Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಣಾಜೆ: ದುಷ್ಕರ್ಮಿಗಳಿಂದ ಯುವಕನ ಕೊಲೆಗೆ...

ಕೊಣಾಜೆ: ದುಷ್ಕರ್ಮಿಗಳಿಂದ ಯುವಕನ ಕೊಲೆಗೆ ಯತ್ನ

ವಾರ್ತಾಭಾರತಿವಾರ್ತಾಭಾರತಿ22 Oct 2016 12:48 PM IST
share
ಕೊಣಾಜೆ: ದುಷ್ಕರ್ಮಿಗಳಿಂದ ಯುವಕನ ಕೊಲೆಗೆ ಯತ್ನ

ಕೊಣಾಜೆ, ಅ.22: ರಸ್ತೆಯಲ್ಲಿ ವಾಕಿಂಗ್ ಹೋಗುತ್ತಿದ್ದ ಯುವಕನೊಬ್ಬನಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆಗೆ ಯತ್ನಿಸಿರುವ ಘಟನೆ ಶನಿವಾರ ಮುಂಜಾನೆ ಕೊಣಾಜೆ ಠಾಣಾ ವ್ಯಾಪ್ತಿಯ ಅಸೈಗೋಳಿ ಸಮೀಪ ನಡೆದಿದ್ದು, ಗಂಭೀರ ಗಾಯಗೊಂಡಿರುವ ಯುವಕ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ತೀವ್ರನಿಗಾ ಘಟಕದಲ್ಲಿ ದಾಖಲಾಗಿದ್ದಾನೆ.

ಮಾರಣಾಂತಿಕ ಹಲ್ಲೆಗೊಳಗಾದ ಯುವಕನನ್ನು ಪಜೀರು ಗ್ರಾಮದ ಸುದರ್ಶನ ನಗರದ ಉಮೇಶ್ ಎಂಬವರ ಪುತ್ರ ಕಾರ್ತಿಕ್ ರಾಜ್(27) ಎಂದು ಗುರುತಿಸಲಾಗಿದೆ.

ಕಾರ್ತಿಕ್ ರಾಜ್ ದಿನಾ ಮುಂಜಾನೆ ಪಜೀರು ತಮ್ಮ ಮನೆಯಿಂದ ದೇರಳಕಟ್ಟೆಯವರೆಗೆ ವಾಕಿಂಗ್ ಹೋಗಿ ಅಲ್ಲಿ ಜಿಮ್‌ನಲ್ಲಿ ವ್ಯಾಯಾಮ ಮುಗಿಸಿ ಬಳಿಕ ಮನೆಗೆ ವಾಪಸ್ಸಾಗುತ್ತಿದ್ದರು. ಎಂದಿನಂತೆ ಶನಿವಾರ ಮುಂಜಾನೆ ಕೂಡಾ 5:15ರ ವೇಳೆಗೆ ಕೊಣಾಜೆ ಬಳಿಯ ಗಣೇಶ್ ಮಹಲ್ ಪ್ರದೇಶದ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಇದರಿಂದ ತಲೆಗೆ ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದಾಗ ಅದೇ ರಸ್ತೆಯಲ್ಲಿ ವಾಹನದ ಚಾಲಕೊಬ್ಬರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಬಂದು ಅದೇ ಕಾರಿನಲ್ಲಿ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಾಹನ ಆಕ್ಸಿಡೆಂಟ್ ಆಗಿ ಹಿಟ್ ಆಂಡ್ ರನ್ ಆಗಿರಬಹುದೆಂದು ಪೊಲೀಸರು ಅಂದಾಜಿಸಿದ್ದರು. ಆದರೆ ಬಳಿಕ ಇದು ದುಷ್ಕರ್ಮಿಗಳು ಕೊಲೆ ನಡೆಸಲು ಯತ್ನಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಕೊಣಾಜೆ ಠಾಣಾ ಇನ್‌ಸ್ಪೆಕ್ಟರ್ ಅಶೋಕ್ ಹಾಗೂ ಎಸ್ಸೈ ಸುಕುಮಾರನ್ ಅವರು ಘಟನೆಯ ಬಗ್ಗೆ ಪರಿಶೀಲನೆ ನಡೆಸಿದ್ದು, ಘಟನಾ ಸ್ಥಳಕ್ಕೆ ಪೊಲೀಸ್ ಹಿರಿಯ ಅಧಿಕಾರಿಗಳಾದ ಡಿಸಿಪಿ ಶಾಂತರಾಜು, ಎಸಿಪಿ ಶೃತಿ ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಪ್ರಕರಣದ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ತಿಕ್ ರಾಜ್ ತುಂಬಾ ಸರಳ ಸಜ್ಜನಿಕೆಯ ವ್ಯಕ್ತಿತ್ವವನ್ನು ಹೊಂದಿದ್ದ ಯುವಕನಾಗಿದ್ದು ಯಾರಲ್ಲಿಯೂ ಅಷ್ಟಾಗಿ ಬೆರೆಯುತ್ತಿರಲಿಲ್ಲ. ಕಳೆದ ಎರಡು ತಿಂಗಳ ಹಿಂದೆಯಷ್ಟೇ ಅವರು ಮಂಗಳೂರಿನಲ್ಲಿ ಕೆನರಾ ಸ್ವಿಂಗ್ ಎಂಬ ಸಂಸ್ಥೆಯಲ್ಲಿ ಇಂಜಿನಿಯರಿಂಗ್ ಕೆಲಸಕ್ಕೆ ಸೇರಿಕೊಂಡಿದ್ದರು. ಸರಳ ವ್ಯಕ್ತಿತ್ವದ ಕಾರ್ತಿಕ್‌ಗೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ದುಷ್ಕರ್ಮಿಗಳ ಟಾರ್ಗೆಟ್ ತಪ್ಪಿತೇ?

ಸಾಮಾನ್ಯವಾಗಿ ಅಸೈಗೋಳಿ ಹಾಗೂ ಕೊಣಾಜೆ ಪರಿಸರದ ಹೆಚ್ಚಿನವರು ಅಸೈಗೋಳಿ ಕೊಣಾಜೆ ರಸ್ತೆಯಲ್ಲಿ ವಾಕಿಂಗ್, ಜಾಗಿಂಗ್ ಹೋಗುತ್ತಿದ್ದಾರೆ. ಅಲ್ಲದೆ ಕೊಣಾಜೆ ಠಾಣೆ ಕೂಡಾ ಇದೇ ರಸ್ತೆಯಲ್ಲಿರುವುದರಿಂದ ಯಾವುದೇ ಆತಂಕವಿಲ್ಲದೆ ಈ ಮುಂಜಾನೆ ನಡೆದಾಡಿಕೊಂಡಿದ್ದರು. ಆದರೆ ಇದೀಗ ಇದೇ ರಸ್ತೆಯಲ್ಲಿ ಘಟನೆ ಸಂಭವಿಸಿರುವುದು ಭಯದ ವಾತಾವಾರಣ ನಿರ್ಮಿಸಿದೆ. ಅಲ್ಲದೆ ದುಷ್ಕರ್ಮಿಗಳು ಬೇರೇ ಯಾರನ್ನೋ ಟಾರ್ಗೆಟ್ ಮಾಡಿಕೊಂಡು ಗುರಿ ತಪ್ಪಿ ಕಾರ್ತಿಕ್ ಮೇಲೆ ದಾಳಿ ನಡೆಸಿರಬಹುದೇ ಎಂಬುದರ ಬಗ್ಗೆಯೂ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X