Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಳೆಗಾಗಿ ಪೂಜೆ ಸಲ್ಲಿಸಿದ ಕೃಷಿ...

ಮಳೆಗಾಗಿ ಪೂಜೆ ಸಲ್ಲಿಸಿದ ಕೃಷಿ ಕುಟುಂಬಗಳು

ರೈತರಿಂದ ಹುಣ್ಣಿಮೆ ಹಬ್ಬ ಆಚರಣೆ

ವಾರ್ತಾಭಾರತಿವಾರ್ತಾಭಾರತಿ16 Oct 2016 10:32 PM IST
share
ಮಳೆಗಾಗಿ ಪೂಜೆ ಸಲ್ಲಿಸಿದ ಕೃಷಿ ಕುಟುಂಬಗಳು

ಸೊರಬ,ಅ.16: ತಾಲೂಕಿನಾದ್ಯಂತ ಬರದ ಛಾಯೆ ಆವರಿಸಿದ್ದರೂ ರೈತರು ಭೂಮಿ ಹುಣ್ಣಿಮೆ ಹಬ್ಬವನ್ನು ರವಿವಾರ ಸಂಭ್ರಮದಿಂದ ಆಚರಿಸಿದರು. ಕಳೆದ ಎರಡು ವರ್ಷಗಳಿಂದ ವರುಣ ಮುನಿಸಿಕೊಂಡಿದ್ದಾನೆ. ರೈತ ಸಮೂಹ ಸಂಕಷ್ಟದಲ್ಲಿದೆ. ಆದರೂ ಸಹ ನಾವು ನಂಬಿದ ಭೂಮಿ ನಮ್ಮನ್ನು ಕಾಯುತ್ತದೆ ಎಂಬ ಅಚಲ ನಂಬಿಕೆ ರೈತ ಸಮುದಾಯದ್ದಾಗಿದೆ. ಒಂದಡೆ ಆಗಸವನ್ನು ನೋಡುತ್ತಾ ಮಳೆಗಾಗಿ ಕಾಯುತ್ತಾ, ಮತ್ತೊಂಡೆ ಭಕ್ತಿಯಿಂದ ಭೂಮಿ ಹುಣ್ಣಿಮೆಯಲ್ಲಿ ತೊಡಗಿದ್ದು ಕಂಡು ಬಂದಿತು. ಮಳೆ ಮುಗಿದು ತೆನೆಯೊಡೆಯುವ ಬೆಳೆಗೆ ಕೃಷಿ ಕುಟುಂಬಗಳು ಪೂಜೆ ಸಲ್ಲಿಸಿ ಎಡೆ ಅರ್ಪಿಸುವ ಸಂಪ್ರದಾಯ ಮಲೆನಾಡ ಭಾಗದಲ್ಲಿದೆ. ನಾಗರಿಕತೆ ಬೆಳೆದಂತೆ ನಮ್ಮ ಆಚಾರ-ವಿಚಾರಗಳನ್ನು ಒಂದೊಂದಾಗಿ ಮರೆಯುತ್ತೇವೆ ಎಂದು ಹೇಳುವವರಿಗೆ ಭೂಮಿ ಹುಣ್ಣಿಮೆಯ ಭೂಮಿ ಪೂಜೆ ಉತ್ತರ ನೀಡುತ್ತದೆ. ವಿಶೇಷ ತಿಂಡಿ-ತಿನಿಸುಗಳು :

 ತಾಲೂಕಿನ ಗ್ರಾಮೀಣ ಭಾಗದಲ್ಲಿ ಕೃಷಿಕರು ವಿವಿಧ ರೀತಿಯ ಅಡುಗೆ ತಯಾರಿಸಿ ಭೂಮಿಗೆ ಅರ್ಪಿಸಿದರು. ಕೃಷಿಕರೇ ಬೆಳೆಯುವ ಬಾಳೆಕಾಯಿ, ಬಸಳೆ, ಹರವೆ ಸೊಪ್ಪು, ಪ್ರತಿಯೊಂದು ತರಕಾರಿಯನ್ನು ಒಟ್ಟು ಮಾಡಿ ಪಲ್ಯೆ ತಯಾರಿಸುವುದು, ಅಮಟೆಕಾಯಿ, ಸಿಹಿ ಕುಂಬಳ, ಹಾಲು ಕುಂಬಳ, ಸೌತೆಕಾಯಿ, ಸೋರೆಕಾಯಿ, ರೊಟ್ಟಿ, ಮೊಸರು ಬುತ್ತಿ, ಸಿಹಿ ಕಡುಬು, ಅಕ್ಕಿ ಕಡುಬು, ಕಜ್ಜಾಯ, ಕಲಸನ್ನ ಮೊದಲಾದವುಗಳಿಂದ ವಿಧ ವಿಧವಾದ ಅಡುಗೆ ತಯಾರಿಸುವ ಅವಿಭಕ್ತ ಕುಟುಂಬದ ಹೆಣ್ಣು ಮಕ್ಕಳು ಭೂಮಣ್ಣಿ ಬುಟ್ಟಿಯಲ್ಲಿ ತುಂಬಿ ತಲೆಯ ಮೇಲಿಟ್ಟು ಕೃಷಿ ಭೂಮಿಯತ್ತ ತೆರಳುವುದು ಸಂಪ್ರದಾಯ. ಅಲ್ಲಿ ಭತ್ತದ ಎರಡು ಸಸಿಗಳನ್ನು ಒಂದಾಗಿ ಸೇರಿಸಿ ಹಸಿರು ಸೀರೆ ಇರಿಸಿ, ಆಭರಣಗಳಿಂದ ಸಿಂಗರಿಸಿ ಪೂಜೆ ಸಲ್ಲಿಸಿದರು. ಮಳೆರಾಯನು ಜನ-ಜಾನುವಾರುಗಳ ಮೇಲೆ ಕರುಣೆ ತೋರಿ ಉತ್ತಮ ಮಳೆಯಾಗಬೇಕು. ಈಗಾಗಲೇ ಸಂಕಷ್ಟದಲ್ಲಿರುವ ರೈತರ ಮುಖದ ಮೇಲೆ ಮಂದಹಾಸ ಕಾಣುವಂತಾಗಲಿ ಎಂದು ಕೃಷಿಕರು ಭೂಮಿ ತಾಯಿಯಲ್ಲಿ ಬೇಡಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X