಿಯೂ ಎಚ್‌ಐವಿ ಪೀಡಿತಳಾಗಿದ್ದು, ಅವರ ಒಂದು ಮಗುವೂ ಕಾಯಿಲೆಗೆ ಬಲಿಯಾಗಿತ್ತೆನ್ನಲಾಗಿದೆ.

ಎಚ್‌ಐವಿ ಪೀಡಿತರ ಹಕ್ಕುಗಳನ್ನು ರಕ್ಷಿಸುವ ಉದ್ದೇಶದ ಎಚ್‌ಐವಿ ಮತ್ತು ಏಡ್ಸ್ (ತಡೆ ಮತ್ತು ನಿಯಂತ್ರಣ) ಕಾಯ್ದೆ-2014ರ ತಿದ್ದುಪಡಿಗಳಿಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದ ಕೆಲವೇ ದಿನಗಳಲ್ಲಿ ಮೃತ ಎಚ್‌ಐವಿ ಪೀಡಿತನ ವಿರುದ್ಧ ತಾರತಮ್ಯದ ಈ ಪ್ರಕರಣ ನಡೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X