Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಡುಬಿದ್ರೆ: ಉಪನಿರೀಕ್ಷಕ ಅಜ್ಮತ್ ಅಲಿಗೆ...

ಪಡುಬಿದ್ರೆ: ಉಪನಿರೀಕ್ಷಕ ಅಜ್ಮತ್ ಅಲಿಗೆ ಬೀಳ್ಕೊಡುಗೆ

ವಾರ್ತಾಭಾರತಿವಾರ್ತಾಭಾರತಿ22 Oct 2016 4:48 PM IST
share
ಪಡುಬಿದ್ರೆ: ಉಪನಿರೀಕ್ಷಕ ಅಜ್ಮತ್ ಅಲಿಗೆ ಬೀಳ್ಕೊಡುಗೆ

ಪಡುಬಿದ್ರೆ, ಅ.22: ಪಡುಬಿದ್ರೆ ಠಾಣೆಯಲ್ಲಿ ಉಪನಿರೀಕ್ಷಕರಾಗಿ ಮೂರುವರೆ ವರ್ಷಗಳ ಕಾಲ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ಇದೀಗ ಮಂಗಳೂರು ಡಿಸಿಆರ್‌ಇ ನಿರೀಕ್ಷಕರಾಗಿ ಪದೋನ್ನತಿಗೊಂಡ ಅಝ್ಮತ್ ಅಲಿಯವರಿಗೆ ಪಡುಬಿದ್ರೆ ನಾಗರಿಕರ ವತಿಯಿಂದ ಬೀಳ್ಕೊಡುಗೆ ಸಮಾರಂಭ ಪಡುಬಿದ್ರೆ ಖಾಸಗಿ ಹೋಟೆಲ್‌ನ ಸಭಾಭವನದಲ್ಲಿ ಶುಕ್ರವಾರ ನಡೆಯಿತು.

ಸಮಾರಂಭದಲ್ಲಿ ಪಡುಬಿದ್ರೆ ಠಾಣಾ ವ್ಯಾಪ್ತಿಯ ಹೆಜಮಾಡಿ, ಪಡುಬಿದ್ರೆ, ಪಲಿಮಾರು, ಮುದರಂಗಡಿ, ಎರ್ಮಾಳು, ಉಚ್ಚಿಲ, ಎಲ್ಲೂರಿನ ವಿವಿಧ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರ ವತಿಯಿಂದ ಅಜ್ಮತ್ ಆಲಿಯವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಮಾತನಾಡಿದ ಅಝ್ಮತ್ ಅಲಿ, ಸಾರ್ವಜನಿಕ ಸೇವೆಗೆ ಪೊಲೀಸ್ ಇಲಾಖೆ ಅತ್ಯುತ್ತಮ. ಸಮಾಜ ಸೇವೆಯನ್ನು ಚಾಚೂತಪ್ಪದೆ ನಿರ್ವಹಿಸುವುದು ಪೊಲೀಸ್ ಇಲಾಖೆಯ ಕಾರ್ಯಭಾಗವಾಗಿದೆ. ಸಮಾಜಮುಖಿ ಕೆಲಸ ನಿರ್ವಹಿಸಲು ಮನಸ್ಸು ಶುದ್ಧ ಇರಬೇಕು. ಶುದ್ಧ ಮನಸ್ಸಿನೊಂದಿಗೆ ಉತ್ತಮ ಕೆಲಸ ಮಾಡಬಹುದು. ಸಿಬ್ಬಂದಿ ಹಾಗೂ ಮೇಲಧಿಕಾರಿಗಳ ಅತ್ಯುತ್ತಮ ಸಹಕಾರದಿಂದ ಉತ್ತಮ ಸೇವೆ ಸಲ್ಲಿಸಿದ ನೆಮ್ಮದಿ ಇದೆ ಎಂದರು.

ಈ ಸಂದರ್ಭ ನನ್ನ ತಂದೆ, ತಾಯಿ ಹಾಗೂ ಕುಟುಂಬಿಕರ ಮಾರ್ಗದರ್ಶನ ಹಾಗೂ ಪ್ರೋತ್ಸಾಹವೇ ನನ್ನ ಉನ್ನತಿಗೆ ಹಾಗೂ ಸಾಧನೆಗೆ ಕಾರಣ. ತಮ್ಮ ಪೊಲೀಸ್ ವೃತ್ತಿ ಬದುಕಿಗೆ ಪ್ರೇರಣೆಯಾದ ಪೊಲೀಸ್ ಅಧಿಕಾರಿ ಅಮಾನುಲ್ಲಾ ಅವರ ಪ್ರೇರಣೆಯಿಂದ ಪೊಲೀಸ್ ಅಧಿಕಾರಿಯಾದೆ ಎಂದು ನೆನಪಿಸಿಕೊಂಡರು.

ಈ ಸಂದರ್ಭ ಮಾತನಾಡಿದ ಸುನಿಲ್ ನಾಯಕ್, ನನ್ನ ಸೇವೆಯ ಸಂದಭರ್ ಕಾಪು ವ್ಯಾಪ್ತಿಯಲ್ಲಿ ಪಡುಬಿದ್ರೆ ಪೊಲೀಸ್ ಠಾಣೆ ಅತ್ಯುತ್ತಮ ಠಾಣೆ ಎಂದು ಪ್ರಸಿದ್ಧಿ ಪಡೆದಿತ್ತು. ಅದಕ್ಕೆ ಅಝ್ಮತ್ ಆಲಿಯವರ ಕಾರಣ. ಇಲ್ಲಿ ಠಾಣೆಯಲ್ಲಿ ಸಂಘಟಿತರಾಗಿ ಕೆಲಸ ಮಾಡಿದ ಕಾರಣ ಹಲವು ಹಲವು ಕ್ಲಿಷ್ಟಕರ ಪ್ರಕರಣ ಭೇದಿಸಲು ಸಾಧ್ಯವಾಗಿತ್ತು ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾರ್ಕಳ ನಿರೀಕ್ಷಕ ಜಾಯ್ ಅಂಥೋನಿ ಮಾತನಾಡಿ, ನಿಷ್ಠಾವಂತ ಕೆಲಸಕ್ಕೆ ಪ್ರತಿಫಲ ಇದೆ ಅನ್ನೋದಕ್ಕೆ ಇಲ್ಲಿ ಸೇರಿದ ಜನರ ಪ್ರೀತಿಯೇ ಸಾಕ್ಷಿ. ಅಝ್ಮತ್ ಆಲಿಯವರು ಇನ್ನಷ್ಟು ಉನ್ನತ ಹುದ್ದೆಯನ್ನು ಅಲಂಕರಿಸಲಿ ಎಂದು ಹಾರೈಸಿದರು.

ಇದೇ ವೇಳೆ ಕಾಪು ನಿರೀಕ್ಷಕರಾಗಿ ಸೇವೆ ಸಲ್ಲಿಸಿ ಮಂಗಳೂರು ