ರಾಷ್ಟ್ರೀಯ ಹೆದ್ದಾರಿ ಚತುಷ್ಪಥಕ್ಕಾಗಿ ಭೂಸ್ವಾಧೀನ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಆಗ್ರಹಿಸಿ ಜಾಥಾ
![ರಾಷ್ಟ್ರೀಯ ಹೆದ್ದಾರಿ ಚತುಷ್ಪಥಕ್ಕಾಗಿ ಭೂಸ್ವಾಧೀನ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಆಗ್ರಹಿಸಿ ಜಾಥಾ ರಾಷ್ಟ್ರೀಯ ಹೆದ್ದಾರಿ ಚತುಷ್ಪಥಕ್ಕಾಗಿ ಭೂಸ್ವಾಧೀನ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಆಗ್ರಹಿಸಿ ಜಾಥಾ](https://www.varthabharati.in/sites/default/files/images/articles/2016/10/20/NH-ACTION-BCK.gif)
ಕಾಸರಗೋಡು, ಅ.19: ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥಗೊಳಿಸಲು ಭೂಸ್ವಾಧೀನ ಮಾಡಿಕೊಂಡಿದ್ದರಿಂದ ಸಂತ್ರಸ್ತರಾಗುವವರಿಗೆ ಪುನರ್ವಸತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ಸಂತ್ರಸ್ತರು ಬುಧವಾರ ಮೆರವಣಿಗೆ ಮೂಲಕ ಕಾಸರಗೋಡು ಭೂಸ್ವಾಧೀನ ಉಪಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು.
ಹೊಸ ಬಸ್ ನಿಲ್ದಾಣ ಪರಿಸರದಿಂದ ಹೊರಟ ಮೆರವಣಿಗೆಯನ್ನು ಕಚೇರಿ ಮುಂಭಾಗದಲ್ಲಿ ಪೊಲೀಸರು ತಡೆದರು.
ಬಳಿಕ ಅಲ್ಲೇ ನಡೆದ ಧರಣಿಯನ್ನು ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿ ತಿಯ ರಾಜ್ಯ ಪ್ರಧಾನ ಸಂಚಾಲಕ ಹಾಶಿಂ ಉದ್ಘಾಟಿಸಿದರು.
ಬಿ.ಶಾಫಿ ಹಾಜಿ ಅಧ್ಯಕ್ಷತೆ ವಹಿಸಿದ್ದರು. ಸಿ.ಕೆ.ಶಿವದಾಸನ್, ಪೌಲ್ ಟಿ. ಸಾಮ್ಯುವೆಲ್ ಮಾತನಾಡಿದರು.
ಅಬ್ದುಲ್ ಖಾದರ್ ಚಟ್ಟಂಚಾಲ್, ವಿಶ್ವಾಸ್ ಪಳ್ಳಿಕೆರೆ, ಎನ್.ಪವಿತ್ರನ್, ಸಿ.ಎಚ್.ಮುಹಮ್ಮದ್, ಚಂದ್ರನ್, ಶೇಖ್ ಮುಹಮ್ಮದ್ ಮಂಜೇಶ್ವರ ಮತ್ತಿತರರು ಧರಣಿಗೆ ನೇತೃತ್ವ ನೀಡಿದರು.
ಹೆದ್ದಾರಿಗೆ ಭೂಸ್ವಾಧೀನದಿಂದ ಸಂತ್ರಸ್ತರಾಗಿರುವ 3,500ಕ್ಕೂ ಅಧಿಕ ಕಾರ್ಮಿಕರಿಗೆ ಸೂಕ್ತ ರೀತಿಯ ಪುನರ್ವಸತಿ ಕಲ್ಪಿಸಬೇಕು, ಬಲವಂತ ವಾಗಿ ಭೂ ಸ್ವಾಧೀನಪಡಿಸುವ ಪ್ರಕ್ರಿಯೆ ಯಿಂದ ಸರಕಾರ ಹಿಂದೆ ಸರಿಯಬೇಕು. ಈಗಾಗಲೇ ಸ್ವಾಧೀನಪಡಿಸಿರುವ ಸ್ಥಳ ದಲ್ಲೇ ರಸ್ತೆ ಅಭಿವೃದ್ಧಿಗೊಳಿಸುವಂತೆ ಒತ್ತಾಯಿಸಿದರು.