Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 20 ಗಂಟೆಗಳ ದಿಗ್ಬಂಧನದಿಂದ ಕೊನೆಗೂ...

20 ಗಂಟೆಗಳ ದಿಗ್ಬಂಧನದಿಂದ ಕೊನೆಗೂ ಮುಕ್ತಗೊಂಡ ಜೆಎನ್‌ಯು ಕುಲಪತಿ

ವಿದ್ಯಾರ್ಥಿ ನಾಪತ್ತೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ20 Oct 2016 11:26 PM IST
share

ಹೊಸದಿಲ್ಲಿ,ಅ.20: ನಾಪತ್ತೆಯಾಗಿರುವ ಬಯೋ-ಟೆಕ್ನಾಲಜಿ ವಿಭಾಗದ ವಿದ್ಯಾರ್ಥಿ ನಜೀಬ್ ಜಂಗ್ ಪತ್ತೆಗಾಗಿ ಹೆಚ್ಚಿನ ಪ್ರಯತ್ನಗಳಿಗೆ ಆಗ್ರಹಿಸಿ 20 ಗಂಟೆಗೂ ಹೆಚ್ಚು ಅವಧಿಗೆ ಪ್ರತಿಭಟನಾನಿರತ ವಿದ್ಯಾರ್ಥಿಗಳ ದಿಗ್ಬಂಧನದಲ್ಲಿದ್ದ ಇಲ್ಲಿಯ ಜವಾಹರಲಾಲ್ ನೆಹರು ವಿವಿ(ಜೆಎನ್‌ಯು)ಯ ಕುಲಪತಿ ಎಂ.ಜಗದೀಶ ಕುಮಾರ್ ಮತ್ತು ಇತರ ಕೆಲವು ಅಧಿಕಾರಿಗಳು ಇಂದು ಬಿಡುಗಡೆಗೊಂಡಿದ್ದಾರೆ.

ನಮ್ಮನ್ನು ಅಕ್ರಮವಾಗಿ ದಿಗ್ಬಂಧನದಲ್ಲಿರಿಸಿದ್ದು ವಿಷಾದನೀಯ ಎಂದು ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಕುಮಾರ್ ಹೇಳಿದರು.
ಜಂಗ್‌ನನ್ನು ಪತ್ತೆ ಹಚ್ಚಲು ಎಲ್ಲ ಪ್ರಯತ್ನಗಳನ್ನೂ ನಾವು ಮಾಡುತ್ತಿದ್ದೇವೆ. ಆತ ವಿವಿಗೆ ಮರಳುತ್ತಾನೆಂಬ ವಿಶ್ವಾಸ ನಮಗಿದೆ ಎಂದರು.
ಮೂಲತಃ ಉತ್ತರ ಪ್ರದೇಶದ ಬದಾಯುನ್ ನಿವಾಸಿಯಾಗಿರುವ ನಜೀಬ್ ಜಂಗ್ ವಿವಿಯ ಹಾಸ್ಟೆಲ್‌ನಲ್ಲಿ ವಾಸವಿದ್ದು, ಶುಕ್ರವಾರ ರಾತ್ರಿ ಎಬಿವಿಪಿ ಕಾರ್ಯಕರ್ತರು ಆತನೊಂದಿಗೆ ಜಗಳವಾಡಿ ಥಳಿಸಿದಾಗಿನಿಂದ ನಾಪತ್ತೆಯಾಗಿದ್ದಾನೆ ಎಂದು ಅಖಿಲ ಭಾರತ ವಿದ್ಯಾರ್ಥಿ ಸಂಘ(ಎಐಎಸ್‌ಐ)ವು ಆರೋಪಿಸಿದೆ.
ಬುಧವಾರ ಮಧ್ಯಾಹ್ನ ಸೂಕ್ತ ಕ್ರಮ ಮತ್ತು ಕುಲಪತಿಗಳಿಂದ ಭರವಸೆಗೆ ಆಗ್ರಹಿಸಿ ನೂರಾರು ವಿದ್ಯಾರ್ಥಿಗಳು ಅವರ ಕಚೇರಿಗೆ ಮುತ್ತಿಗೆ ಹಾಕಿದ್ದು,ರಾತ್ರಿಯಿಡೀ ಮುತ್ತಿಗೆ ಮುಂದುವರಿದಿತ್ತು.
ಈ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಹಾಯಕ ಗೃಹಸಚಿವ ಕರಣ್ ರಿಜಿಜು ಅವರು, ಅಧಿಕಾರಿಗಳನ್ನು ಈ ರೀತಿ ಒತ್ತೆಯಾಳುಗಳನ್ನಾಗಿ ಇರಿಸಿಕೊಳ್ಳುವುದು ಸರಿಯಲ್ಲ. ಕೆಲವು ವಿದ್ಯಾರ್ಥಿಗಳು ಓದುವದಕ್ಕಲ್ಲ,ರಾಜಕೀಯ ಮಾಡಲೆಂದೇ ಜೆಎನ್‌ಯುದಲ್ಲಿ ಇರುವಂತಿದೆ ಎಂದರು.
 
ಕುಮಾರ ಅವರು ದಿಗ್ಬಂಧನವನ್ನು ಹಿಂದೆಗೆದುಕೊಳ್ಳುವಂತೆ ಮತ್ತು ಚರ್ಚೆಗೆ ಬರುವಂತೆ ಕೋರಿ ಬುಧವಾರ ರಾತ್ರಿಯಿಡೀ ವಿದ್ಯಾರ್ಥಿಗಳಿಗೆ ಸರಣಿ ಟ್ವೀಟ್‌ಗಳನ್ನು ರವಾನಿಸಿದ್ದರು. ಪ್ರತಿಭಟನೆಗಳಿಂದಾಗಿ ಕಳೆದ ಮೂರು ದಿನಗಳಿಂದಲೂ ವಿವಿಯಲ್ಲಿ ತರಗತಿಗಳು ವ್ಯತ್ಯಯಗೊಂಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X