ನೀರಕಟ್ಟೆ: ಅಡುಗೆ ಅನಿಲ ಸಾಗಾಟದ ಟ್ಯಾಂಕರ್ ಪಲ್ಟಿ
![ನೀರಕಟ್ಟೆ: ಅಡುಗೆ ಅನಿಲ ಸಾಗಾಟದ ಟ್ಯಾಂಕರ್ ಪಲ್ಟಿ ನೀರಕಟ್ಟೆ: ಅಡುಗೆ ಅನಿಲ ಸಾಗಾಟದ ಟ್ಯಾಂಕರ್ ಪಲ್ಟಿ](https://www.varthabharati.in/sites/default/files/images/articles/2016/10/19/18upptanker-(3).gif)
ಉಪ್ಪಿನಂಗಡಿ, ಅ.18: ಅಡುಗೆ ಅನಿಲ ಸಾಗಾಟದ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ತೋಡಿಗೆ ಮಗುಚಿ ಬಿದ್ದ ಘಟನೆ ಮಂಗಳವಾರ ಮುಂಜಾನೆ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ನಡೆದಿದೆ. ಅದೃಷ್ಟವಶಾತ್ ಟ್ಯಾಂಕರ್ ಚಾಲಕ ಹಾಗೂ ಕ್ಲೀನರ್ ಯಾವುದೇ ಗಾಯ ಗಳಿಲ್ಲದೆ ಪಾರಾಗಿದ್ದಾರೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಲಿ ಟ್ಯಾಂಕರ್ ನೀರಕಟ್ಟೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ತೋಡಿಗೆ ಮಗುಚಿ ಬಿತ್ತು. ಬಿದ್ದ ರಭಸಕ್ಕೆ ಟ್ಯಾಂಕ್ ವಾಹನದಿಂದ ಬೇರ್ಪಟ್ಟಿದೆ. ಖಾಲಿ ಟ್ಯಾಂಕರ್ ಆಗಿದ್ದರಿಂದ ಅನಿಲ ಸೋರಿಕೆ ಭೀತಿಯೂ ಇರಲಿಲ್ಲ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಹಾಗೂ ಪುತ್ತೂರು ಸಂಚಾರ ಠಾಣಾ ಪೊಲೀಸರು ಭೇಟಿ ನೀಡಿ ಪರಿಹಾರ ಕಾರ್ಯ ಕೈಗೊಂಡರು.
Next Story