Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ತೈಲ ಸ್ಥಾವರಗಳ ಮೇಲೆ ಪಾಕ್...

ಭಾರತದ ತೈಲ ಸ್ಥಾವರಗಳ ಮೇಲೆ ಪಾಕ್ ಗೂಢಚಾರರ ಕಣ್ಣು

ವಾರ್ತಾಭಾರತಿವಾರ್ತಾಭಾರತಿ18 Oct 2016 10:22 PM IST
share

ಹೊಸದಿಲ್ಲಿ, ಅ.18: ಭಾರತದ ತೈಲ ಸ್ಥಾವರಗಳ ಮೇಲೀಗ ಪಾಕಿಸ್ತಾನದ ರಾವುಗಣ್ಣು ಬಿದ್ದಿದೆ. ಗುಪ್ತಚರ ಬ್ಯೂರೊ ನಡೆಸಿದ ದೂರವಾಣಿ ಅಡ್ಡ ಹಾಯ್ಕೆಯಲ್ಲಿ ಇದು ಗೊತ್ತಾಗಿದೆ. ತೈಲೋದ್ಯಮದ ಕಾರ್ಯವಾಹಿಯೊಬ್ಬನಿಂದ ಪಾಕಿಸ್ತಾನದ ಗೂಢಚಾರನೊಬ್ಬನು ಮಾಹಿತಿಯನ್ನು ಪಡೆಯುತ್ತಿದ್ದುದು ಅದರಿಂದ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಮುಖ ಶಕ್ತಿ ಸ್ಥಾವರಗಳಲ್ಲಿ ಸುರಕ್ಷೆ ಹಾಗೂ ಮಾಹಿತಿ ಸೋರಿಕೆ ತಡೆಗೆ ಕ್ರಮ ಕೈಗೊಳ್ಳುವಂತೆ ತೈಲ ಸಚಿವಾಲಯಕ್ಕೆ ಗುಪ್ತಚರ ಬ್ಯೂರೊ ಸಲಹೆ ನೀಡಿದೆ.

ಸೆ.18ರ ಉರಿ ಭಯೋತ್ಪಾದಕ ದಾಳಿ ಹಾಗೂ ಆ ಬಳಿಕ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ ಸರ್ಜಿಕಲ್ ದಾಳಿಯ ಬಳಿಕ, ಗಡಿಯ ಎರಡೂ ಕಡೆಗಳಲ್ಲಿ ಸಂಘರ್ಷ ಹೆಚ್ಚಾಗುವ ಭಯವಿತ್ತು. ಆ ಕಾರಣದಿಂದ ರಕ್ಷಣಾ ಪಡೆಗಳು ಹಾಗೂ ಗುಪ್ತಚರ ಸಂಸ್ಥೆಗಳು ಭಾರೀ ಎಚ್ಚರಿಕೆಯಿಂದಿವೆ.
ಗುಪ್ತಚರ ಬ್ಯೂರೊ ಇತ್ತೀಚೆಗೆ ಅಡ್ಡ ಹಾಯ್ದ ದೂರವಾಣಿ ಸಂಭಾಷಣೆಯೊಂದರಲ್ಲಿ ಪಾಕಿಸ್ತಾನದ ಗೂಢಚರನೊಬ್ಬ ತಾನು ‘ರಾ’ ಅಧಿಕಾರಿಯೆಂದು ಹೇಳಿಕೊಂಡು, ರಾಜಸ್ಥಾನದ ಸೂಕ್ಷ್ಮ ಹೈಡ್ರೊಕಾರ್ಬನ್ ಕೊಳವೆ ಮಾರ್ಗವೊಂದರ ಮೇಲ್ವಿಚಾರಣೆ ನೋಡುತ್ತಿರುವ ಕಾರ್ಯವಾಹಿಯೊಬ್ಬನೊಡನೆ ಮಾತನಾಡುತ್ತಿದ್ದುದು ತಿಳಿದು ಬಂದಿತ್ತು. ಆತ ಆ ಸ್ಥಾವರದ ಸೂಕ್ಷ್ಮ ವಿವರಗಳನ್ನು ಅಧಿಕಾರಿಯಿಂದ ಪಡೆಯಲು ಪ್ರಯತ್ನಿಸುತ್ತಿದ್ದನೆಂದು ಈ ಬಗ್ಗೆ ನೇರವಾಗಿ ಅರಿವಿರುವ ಮೂಲಗಳು ತಿಳಿಸಿವೆ.
ಅನೇಕ ಪಾಕಿಸ್ತಾನಿ ಗೂಢಚಾರರು ಗಡಿಯಾಚೆಯಿಂದ ಹಾಗೂ ಭಾರತದೊಳಗಿಂದ ಸುಳ್ಳು ಹೆಸರುಗಳಲ್ಲಿ ತೈಲ ಸ್ಥಾವರಗಳ ಕಾರ್ಯವಾಹಿಗಳಿಗೆ ಕರೆ ಮಾಡಿ, ಮಾಹಿತಿ ಸಂಗ್ರಹಿಸುತ್ತಿದ್ದಾರೆಂದು ಗುಪ್ತಚರ ಬ್ಯೂರೊ ಎಚ್ಚರಿಕೆ ನೀಡಿತ್ತು. ಪ್ರಮುಖ ಮಾಹಿತಿಯನ್ನು ಯಾರಲ್ಲೂ ಹಂಚಿಕೊಳ್ಳದಂತೆ ತೈಲ ಕೈಗಾರಿಕೆಗಳ ಕಾರ್ಯವಾಹಿಗಳಿಗೆ ಎಚ್ಚರಿಕೆ ನೀಡುವಂತೆ ಅದು ಸಲಹೆ ನೀಡಿತ್ತೆಂದು ಅವು ಹೇಳಿವೆ.
ಗೃಹ ಸಚಿವಾಲಯವು ಆಂತರಿಕ ಭದ್ರತೆಯ ವಿಷಯವನ್ನು ನಿಭಾಯಿಸುತ್ತಿದ್ದು, ಅದು ಸೂಕ್ತ ಕ್ರಮ ಕೈಗೊಳ್ಳಲಿದೆಯೆಂದು ತೈಲ ಸಚಿವಾಲಯದ ವಕ್ತಾರರೊಬ್ಬರು ತಿಳಿಸಿದ್ದಾರೆ.
 ಈ ಸಂಬಂಧ ಉತ್ತರ ಭಾರತದ ತೈಲ ಸಂಸ್ಕರಣಾಗಾರಗಳಲ್ಲಿರುವ ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿಗೆ ಎಚ್ಚರಿಕೆ ನೀಡಲಾಗಿದೆಯೆಂದು ಭಾರತೀಯ ತೈಲ ನಿಗಮದ ವಕ್ತಾರರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X