Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತ ಬೊಗಳಬಹುದಷ್ಟೆ: ಚೀನಾ ಮಾಧ್ಯಮ

ಭಾರತ ಬೊಗಳಬಹುದಷ್ಟೆ: ಚೀನಾ ಮಾಧ್ಯಮ

ಚೀನಾ ವಸ್ತುಗಳ ಬಳಕೆಗೆ ಬಿದ್ದೀತೇ ಕಡಿವಾಣ ?

ವಾರ್ತಾಭಾರತಿವಾರ್ತಾಭಾರತಿ19 Oct 2016 7:15 PM IST
share
ಭಾರತ ಬೊಗಳಬಹುದಷ್ಟೆ: ಚೀನಾ ಮಾಧ್ಯಮ

ಬೀಜಿಂಗ್, ಅ. 19: ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಸಾಮಾಜಿಕ ಮಾಧ್ಯಮಗಳಲ್ಲಿ ನೀಡಲಾಗುತ್ತಿರುವ ಕರೆಯು ಜನರ ಭಾವನೆಗಳನ್ನು ಕೆರಳಿಸುವ ಪ್ರಯತ್ನವಾಗಿದೆಯೇ ಹೊರತು, ಭಾರತೀಯ ಉತ್ಪನ್ನಗಳು ಚೀನಾದ ಉತ್ಪನ್ನಗಳೊಂದಿಗೆ ಸ್ಪರ್ಧಿಸಲಾರವು ಎಂದು ಚೀನಾದ ಸರಕಾರಿ ಒಡೆತನದ ಪತ್ರಿಕೆ ‘ಗ್ಲೋಬಲ್ ಟೈಮ್ಸ್’ ಬುಧವಾರ ಹೇಳಿದೆ.

ಹೊಸದಿಲ್ಲಿ ‘‘ಬೊಗಳಬಹುದಷ್ಟೆ’’, ಉಭಯ ದೇಶಗಳ ನಡುವಿನ ಹೆಚ್ಚುತ್ತಿರುವ ವ್ಯಾಪಾರ ಕೊರತೆಯ ಬಗ್ಗೆ ಅದು ಏನೂ ಮಾಡುತ್ತಿಲ್ಲ ಎಂದು ಪತ್ರಿಕೆಯ ಸಂಪಾದಕೀಯ ಪುಟದ ಲೇಖನವೊಂದು ಹೇಳಿದೆ.

ಪಾಕಿಸ್ತಾನದಲ್ಲಿ ನೆಲೆಸಿರುವ ಭಯೋತ್ಪಾದಕರನ್ನು ಅಂತಾರಾಷ್ಟ್ರೀಯ ಭಯೋತ್ಪಾದಕರು ಎಂಬುದಾಗಿ ಘೋಷಿಸಲು ಭಾರತ ನಡೆಸುತ್ತಿರುವ ಪ್ರಯತ್ನಗಳಿಗೆ ಚೀನಾ ನಿರಂತರವಾಗಿ ಅಡ್ಡಗಾಲು ಹಾಕುತ್ತಿರುವುದು ಹೆಚ್ಚಿನ ಭಾರತೀಯರನ್ನು ಕೆರಳಿಸಿದೆ. ಹಾಗಾಗಿ, ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸಲು ಅವರು ಕರೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಯೋಜನೆ ‘ಮೇಕ್ ಇನ್ ಇಂಡಿಯ’ ‘ಅಪ್ರಾಯೋಗಿಕ’ ಎಂಬುದಾಗಿ ಲೇಖನ ಬಣ್ಣಿಸಿದೆ.

ಭಾರತದಲ್ಲಿ ಹೂಡಿಕೆ ಮಾಡದಂತೆ ಪತ್ರಿಕೆಯು ಚೀನಾದ ಕಂಪೆನಿಗಳಿಗೆ ಎಚ್ಚರಿಕೆ ನೀಡಿದೆ. ಭ್ರಷ್ಟಾಚಾರ ಅಧಿಕವಾಗಿರುವ ಹಾಗೂ ಪರಿಶ್ರಮ ಪಡದ ಕಾರ್ಮಿಕ ವರ್ಗವಿರುವ ದೇಶವೊಂದರಲ್ಲಿ ಹೂಡಿಕೆ ಮಾಡುವುದು ‘ಆತ್ಮಹತ್ಯಾಕಾರಕ’ ಎಂದು ಪತ್ರಿಕೆ ಬಣ್ಣಿಸಿದೆ.

‘‘ಚೀನಾದ ಉತ್ಪನ್ನಗಳನ್ನು ನಿಷೇಧಿಸುವ ಕುರಿತಂತೆ ಇತ್ತೀಚಿನ ದಿನಗಳಲ್ಲಿ ಭಾರತೀಯ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ. ಅದು ಜನರ ಭಾವನೆಗಳನ್ನು ಕೆರಳಿಸುವ ಪ್ರಯತ್ನವಷ್ಟೆ’’ ಎಂದಿದೆ.

‘‘ಭಾರತದ ಉತ್ಪನ್ನಗಳು ವಿವಿಧ ಕಾರಣಗಳಿಗಾಗಿ ಚೀನಾದ ಉತ್ಪನ್ನಗಳೊಂದಿಗೆ ಸ್ಪರ್ಧಿಸಲು ಸಾಧ್ಯವಿಲ್ಲ’’ ಎಂದು ‘ಗ್ಲೋಬಲ್ ಟೈಮ್ಸ್’ ಬರೆದಿದೆ.

ಭಾರತ ರಸ್ತೆಗಳು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಇನ್ನಷ್ಟೇ ನಿರ್ಮಿಸಬೇಕಾಗಿದೆ ಹಾಗೂ ಅಲ್ಲಿ ವಿದ್ಯುತ್ ಮತ್ತು ನೀರಿನ ತೀವ್ರ ಕೊರತೆಯಿದೆ ಎಂದಿದೆ.

ಸರ್ವವ್ಯಾಪಿ ಭ್ರಷ್ಟಾಚಾರ

ಎಲ್ಲಕ್ಕಿಂತಲೂ ಹೆಚ್ಚು, ಭಾರತದಲ್ಲಿ ಭ್ರಷ್ಟಾಚಾರ ಎಲ್ಲೆಲ್ಲೂ ತಾಂಡವವಾಡುತ್ತಿದೆ. ಪ್ರತಿ ಸರಕಾರಿ ಇಲಾಖೆಯಲ್ಲಿ ಮೇಲಿನಿಂದ ತಳದವರೆಗೆ ಭ್ರಷ್ಟಾಚಾರವಿದೆ ಎಂದು ‘ಗ್ಲೋಬಲ್ ಟೈಮ್ಸ್’ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X