Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹಿಳೆಯರ ಆತ್ಮಹತ್ಯೆ ಹೆಚ್ಚುತ್ತಿರುವುದು...

ಮಹಿಳೆಯರ ಆತ್ಮಹತ್ಯೆ ಹೆಚ್ಚುತ್ತಿರುವುದು ದುರ್ದೈವ: ನ್ಯಾಯಾಧೀಶ ಡಿ. ಕಂಬೇಗೌಡ

ಕಾನೂನು ಅರಿವು-ನೆರವು ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ17 Oct 2016 10:08 PM IST
share
ಮಹಿಳೆಯರ ಆತ್ಮಹತ್ಯೆ ಹೆಚ್ಚುತ್ತಿರುವುದು ದುರ್ದೈವ: ನ್ಯಾಯಾಧೀಶ ಡಿ. ಕಂಬೇಗೌಡ

ಚಿಕ್ಕಮಗಳೂರು, ಅ.17: ಕಾನೂನಿನ ಅರಿವು ಹೊಂದಿದ್ದರೂ ತಪ್ಪು-ಸರಿ ಅನ್ನುವುದು ತಿಳಿದಿದ್ದರೂ ಸಹ ಅಪರಾಧಗಳು ಹೆಚ್ಚುತ್ತಲೇ ಇವೆ. ಮಹಿಳೆಯರ ಆತ್ಮಹತ್ಯೆಗಳು ಎಗ್ಗಿಲ್ಲದೇ ನಡೆಯುತ್ತಿರುವುದು ದುರ್ದೈವ ಎಂದು ಎರಡನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ. ಕಂಬೇಗೌಡ ಹೇಳಿದರು.

ಅವರು ಕಾನೂನು ಸಾಕ್ಷರತಾ ರಥ ಪ್ರವಾಸದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಆರಕ್ಷಕ ಇಲಾಖೆ, ವಾರ್ತಾ ಇಲಾಖೆ ವತಿಯಿಂದ ಜರಗಿದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳ ಆತ್ಮಹತ್ಯೆಗಳು, ಒತ್ತಡಗಳಿಂದ ಸಂಭವಿಸುತ್ತಿವೆ, ವಿದ್ಯಾರ್ಥಿಗಳಿಗೆ ಸದಭಿರುಚಿಯ ಆಸಕ್ತಿಗಳು ಬರುವಂತೆ ಮಾಡುವ ಮಾರ್ಗದರ್ಶನ ಇಂದಿನ ಅತ್ಯವಶ್ಯಕವಾಗಿರುತ್ತದೆ ಎಂದು ತಿಳಿಸಿದರು.

 ಹದಿಹರೆಯದ ಹೆಣ್ಣುಮಕ್ಕಳು ಪ್ರೇಮಪಾಷಕ್ಕೆ ಸಿಲುಕಿ, ನಲುಗಿ, ದ್ವೇಷ ರೂಪುಗೊಂಡು ಬದುಕನ್ನು ಕಳೆದುಕೊಳ್ಳುವ ಪರಿಸ್ಥಿತಿ ಸಮಾಜದಲ್ಲಿ ಕಾಣುತ್ತಿದ್ದೇವೆ. ಆತ್ಮಹತ್ಯೆ ಮಹಾ ಅಪರಾಧವಾಗಿದ್ದು, ಸಂವಿಧಾನ ಜೀವಿಸುವ ಹಕ್ಕನ್ನು ನೀಡಿದೆ. ಶ್ರೀಸಾಮಾನ್ಯರಿಗಿಂತ ಉನ್ನತ ಹುದ್ದೆಯ ಐಎಎಸ್, ಐಪಿಎಸ್, ವೈದ್ಯರಾದಿಯಾಗಿ ಆತ್ಯಹತ್ಯೆಗೆ ಮುಂದಾಗುತ್ತಿರುವುದು ಶೋಚನೀಯ. ಕೆಲಸದ ಒತ್ತಡವನ್ನು ಮಾನಸಿಕವಾಗಿ ನಿಭಾಯಿಸುವುದು ಒಳಿತು ಎಂದರು. ಸರಕಾರಿ ಅಭಿಯೋಜಕಿ ಕಲ್ಪನಾ ಕೆ.ಎಸ್.ಮಾತನಾಡಿ, ಪ್ರತಿಭೆೆಗೆ ಪ್ರೇರಣೆ ನೀಡಲು ಮಹಿಳೆಗೆ ಕಾನೂನು ಕಾಯ್ದೆಗಳನ್ನು ರೂಪಿಸಿದೆ. ಮಹಿಳೆಯ ಸ್ಥಾನ, ಜವಾಬ್ದಾರಿ, ಗೌರವಯುತ ನಡವಳಿಕೆ ಬಗ್ಗೆ ವಿವರಿಸಿದರು. ಸಮಾರಂಭದಲ್ಲಿ ಚಿಕ್ಕಮಗಳೂರು ಸಮಗ್ರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಂಜಯ್ಯ ಒಡೆಯರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಿಳೆಯರಿಗೆ ಕಾನೂನಿನ ಅರಿವು ಅತ್ಯವಶ್ಯಕವಾಗಿದೆ. ಜೊತೆಜೊತೆಯಲ್ಲಿ ಶೈಕ್ಷಣಿಕ ಅರಿವನ್ನು ಹೊಂದಿ ಸಮಾಜ ಸಹೋದರ ಸಹೋದರಿ ಸಂಬಂಧಿಯೊಂದಿಗೆ ಕೌಟುಂಬಿಕ ಸಹಬಾಳ್ವೆ ಜೀವನವನ್ನು ಹೊಂದಿ ಶೋಷಣೆ ರಹಿತ ಸಮಾಜಮುಖಿಯಾಗಿ ಪಾಲ್ಗೊಂಡು ಕಾನೂನು ಕೊಡುಮಾಡುವ ತನ್ನ ಹಕ್ಕನ್ನು ಬಳಸಿಕೊಂಡು, ಕಾನೂನಿನ ರಕ್ಷಣೆಯನ್ನು ಹೊಂದಬೇಕು ಎಂದು ನುಡಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ವಕೀಲೆ ಎಚ್.ಎನ್.ಅರುಂಧತಿ ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ ಹಾಗೂ ಬಾಲ್ಯ ವಿವಾಹ ನಿಷೇಧ ನಿಯಮದ ಬಗ್ಗೆ ಮಾತನಾಡಿ, ಮಹಿಳೆಯರು ಉಚಿತ ಕಾನೂನು ರಕ್ಷಣೆಯನ್ನು ಪಡೆದುಕೊಂಡು ಸಮಾಜದ ಕುಟುಂಬದಲ್ಲಿ ಅನ್ಯೋನ್ಯತೆಯನ್ನು ಹೊಂದಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಬಸವ ಸದನ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆರ್.ಆರ್.ಮಹೇಶ್, ಮಹಿಳಾ ಮತ್ತು ಮಕ್ಕಳ ಸಂರಕ್ಷಣಾಧಿಕಾರಿ ಜೆ. ಉಷಾ, ಮೇಲ್ವಿಚಾರಕಿಯರಾದ ಗೌರಮ್ಮ, ವಿಜಯಕುಮಾರಿ ಉಪಸ್ಥಿತರಿದ್ದರು. ಲೀಲಾ ಸ್ವಾಗತಿಸಿ, ವಸಂತ್‌ಕುಮಾರಿ ವಂದಿಸಿ, ನ್ಯಾಯಾಂಗ ಇಲಾಖೆ ಸಿಬ್ಬಂದಿ ಶ್ರೀನಿವಾಸ್ ನಿರೂಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X