Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ ಕೊಡವ ಸಮಾಜ ಬಿಜೆಪಿಯ ಬ್ರಾಂಚ್...

ಮಡಿಕೇರಿ ಕೊಡವ ಸಮಾಜ ಬಿಜೆಪಿಯ ಬ್ರಾಂಚ್ ಆಫೀಸ್

ಟಿಪ್ಪು ಜಯಂತಿ ಆಚರಣೆಗೆ ವಿರೋಧ ಹಿನ್ನೆಲೆ

ವಾರ್ತಾಭಾರತಿವಾರ್ತಾಭಾರತಿ18 Oct 2016 10:58 PM IST
share
ಮಡಿಕೇರಿ ಕೊಡವ ಸಮಾಜ ಬಿಜೆಪಿಯ  ಬ್ರಾಂಚ್ ಆಫೀಸ್

 ಮಡಿಕೇರಿ, ಅ.18: ಟಿಪ್ಪುಜಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸುವ ಮೂಲಕ ಮಡಿಕೇರಿ ಕೊಡವ ಸಮಾಜ ಬಿಜೆಪಿಯ ಬ್ರಾಂಚ್ ಆಫೀಸ್‌ನಂತೆ ವರ್ತಿಸಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎ.ಕೆ.ಸುಬ್ಬಯ್ಯ ಅವರು ಟೀಕಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡವ ಸಮಾಜ ಸಮಾಜಕ್ಕೆ ಸಂಬಂಧಿಸಿದ ಕೆಲಸ ಮಾಡಬೇಕೆ ಹೊರತು ಬಿಜೆಪಿಯ ಬ್ರಾಂಚ್ ಆಫೀಸ್‌ನಂತೆ ಕಾರ್ಯನಿರ್ವಹಿಸುವುದು ಸರಿಯಲ್ಲವೆಂದರು. ಟಿಪ್ಪುಜಯಂತಿ ಆಚರಿಸಬೇಕು ಎನ್ನುವುದು ಕಾಂಗ್ರೆಸ್ ಸರಕಾರದ ಅಜೆಂಡಾವಾದರೆ, ಇದನ್ನು ವಿರೋಧಿಸುತ್ತಿರುವುದು ಬಿಜೆಪಿಯ ಅಜೆಂಡಾವಾಗಿದೆ. ಪರಿಸ್ಥಿತಿ ಹೀಗಿರುವಾಗ ಕೊಡವ ಸಮಾಜ ಮತ್ತು ಕೊಡವ ಮೂಲಭೂತವಾದಿಗಳು ಬಿಜೆಪಿಯ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವುದು ಕೊಡವ ಸಮುದಾಯಕ್ಕೆ ತೋರಿದ ಅಗೌರವವಾಗಿದೆ ಎಂದವರು ಸ್ವಂತ ಬುದ್ಧಿಯ ಮೂಲಕ ಪ್ರಬುದ್ಧತೆಯನ್ನು ಮೆರೆಯಬೇಕಾಗಿದ್ದ ಕೊಡವ ಸಮಾಜ ಕೊಡವರ ಗೌರವಕ್ಕೆ ಧಕ್ಕೆ ತರುತ್ತಿದೆ ಎಂದು ಸುಬ್ಬಯ್ಯ ಆರೋಪಿಸಿದರು. ಸುಳ್ಳಿನ ಆಧಾರದಲ್ಲಿ ಟಿಪ್ಪುಜಯಂತಿಯನ್ನು ವಿರೋಧಿಸುವವರು ಅನೇಕರಿದ್ದಾರೆ. ಬಿಜೆಪಿ ಮತ್ತು ಸಂಘ ಪರಿವಾರ ದೇವಟ್ ಪರಂಬು ಎನ್ನುವ ಸುಳ್ಳನ್ನು ಸೃಷ್ಟಿಸಿವೆ. ಇತಿಹಾಸವನ್ನು ಅಧ್ಯಯನ ಮಾಡಿದರೆ ದೇವಟ್‌ಪರಂಬು ಪ್ರದೇಶ ಅಥವಾ ಅಲ್ಲಿ ಹತ್ಯೆ ನಡೆದಿರುವ ಬಗ್ಗೆ ಯಾವುದೇ ಸಾಕ್ಷ ್ಯಗಳಿಲ್ಲವೆಂದು ಅಭಿಪ್ರಾಯಪಟ್ಟ ಸುಬ್ಬಯ್ಯ ಕೊಡವ ಸಮಾಜ ಮೊದಲು ಚರಿತ್ರೆಯನ್ನು ಅಧ್ಯಯನ ಮಾಡಲಿ ಎಂದು ಎಚ್ಚರಿಸಿದರು. ಕೊಡವ ಸಮಾಜದ ಈ ವರ್ತನೆಯಿಂದ ಸಮಾಜದಲ್ಲಿ ಕೊಡವರನ್ನು ಪ್ರತ್ಯೇಕವಾಗಿ ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗುವುದಲ್ಲದೆ ದ್ವೇಷ ಮನೋಭಾವನೆ ಬೆಳೆಯುತ್ತದೆ. ದೇವಟ್‌ಪರಂಬುವಿನಲ್ಲಿ ಕೊಡವರ ಹತ್ಯೆ ಮತ್ತು ಅತ್ಯಾಚಾರ ನಡೆದಿದೆ ಎಂದು ಸುಳ್ಳು ಹೇಳುವ ಮೂಲಕ ಕೊಡವರನ್ನು ಅವಮಾನಿಸಲಾಗುತ್ತಿದ್ದು, ಈ ಬಗ್ಗೆ ಕೊಡವ ಸಮಾಜಗಳು ಜಾಗೃತವಾಗಬೇಕಾಗಿದೆ. ಟಿಪ್ಪುವಿನಿಂದ ಈ ಕೃತ್ಯ ನಡೆದಿದೆ ಎನ್ನುವುದಕ್ಕೆ ಆಧಾರ ನೀಡುವಂತೆ ಒತ್ತಾಯಿಸಿದ ಎ.ಕೆ. ಸುಬ್ಬಯ್ಯ, ಕಳೆದ ವರ್ಷ ನಡೆದ ಟಿಪ್ಪು ಜಯಂತಿಯ ಸಂದರ್ಭ ಸಂಭವಿಸಿದ ಎರಡು ಸಾವಿನ ಪ್ರಕರಣಕ್ಕೆ ಜಯಂತಿಯನ್ನು ವಿರೋಧಿಸಿದವರೇ ಕಾರಣರೆಂದು ಆರೋಪಿಸಿದರು.

