Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ನುಡಿಸಿರಿ’ಯಲ್ಲಿ ಚಿತ್ರಕಲಾ ಮೇಳ ಹಾಗೂ...

‘ನುಡಿಸಿರಿ’ಯಲ್ಲಿ ಚಿತ್ರಕಲಾ ಮೇಳ ಹಾಗೂ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ20 Oct 2016 12:07 AM IST
share

ಮೂಡುಬಿದಿರೆ, ಅ.19: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಚಿತ್ರಕಲೆಯ ಕುರಿತು ಜನಜಾಗೃತಿಗಾಗಿ ಚಿತ್ರಸಂತೆಯನ್ನು ಆಯೋಜಿಸಿದ್ದು, ನಾಡಿನ ಚಿತ್ರಕಲಾವಿದರಿಗೆ ಅವಕಾಶವನ್ನು ಕಲ್ಪಿಸಲಾಗಿದೆ. ನ.18ರಿಂದ 20ರವರೆಗೆ ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ನಡೆಯಲಿರುವ ಆಳ್ವಾಸ್ ನುಡಿಸಿರಿಯ ಸಂದರ್ಭ ಈ ಚಿತ್ರಕಲಾ ಮೇಳವನ್ನು ಏರ್ಪಡಿಸಲಾಗುವುದು.

ರಾಜ್ಯದ ವಿವಿಧ ಜಿಲ್ಲೆಗಳ ಚಿತ್ರಕಲಾವಿದರು ತಮ್ಮ ಕಲಾಕೃತಿಗಳ ಪ್ರದರ್ಶನದ ಜೊತೆಗೆ ಸ್ಥಳದಲ್ಲೇ ಮಾರಾಟವನ್ನೂ ಮಾಡಬಹುದು. ಕಲಾ ಶಾಲೆಗಳ ವಿದ್ಯಾರ್ಥಿಗಳೂ ತಮ್ಮ ಶಾಲಾ ಮುಖ್ಯಸ್ಥರ ಅನುಮತಿ ಪತ್ರದೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ. ಒಬ್ಬರು ಗರಿಷ್ಠ ಎರಡು ಮಳಿಗೆಗಳನ್ನು ಪಡೆಯಲು ಅವಕಾಶವಿದೆ. ಕಲಾಕೃತಿಗಳ ಪ್ರದರ್ಶನಕ್ಕಾಗಿ 7 ಅಡಿ ಎತ್ತರ ಹಾಗೂ 10 ಅಡಿ ಅಗಲ ವಿಸ್ತಾರದ ಸಮತಳ ಮಳಿಗೆಗಳನ್ನು ನೀಡಲಾಗುವುದು. ಉಳಿದಂತೆ ಪ್ರದರ್ಶನಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ಚಿತ್ರಕಲಾವಿದರೇ ತರಬೇಕಾಗುತ್ತದೆ. ನ.18ರ ಬೆಳಗ್ಗೆ 9 ಗಂಟೆಯೊಳಗೆ ಮಳಿಗೆಗಳಲ್ಲಿ ತಮ್ಮ ಕಲಾಕೃತಿಗಳ ಪ್ರದರ್ಶನ ಸಂಪೂರ್ಣಗೊಳಿಸಿರಬೇಕು. ಕಲಾವಿದರು ತಮ್ಮ ಮಳಿಗೆಗಳಲ್ಲಿ ಚಿತ್ರಕಲೆಯ ಕುರಿತು ಪ್ರಾತ್ಯಕ್ಷಿಕೆ ನೀಡಬಹುದು. ಭಾಗವಹಿಸುವ ಪ್ರತೀ ಚಿತ್ರಕಲಾವಿದರಿಗೂ ಉಚಿತ ಊಟ, ವಸತಿ ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ ಕಲಾವಿದರಿಗೆ ಅಭಿನಂದನಾ ಪತ್ರವನ್ನೂ ನೀಡಲಾಗುವುದು.

ಆಸಕ್ತರು ನ.15ರೊಳಗೆ ತಮ್ಮ ಪೂರ್ಣ ವಿಳಾಸ, ದೂರವಾಣಿ ಸಂಖ್ಯೆ, ಬೇಕಾದ ಮಳಿಗೆ ವಿವರ, ಇತ್ಯಾದಿ ವಿವರಗಳೊಂದಿಗೆ ಅರ್ಜಿಗಳನ್ನು ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡುಬಿದಿರೆ-574227 ಈ ವಿಳಾಸಕ್ಕೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಕಲಾವಿದರಿಗೆ ಮಳಿಗೆ ಸಂಖ್ಯೆ ನೀಡಲಾಗುವುದು.

ಆನ್‌ಲೈನ್ ಅರ್ಜಿಗಳಿಗಾಗಿ www.alvasnudisiri.comಗೆ ಭೇಟಿ ನೀಡಬಹುದು. ಹೆಚ್ಚಿನ ವಿವರಗಳಿಗೆ ಭಾಸ್ಕರ್ ನೆಲ್ಯಾಡಿ ಮೊ.ಸಂ.: 9901114843 ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X