Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜನಪ್ರತಿನಿಧಿಗಳಿಂದ ಗಿರಿಜನರ ಕಡೆಗಣನೆ

ಜನಪ್ರತಿನಿಧಿಗಳಿಂದ ಗಿರಿಜನರ ಕಡೆಗಣನೆ

ವಾರ್ತಾಭಾರತಿವಾರ್ತಾಭಾರತಿ16 Oct 2016 11:47 PM IST
share
ಜನಪ್ರತಿನಿಧಿಗಳಿಂದ ಗಿರಿಜನರ ಕಡೆಗಣನೆ

ಎಸ್.ಕೆ.ಲಕ್ಷ್ಮೀಶ್ ಮಡಿಕೇರಿ

ಮಡಿಕೇರಿ, ಅ.16: ಪ್ರಕೃತಿಯೊಂದಿಗೆ ಭಾವನಾತ್ಮಕವಾಗಿ ಬದುಕು ಸಾಗಿಸುತ್ತಿರುವ ಆದಿವಾಸಿಗಳ ಅಭ್ಯುದಯಕ್ಕೆಂದು ಜಾರಿಗೆ ತಂದಿರುವ ಆದಿವಾಸಿಗಳ ಅರಣ್ಯ ಹಕ್ಕು ಮಸೂದೆ ಜಾರಿಗೆ ಬಂದು 10 ವರ್ಷಗಳು ಕಳೆದಿದ್ದರೂ ಇದರ ಲಾಭ ಮಾತ್ರ ನೈಜ ಫಲಾನುಭವಿಗಳ ಪಾಲಿಗೆ ಗಗನ ಕುಸುಮವಾದಂತಾಗಿದೆ.

ಕೇಂದ್ರ ಸರಕಾರ ಜಾರಿಗೆ ತಂದಿರುವ ಈ ಯೋಜನೆಯ ಅನುಷ್ಠಾನಕ್ಕೆ ಕೇಂದ್ರ ಸರಕಾರ ಅಧೀನದ ಅರಣ್ಯ ಇಲಾಖೆಯೇ ಅಡ್ಡಿಯಾಗಿದೆ. ಕೇಂದ್ರ ಸರಕಾರ ಬಲಗೈಯಲ್ಲಿ ನೀಡಿದಂತೆ ಮಾಡಿ ಅರಣ್ಯ ಇಲಾಖೆ ಮೂಲಕ ಎಡಗೈಯಲ್ಲಿ ಕಸಿದುಕೊಳ್ಳುವ ಯತ್ನ ಮಾಡುತ್ತಿದೆ ಎನ್ನುವ ಆರೋಪಗಳು ಕೇಳಿ ಬಂದಿದೆ.

ಕೊಡಗು ಜಿಲ್ಲೆಯಲ್ಲಿ ಸುಮಾರು 58 ಸಾವಿರ ಆದಿವಾಸಿ ಜನರಿದ್ದಾರೆ. ಬೆಟ್ಟಕುರುಬ, ಜೇನುಕುರುಬ, ಪಣಿಯ, ಯರವ, ಅಡಿಯ, ಕುಡಿಯ, ಮಲೆಕುಡಿಯ, ಕೊರಗ, ಬೆಟ್ಟ ಕುರುಬಸೋಲಿಗ ಸೇರಿದಂತೆ ಸುಮಾರು 40 ಪಂಗಡದವರಿದ್ದಾರೆ. ಪ್ರಾಣಿ, ಪಕ್ಷಿಗಳ ವಾಸ ಆರಂಭವಾದಾಗಿನಿಂದ ಅರಣ್ಯ ಪ್ರದೇಶದಲ್ಲಿ ಮತ್ತು ಅರಣ್ಯದ ಅಂಚಿನಲ್ಲಿ ಇವರು ವಾಸಿಸುತ್ತಿದ್ದಾರೆ. ಆದರೆ, ಪ್ರಕೃತೀಕರಣ ಹಾಗೂ ವನ್ಯ ಜೀವಿಗಳ ಸಂರಕ್ಷಣೆಯ ನೆಪವೊಡ್ಡಿ ಅರಣ್ಯ ಇಲಾಖೆ ಆದಿವಾಸಿಗಳನ್ನು ಅರಣ್ಯ ಭಾಗದಿಂದ ಒಕ್ಕಲೆಬ್ಬಿಸುವ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿವೆ ಎಂದು ಆರೋಪಿಸಲಾಗಿದೆ.