ನಾಚಪ್ಪವಿರುದ್ಧ ಕ್ರಿಮಿನಲ್ ಕೇಸ್: ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಎ.ಕೆ.ಸುಬ್ಬಯ್ಯ, ಭೂ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಚಪ್ಪವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ಒತ್ತಾಯಿಸಿದರು. ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದ ಸರ್ವೇ ಸಂಖ್ಯೆ 1/6ಎನಲ್ಲಿ ತಮ್ಮ ಹಾಗೂ ತಮ್ಮ ಪತ್ನಿಯ ಹೆಸರಿನಲ್ಲಿ ತಲಾ 5 ಎಕರೆ ಮತ್ತು ಇನ್ನಷ್ಟು ಜಾಗವನ್ನು ಒತ್ತುವರಿ ಮಾಡಿಕೊಳ್ಳುವ ಮೂಲಕ ಒಟ್ಟು 16 ಎಕರೆ ಪೈಸಾರಿ ಜಾಗವನ್ನು ಎನ್.ಯು.ನಾಚಪ್ಪ ಅತಿಕ್ರಮಣ ಮಾಡಿಕೊಂಡಿದ್ದಾರೆ ಎಂದು ಸುಬ್ಬಯ್ಯ ಆರೋಪಿಸಿದರು. ಅಕ್ರಮ ಸಕ್ರಮ ಸಮಿತಿಯಡಿ ಪೈಸಾರಿ ಜಾಗವನ್ನು ಹೊಂದಲು ಅರ್ಹತೆ ಇಲ್ಲದಿದ್ದರೂ ಜಾಗವನ್ನು ಅತಿಕ್ರಮಣ ಮಾಡಿಕೊಳ್ಳಲಾಗಿದೆ. ಅಲ್ಲದೆ, ತಮ್ಮ ಪತ್ನಿಗೆ ತಿಳಿಯದೆಯೇ ನಕಲಿ ಸಹಿ ಮಾಡುವ ಮೂಲಕ ಪತ್ನಿಯ ಹೆಸರಿನಲ್ಲೂ ಅರ್ಜಿ ಸಲ್ಲಿಸಿದ್ದು, ಇದು ಕಾನೂನಿಗೆ ವಿರುದ್ಧವಾಗಿದೆ. ತಕ್ಷಣ ಲ್ಯಾಂಡ್ ಟ್ರಿಬ್ಯುನಲ್ ಇದನ್ನು ಪರಿಶೀಲಿಸಿ ಅರ್ಜಿಯನ್ನು ವಜಾಗೊಳಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಸುಬ್ಬಯ್ಯ ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X