Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜ್ ಠಾಕ್ರೆ ನಿಗದಿಪಡಿಸಿದ ಸಿನಿಮಾ...

ರಾಜ್ ಠಾಕ್ರೆ ನಿಗದಿಪಡಿಸಿದ ಸಿನಿಮಾ ನಿರ್ಮಾಪಕರ ಪ್ರಾಯಶ್ಚಿತ್ತ ಬೆಲೆ ಎಷ್ಟು?

ವಾರ್ತಾಭಾರತಿವಾರ್ತಾಭಾರತಿ22 Oct 2016 1:39 PM IST
share
ರಾಜ್ ಠಾಕ್ರೆ ನಿಗದಿಪಡಿಸಿದ ಸಿನಿಮಾ ನಿರ್ಮಾಪಕರ ಪ್ರಾಯಶ್ಚಿತ್ತ ಬೆಲೆ ಎಷ್ಟು?

ಮುಂಬೈ,ಅ.22: ಪಾಕಿಸ್ತಾನಿ ಕಲಾವಿದರನ್ನು ತಮ್ಮ ಚಿತ್ರಗಳಲ್ಲಿ ಬಳಸಿಕೊಂಡಿರುವ ಚಿತ್ರ ನಿರ್ಮಾಪಕರು ‘ಪ್ರಾಯಶ್ಚಿತ್ತ ದಂಡ’ವಾಗಿ ಸೇನೆಯ ಕಲ್ಯಾಣ ನಿಧಿಗೆ ಐದು ಕೋ.ರೂ.ಗಳನ್ನು ನೀಡಬೇಕಾಗುತ್ತದೆ ಎಂದು ಇಂದಿಲ್ಲಿ ತಿಳಿಸಿದ ಎಂಎನ್‌ಎಸ್ ವರಿಷ್ಠ ರಾಜ್ ಠಾಕ್ರೆ ಅವರು, ಭವಿಷ್ಯದಲ್ಲಿ ಪಾಕಿಸ್ತಾನಿ ಕಲಾವಿದರನ್ನು ಬಳಸುವುದಿಲ್ಲ ಎಂದು ನಿರ್ಮಾಪಕರು ತನಗೆ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಕರಣ್ ಜೋಹರ್ ಅವರ ‘ಎ ದಿಲ್ ಹೈ ಮುಷ್ಕಿಲ್ ’ಚಿತ್ರದ ಬಿಡುಗಡೆಗೆ ತಾನು ತಡೆಯೊಡ್ಡುವುದಿಲ್ಲವೆಂದು ಹೇಳಿದರು.

 ಜೋಹರ್ ಮತ್ತು ಚಿತ್ರ ನಿರ್ಮಾಪಕರ ಗಿಲ್ಡ್‌ನ ಅಧ್ಯಕ್ಷ ಮುಕೇಶ್ ಭಟ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಠಾಕ್ರೆ ಅವರನ್ನು ಭೇಟಿಯಾಗಿದ್ದರು. ಪಾಕ್ ನಟ ಫವಾದ್ ಖಾನ್ ಅಭಿನಯಿಸಿರುವ ‘ಎ ದಿಲ್..’ಚಿತ್ರದ ಪ್ರದರ್ಶನವನ್ನು ತಡೆಯುವುದಾಗಿ ಎಂಎನ್‌ಎಸ್ ಸೇರಿದಂತೆ ಹಲವಾರು ಸಂಘಟನೆಗಳು ಬೆದರಿಕೆಯನ್ನೊಡಿದ್ದವು. ನಾವು ರಚನಾತ್ಮಕ ಮಾತುಕತೆಗಳನ್ನು ನಡೆಸಿದೆವು. ಚಿತ್ರರಂಗದ ಭಾವನೆಗಳನ್ನು ಹಂಚಿಕೊಂಡಿದ್ದೇವೆ. ನಮ್ಮ ಮಟ್ಟಿಗೆ ಭಾರತವು ಮೊದಲು... ಭವಿಷ್ಯದಲ್ಲಿ ಪಾಕ್ ಕಲಾವಿದರೊಂದಿಗೆ ಕಾರ್ಯ ನಿರ್ವಹಿಸುವುದಿಲ್ಲವೆಂದು ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದ್ದೇವೆ ಎಂದು ಭಟ್ ತಿಳಿಸಿದರು.

ತಮ್ಮ ಚಿತ್ರಗಳಲ್ಲಿ ಪಾಕ್ ಕಲಾವಿದರನ್ನು ಬಳಸಿಕೊಂಡಿರುವ ಎಲ್ಲ ನಿರ್ಮಾಪಕರು ಪ್ರಾಯಶ್ಚಿತ್ತ ದಂಡವಾಗಿ ಸೇನೆಯ ಕಲ್ಯಾಣ ನಿಧಿಗೆ ಸ್ವಲ್ಪ ಹಣವನ್ನು ಪಾವತಿಸಬೇಕು. ಚಿತ್ರವೊಂದಕ್ಕೆ ಐದು ಕೋ.ರೂ.ನೀಡುವಂತೆ ತಾನು ಸೂಚಿಸಿದ್ದೇನೆ ಎಂದು ಠಾಕ್ರೆ ತಿಳಿಸಿದರು.

 ಶಾರುಕ್ ಖಾನ್ ಅವರ ಮುಂಬರುವ ‘ರಯೀಸ್ ’ ಮತ್ತು ‘ಡಿಯರ್ ಜಿಂದಗಿ’ ಚಿತ್ರಗಳಿಗೂ ಈ ಷರತ್ತು ಅನ್ವಯಿಸುತ್ತದೆ.

ಚಿತ್ರ ಆರಂಭಗೊಳ್ಳುವುದಕ್ಕೆ ಮುನ್ನ ಸಂದೇಶವೊಂದನ್ನು ತೋರಿಸುವ ಮೂಲಕ ಪಾಕಿಸ್ತಾನಿ ಭಯೋತ್ಪಾದಕರಿಂದ ಕೊಲ್ಲಲ್ಪಟ್ಟ ಯೋಧರಿಗೆ ಗೌರವ ಸಲ್ಲಿಸುವ ಕೊಡುಗೆಯನ್ನು ಜೋಹರ್ ಮುಂದಿಟ್ಟಿದ್ದಾರೆ ಎಂದು ಭಟ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X