ಪ್ರಾಣಿಪಕ್ಷಿಗಳೊಂದಿಗೆ ಬೆಳೆದ ಇವರು ಕಾಡಿನಲ್ಲಿರುವಾಗಲೇ ಹುಲಿ ಸಂರಕ್ಷಿತ ಪ್ರದೇಶ ಅಥವಾ ವನ್ಯಜೀವಿ ಸಂರಕ್ಷಣಾ ಪ್ರದೇಶವೆಂದು ಘೋಷಿಸುವ ಮೂಲಕ ಪರೋಕ್ಷವಾಗಿ ಗಿರಿಜನರನ್ನು ಕಾಡು ಬಿಡಿ ಎಂದು ಆಜ್ಞಾಪಿಸಲಾಗಿದೆ. ಆದರೆ, ಈ ನಡುವೆ ಆದಿವಾಸಿಗಳ ಉದ್ಧಾರಕ್ಕೆಂದು ಅರಣ್ಯ ಹಕ್ಕು ಮಸೂದೆ ಜಾರಿಗೆ ತಂದು ಗೊಂದಲ ಸೃಷ್ಟಿಸಲಾಗಿದೆ. ಕಾಯ್ದೆ ಜಾರಿಯಾಗಿದೆಯೇ ಹೊರತು ಯಾವುದೇ ಹಕ್ಕುಗಳನ್ನು ಪಡೆಯುವ ಸ್ವಾತಂತ್ರ್ಯ ಆದಿವಾಸಿಗಳಿಗೆ ಇಲ್ಲದಾಗಿದೆ. ಒಕ್ಕಲೆಬ್ಬಿಸುವ ಪ್ರಯತ್ನಗಳಿಗೆ ಸರಕಾರವೇ ನೇರ ಹೊಣೆಯಾಗಿರುವಾಗ ಅರಣ್ಯ ಹಕ್ಕು ನೀಡುತ್ತೇವೆ ಎನ್ನುವ ಕಾಯ್ದೆಯ ಜಾರಿಯಾದರೂ ಯಾಕೆ ಬೇಕಿತ್ತು ಎಂದು ಬುಡಕಟ್ಟು ಜನರು ಪ್ರಶ್ನಿಸುತ್ತಿದ್ದಾರೆ. ಬುಡಕಟ್ಟು ಸಮುದಾಯದವರನ್ನು ನಿರ್ಲಕ್ಷಿಸಿರುವ ಸರಕಾರಗಳು ಅರಣ್ಯ ಪ್ರದೇಶದಲ್ಲಿ ಸಾಗುವಳಿ ಮಾಡುತ್ತಿರುವ ಹಾಗೂ ವಾಸಿಸುತ್ತಿರುವ ಜನರನ್ನು ಒಕ್ಕಲೆಬ್ಬಿಸುತ್ತಿವೆ. ಈ ಮೂಲಕ ಬುಡಕಟ್ಟು ಸಮುದಾಯದ ಪಾರಂಪರಿಕ ಬದುಕಿಗೆ ಧಕ್ಕೆ ಉಂಟು ಮಾಡುತ್ತಿವೆ. ಅರಣ್ಯ ಹಕ್ಕು ಕಾಯ್ದೆ ಪ್ರಕಾರ ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಜನರಿಗೆ ಭೂಮಿಯ ಹಕ್ಕು ನೀಡುವ ಹಕ್ಕುಪತ್ರ ವಿತರಿಸಬೇಕು ಎಂದು ಸ್ಪಷ್ಟವಾಗಿ ತಿಳಿಸಲಾಗಿದ್ದರೂ ಅಧಿಕಾರಿಗಳು ಮಾತ್ರ ಈ ಬಗ್ಗೆ ಕಾಳಜಿ ವಹಿಸಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X