Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭೂಮಿಗಾಗಿ ಹೋರಾಟ: ಮತ್ತೊಬ್ಬ ದಲಿತನ...

ಭೂಮಿಗಾಗಿ ಹೋರಾಟ: ಮತ್ತೊಬ್ಬ ದಲಿತನ ಆತ್ಮಹತ್ಯೆ

ವಾರ್ತಾಭಾರತಿವಾರ್ತಾಭಾರತಿ20 Oct 2016 8:50 PM IST
share
ಭೂಮಿಗಾಗಿ ಹೋರಾಟ: ಮತ್ತೊಬ್ಬ ದಲಿತನ ಆತ್ಮಹತ್ಯೆ

ಜುನಾಗಡ,ಅ.20: ದಲಿತರಿಗೆ ಭೂ ಹಕ್ಕುಗಳಿಗಾಗಿ ಒತ್ತಾಯಿಸಿ ರಾಷ್ಟ್ರಾದ್ಯಂತ ನಡೆಯುತ್ತಿರುವ ಅಭಿಯಾನದ ನಡುವೆಯೇ ಜುನಾಗಡದಲ್ಲಿ ಭೂಮಿಗಾಗಿ ಆಗ್ರಹಿಸಿ ವರ್ಷಗಳಿಂದಲೂ ಪ್ರತಿಭಟನೆ ನಡೆಸುತ್ತಿದ್ದ ದಲಿತ ವ್ಯಕ್ತಿಯೋರ್ವ ವ್ಯವಸ್ಥೆಗೆ ಬೇಸತ್ತು ಸಾವಿಗೆ ಶರಣಾಗಿದ್ದಾನೆ.

ಈ ವಾರದ ಆರಂಭದಲ್ಲಿ ಜುನಾಗಡಲ್ಲಿ ಭೂ ಹಕ್ಕುಗಳಿಗಾಗಿ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಮೂವರು ದಲಿತರು ವಿಷ ಸೇವಿಸಿದ್ದರು. ಈ ಪೈಕಿ ಪರ್ಬತ್ ಪರಮಾರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರೆ, ಉಳಿದ ಇಬ್ಬರ ದೇಹಸ್ಥಿತಿ ಸ್ಥಿರವಾಗಿದೆ ಎಂದು ಜಿಲ್ಲಾಡಳಿತದ ಅಧಿಕಾರಿಯೋರ್ವರು ತಿಳಿಸಿದರು.

ಗುಜರಾತ್‌ನ ಉನಾದಲ್ಲಿ ಸತ್ತ ದನದ ಚರ್ಮವನ್ನು ಸುಲಿಯುತ್ತಿದ್ದಕ್ಕಾಗಿ ಸವರ್ಣೀಯ ಹಿಂದುಗಳಿಂದ ನಾಲ್ವರು ದಲಿತ ಯುವಕರ ಮೇಲೆ ಅಮಾನುಷ ಹಲ್ಲೆ ನಡೆದ ಬಳಿಕ ಭೂಮಿ ಸೇರಿದಂತೆ ತಮ್ಮ ಹಕ್ಕುಗಳಿಗಾಗಿ ದಲಿತರು ನಡೆಸುತ್ತಿರುವ ಹೋರಾಟ ಇಡೀ ದೇಶವನ್ನೇ ವ್ಯಾಪಿಸಿದೆ.

ಎರಡು ದಶಕಗಳಿಗೂ ಹಿಂದೆ ಗೋಮಾಳದಲ್ಲಿ ಕೃಷಿಗೆ ಯತ್ನಿಸಿದ್ದಕ್ಕಾಗಿ ಪರಮಾರ ಮತ್ತು ಇತರ ದಲಿತರನ್ನು ಮೇಲ್ಜಾತಿಗಳ ಗ್ರಾಮಸ್ಥರು ಬಲವಂತದಿಂದ ಗ್ರಾಮದಿಂದ ಹೊರಕ್ಕೆ ಹಾಕಿದ್ದರು. ಆಗಿನಿಂದಲೂ ಅವರು ಪರ್ಯಾಯ ಭೂಮಿಗಾಗಿ ಆಗ್ರಹಿಸುತ್ತಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಭೂಮಿಗಾಗಿ ಆಗ್ರಹಿಸಿ ನಿರಾಶನಾಗಿ ದಲಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವುದು ಘೋವಾಗಿದೆ ಎಂದು ಹೇಳಿದ ದಲಿತರ ಮಾನವ ಹಕ್ಕುಗಳಿಗಾಗಿ ರಾಷ್ಟ್ರೀಯ ಅಭಿಯಾನದ ಸ್ಥಾಪಕ ಪಾಲ್ ದಿವಾಕರ್ ಅವರು, ಶಾಸನಬದ್ಧವಾಗಿ ಅವರಿಗೆ ಸಲ್ಲಬೇಕಾಗಿದ್ದ ಭೂಮಿಯನ್ನು ಮಂಜೂರು ಮಾಡಲು ಸರಕಾರವು ಇಷ್ಟೊಂದು ವರ್ಷಗಳ ಕಾಲ ವಿಳಂಬಿಸಿದ್ದು ಸರಿಯಲ್ಲ, ಸರಕಾರವು ದಲಿತರನ್ನು ಕಿರುಕುಳದಿಂದ ರಕ್ಷಿಸುವಲ್ಲಿ ವಿಫಲವಾಗುತ್ತಿದೆ ಎಂದರು.

ಜುನಾಗಡ ಜಿಲ್ಲೆಯಲ್ಲಿ 1998ರಲ್ಲಿ ಕೆಲವು ದಲಿತರಿಗೆ ಭೂಮಿಯನ್ನು ಮಂಜೂರು ಮಾಡಲಾಗಿತ್ತು. ಇತರರು ಪಿತ್ರಾರ್ಜಿತ ಕೃಷಿಭೂಮಿಯನ್ನು ಹೊಂದಿದ್ದಾರೆ. ಆ ಬಳಿಕ ಯಾವುದೇ ಭೂ ಮಂಜೂರಾತಿಯಾಗಿಲ್ಲ ಎಂದು ಇನ್ನೋರ್ವ ಅಧಿಕಾರಿ ತಿಳಿಸಿದರು.

ಭಾರತದ ಕನಿಷ್ಠ ಅರ್ಧದಷ್ಟು ಕೆಳಜಾತಿಗಳ ಜನರು ಭೂಹೀನರಾಗಿದ್ದಾರೆ. ಶತಮಾನಗಳಷ್ಟು ಪುರಾತನವಾದ ಸಾಮಾಜಿಕ ವ್ಯವಸ್ಥೆಯಲ್ಲಿ ಭೂಹೀನ ದಲಿತರು ಅತ್ಯಂತ ತಳಮಟ್ಟದಲ್ಲಿದ್ದಾರೆ ಮತ್ತು ಇತ್ತೀಚಿನ ಕಟ್ಟರ್ ಗೋರಕ್ಷಕರು ಸೇರಿದಂತೆ ಮೇಲ್ಜಾತಿಗಳ ಹಿಂದುಗಳಿಂದ ತಾರತಮ್ಯ ಮತ್ತು ದೌರ್ಜನ್ಯಗಳಿಗೆ ಗುರಿಯಾಗುತ್ತಲೇ ಇದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X