Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದಲಿತ ಸಂಘಟನೆಯ ನೇತೃತ್ವದಲ್ಲಿ ಪುತ್ತೂರು...

ದಲಿತ ಸಂಘಟನೆಯ ನೇತೃತ್ವದಲ್ಲಿ ಪುತ್ತೂರು ನಗರಸಭೆಗೆ ಮುತ್ತಿಗೆ

ವಾರ್ತಾಭಾರತಿವಾರ್ತಾಭಾರತಿ17 Oct 2016 7:40 PM IST
share
ದಲಿತ ಸಂಘಟನೆಯ ನೇತೃತ್ವದಲ್ಲಿ ಪುತ್ತೂರು ನಗರಸಭೆಗೆ ಮುತ್ತಿಗೆ

ಪುತ್ತೂರು, ಅ.17: ಪುತ್ತೂರು ನಗರಸಭಾ ವ್ಯಾಪ್ತಿಯ ಪಡ್ನೂರು ಮತ್ತು ಬನ್ನೂರು ಗ್ರಾಮಕ್ಕೆ ಸಂಬಂಧಿಸಿದ ಗುರುಂಪುನಾರ್ ಕಾಲನಿಗೆ ರಸ್ತೆ ನಿರ್ಮಾಣ ಮಾಡುವ ಮೂಲಕ ಈ ಭಾಗದ ಜನತೆಯ ಮೂವತ್ತು ವರ್ಷಗಳ ಬೇಡಿಕೆಯನ್ನು ಈಡೇರಿಸಬೇಕೆಂದು ಆಗ್ರಹಿಸಿ ಜಿಲ್ಲಾ ದಲಿತ್ ಸೇವಾ ಸಮಿತಿಯ ನೇತೃತ್ವದಲ್ಲಿ ಗುರುಂಪುನಾರ್ ವ್ಯಾಪ್ತಿಯ ಸಾರ್ವಜನಿಕರು ಸೋಮವಾರ ನಗರಸಭೆಗೆ ಮುತ್ತಿಗೆ ಹಾಕಿ ಧರಣಿ  ನಡೆಸಿದರು.

ನಗರಸಭೆಯ ಕಚೇರಿಯ ಎದುರು ನಡೆದ ಧರಣಿಯನ್ನುದ್ದೇಶಿಸಿ ಮಾತನಾಡಿದ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿಯ ಅಧ್ಯಕ್ಷ ಸೇಸಪ್ಪ ಬೆದ್ರಕಾಡು, ಗುರುಂಪುನಾರ್ ಪ್ರದೇಶಕ್ಕೆ ರಸ್ತೆ ನಿರ್ಮಿಸಿ ಕೊಡಬೇಕೆನ್ನುವುದು ಈ ಭಾಗದ ಜನತೆಯ ಮೂವತ್ತು ವರ್ಷಗಳ ಹಿಂದಿನ ಬೇಡಿಕೆಯಾಗಿದ್ದರೂ ಇನ್ನೂ ಈಡೇರಿಲ್ಲ. ಎಲ್ಲಾ ರಾಜಕೀಯ ಪಕ್ಷಗಳ ಜನಪ್ರತಿನಿಧಿಗಳು ರಾಜಕೀಯ ಮಾಡಿಕೊಂಡು ದಿನ ದೂಡುತ್ತಿದ್ದಾರೆಯೇ ಹೊರತು ರಸ್ತೆ ನಿರ್ಮಿಸಿಕೊಡಲು ಆಸಕ್ತಿ ತೋರುತ್ತಿಲ್ಲ. ಕಳೆದ ಎರಡು ವರ್ಷದ ಅವಧಿಯಲ್ಲಿ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಮೂರು ಬಾರಿ ಪ್ರತಿಭಟನೆ ನಡೆಸಲಾಗಿದ್ದರೂ ಈ ತನಕ ಏನೂ ಪ್ರಯೋಜನವಾಗಿಲ್ಲ. ಇದರ ಹಿಂದೆ ಷಡ್ಯಂತ್ರವಿದ್ದು, ಜನಪ್ರತಿನಿಧಿಗಳು ಭೂಮಾಲಕರೊಂದಿಗೆ ಹಣಕಾಸಿನ ವ್ಯವಹಾರ ನಡೆಸಿರುವ ಶಂಕೆ ಇದೆ ಎಂದು ಆರೋಪಿಸಿದರು.

ದಲಿತ್ ಸೇವಾ ಸಮಿತಿಯ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಗಿರಿಧರ್ ನಾಕ್ ಮಾತನಾಡಿ, ಈ ರಸ್ತೆ ವಿಚಾರದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದು, ನಗರಸಭೆಯ ಆಯುಕ್ತರಿಗೆ ಈ ಹಿಂದೆ ಸಲ್ಲಿಸಲಾಗಿದ್ದ ಅರ್ಜಿಯೇ ಮಾಯವಾಗಿದೆ ಎಂದು ಆರೋಪಿಸಿದರು. ರಸ್ತೆ ನಿರ್ಮಾಣವಾಗದಿದ್ದರೆ ನಾವು ಬಿಡುವುದಿಲ್ಲ. ಇದು ನಮ್ಮ ಅಚಲ ನಿರ್ಧಾರ ಎಂದು ಅವರು ಎಚ್ಚರಿಸಿದರು.

