ಸಮಾಜ ಸೇವೆ ನಿರಂತರ: ಸಚಿವ ಪ್ರಮೋದ್

ಉಡುಪಿಪಿ, ಅ.17: ಶಾಸಕನಾಗಿ, ಸಚಿವನಾಗಿ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜನತೆ ನನಗೆ ತೋರಿದ ಪ್ರೀತಿ, ವಿಶ್ವಾಸ ಅಪರಿಮಿತ. ಇದನ್ನು ನಾನೆಂದೂ ಮರೆಯಲಾರೆ. ಜಾತಿ, ಮತ, ಧರ್ಮದ ಭೇದವಿಲ್ಲದೇ ಜನರ ಹಾಗೂ ಸಮಾಜ ಸೇವೆ ನಿರಂತರವಾಗಿ ಮಾಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಪ್ರಮೋದ್ ಮಧ್ವರಾಜ್ ಅವರ 49ನೆ ಜನ್ಮದಿನೋತ್ಸವದ ಅಂಗವಾಗಿ ಉಡುಪಿಯ ಪ್ರಮೋದ್ ಮಧ್ವರಾಜ್ ಅಭಿಮಾನಿ ಬಳಗ ಸೋಮವಾರ ನಗರದ ಪುರಭವನದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ನಾನು ಹುಟ್ಟುಹಬ್ಬ ಆಚರಣೆಯನ್ನು ಸದಾ ವಿರೋಧಿಸುತ್ತಾ ಬಂದವನು. ಆದರೆ ಸಾರ್ವಜನಿಕರಿಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಯ ತಜ್ಞ ವೈದ್ಯರಿಂದ ಹಮ್ಮಿಕೊಂಡಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕಾಗಿ ಸಮಾರಂಭವನ್ನು ಒಪ್ಪಿಕೊಂಡಿದ್ದೇನೆ ಎಂದರು.ಾರ್ಕಳ ಹೊಸ್ಮಾರು ಬೊಲ್ಯೊಟ್ಟು ಮಠದ ಶ್ರೀವಿಖ್ಯಾತಾನಂದ ಸ್ವಾಮೀಜಿ ಶುಭಾಶಂಸನೆ ಮಾಡಿದರು.ುಪಿ ಧರ್ಮಪ್ರಾಂತದ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಕುಂತಳನಗರ ಸಂತ ಅಂತೋನಿ ಚರ್ಚ್ನಧರ್ಮಗುರು ವಂ.ಡೆನ್ನಿಸ್ ಡೇಸಾ ಮತ್ತು ಮಂಗಳೂರು ಚೊಕ್ಕಬೆಟ್ಟು ಎಂ.ಜೆ.ಮಸೀದಿ ಇಮಾಮ್ ವೌಲಾನ ಯು.ಕೆ.ಅಬ್ದುಲ್ಲಝೀಝ್ ದಾರಿಮಿ ಶುಭ ಹಾರೈಸಿದರು.ೆಎಂಸಿ ಮಣಿಪಾಲದ ಯುರೋಲಜಿ ವಿಭಾಗದ ಮುಖ್ಯಸ್ಥ ಡಾ.ಪದ್ಮರಾಜ್ ಹೆಗ್ಡೆ, ಉದ್ಯಮಿ ಪುರುಷೋತ್ತಮ ಶೆಟ್ಟಿ ಉಪಸ್ಥಿತರಿದ್ದರು.
ಪ್ರಮೋದ್ ಅಭಿಮಾನಿ ಬಳಗದ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.
ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ನಿತ್ಯಾನಂದ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ಬ್ಲಾಕ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ ವಂದಿಸಿದರು.ಪ್ರಸಿದ್ಧ ಭಾಗವತರಾದ ಸುಬ್ರಮಣ್ಯ ಧಾರೇಶ್ವರ್ ಯಕ್ಷಗಾನ ಶೈಲಿಯಲ್ಲಿ ಪ್ರಮೋದ್ರನ್ನು ಪರಿಚಯಿಸಿದರು. ರೋಹಿತ್ ಉಳ್ಳಾಲ ಕಾರ್ಯಕ್ರಮವನ್ನು ನಿರೂಪಿಸಿದರು.