ಪೂರ್ವಾಹ್ನ 11 ಗಂಟೆ ವೇಳೆಗೆ ದಲಿತ ಸೇವಾ ಸಮಿತಿಯ ಮುಖಂಡರು ಹಾಗೂ ಕಾರ್ಯಕರ್ತರು ಮತ್ತು ಗುರುಂಪುನಾರ್ ಪ್ರದೇಶದ ನಾಗರಿಕರು ನಗರಸಭೆಯ ಮುಂಭಾಗದಲ್ಲಿ ಜಮಾಯಿಸಿ ಧರಣಿ ಆರಂಭಿಸಿದ್ದರು. ಕೆಲ ಗಂಟೆಗಳು ಕಳೆದರೂ ನಗರಸಭೆಯ ಅಧಿಕಾರಿಗಳಾಗಲೀ, ಜನಪ್ರತಿನಿಧಿಗಳಾಗಲೀ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಲು ಮುಂದೆ ಬರಲಿಲ್ಲ. ಈ ನಡುವೆ ನಗರಸಭೆಯ ಅಧ್ಯಕ್ಷೆ ಜಯಂತಿ ಬಲ್ನಾಡು ಧರಣಿನಿರತರ ಕಣ್ತಪ್ಪಿಸಿ ಹಿಂಬಾಗಿಲ ಮೂಲಕ ಕಚೇರಿಯಿಂದ ಹೊರನಡೆದುದನ್ನು ಗಮನಿಸಿದ ಧರಣಿನಿರತರು ಒಮ್ಮೆಲೆ ನಗರಸಭೆಯೊಳಗೆ ಪ್ರವೇಶಿಸಿ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ತುಸು ಗೊಂದಲದ ಪರಿಸ್ಥಿತಿ ನಿರ್ಮಾಣವಾಯಿತು. ತಕ್ಷಣ ಪೊಲೀಸರು ತಡೆದು ಪರಿಸ್ಥಿತಿಯನ್ನು ನಿಯಂತ್ರಿಸಿದರು.

ಧರಣಿಯ ಕಾವು ಏರಿದ ಹಿನ್ನೆಲೆಯಲ್ಲಿ ನಗರಸಭಾಧ್ಯಕ್ಷೆ ಜಯಂತಿ ಬಲ್ನಾಡು ಪೊಲೀಸ್ ರಕ್ಷಣೆ ಕೋರಿದ್ದರು. ನಂತರ ಪೊಲೀಸ್ ಬಂದೋಬಸ್ತಿನಲ್ಲಿ ಧರಣಿನಿರತರ ಬಳಿಗೆ ತೆರಳಿ ಅವರೊಂದಿಗೆ ಸಮಸ್ಯೆಯ ಕುರಿತು ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ನಗರಸಭೆಯ ಸದಸ್ಯ ಎಚ್.ಮುಹಮ್ಮದ್ ಅಲಿ ಇದ್ದರು.

ಮಾತುಕತೆಯ ವೇಳೆ ಧರಣಿನಿರತರು ಗುರುಂಪುನಾರ್ ಪ್ರದೇಶಕ್ಕೆ ರಸ್ತೆ ನಿರ್ಮಾಣ ಮಾಡುವ ತನಕ ಅಹೋರಾತ್ರಿ ಧರಣಿ ನಡೆಸುವುದಾಗಿ ಎಚ್ಚರಿಸಿದರು. ಅಲ್ಲದೆ ಇಂದೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕೆಂದು ಪಟ್ಟು ಹಿಡಿದರು. ಅದರಂತೆ ಪುರಸಭಾಧ್ಯಕ್ಷೆ ಜಯಂತಿ ಬಲ್ನಾಡು, ಸದಸ್ಯ ಮುಹಮ್ಮದ್ ಅಲಿ, ಆಯುಕ್ತೆ ರೂಪಾ ಶೆಟ್ಟಿ ದಲಿತ್ ಸೇವಾ ಸಮಿತಿಯ ಜಿಲ್ಲಾಧ್ಯಕ್ಷ ಸೇಸಪ್ಪ ಬೆದ್ರಕಾಡು ಅವರೊಂದಿಗೆ ಗುರುಂಪುನಾರ್ ಪ್ರದೇಶಕ್ಕೆ ತೆರಳಿ ಸ್ಥಳ ಪರಿಶೀಲನೆ ನಡೆಸಿದರು.

ಸ್ಥಳ ಪರಿಶೀಲಿಸಿದ ಬಳಿಕ ಧರಣಿನಿರತರ ಮನವೊಲಿಸಿದ ನಗರಸಭಾಧ್ಯಕ್ಷೆ ಜಯಂತಿ ಬಲ್ನಾಡು ಮತ್ತು ಸದಸ್ಯ ಮುಹಮ್ಮದ್ ಅಲಿ, ಬುಧವಾರ ಪುತ್ತೂರು ನಗರಸಭೆಯ ಕಚೇರಿಯಲ್ಲಿ ರಸ್ತೆಗೆ ಸಂಬಂಧಿಸಿದ ಜಾಗದ ಮಾಲಕರೊಂದಿಗೆ ಸಭೆ ನಡೆಸಿ ರಸ್ತೆ ನಿರ್ಮಾಣದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ಧರಣಿಯನ್ನು ಹಿಂದೆಗೆದುಕೊಳ್ಳಲಾಯಿತು.

ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿಯ ಮಾಜಿ ಗೌರವಾಧ್ಯಕ್ಷ ದಾಮೋದರ್ ಮುರ, ಸದಸ್ಯರಾದ ಸುರೇಂದ್ರ ನಾಯ್ಕೆ ಪಡ್ಡಾಯೂರು, ಸತೀಶ್ ಕೆ. ಕೃಷ್ಣನಗರ, ಸ್ಥಳೀಯ ನಿವಾಸಿ ಕೇಶವ ಗುರುಂಪುನಾರ್ ಮತ್ತಿತರರು ಧರಣಿಯ ನೇತೃತ್ವ ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X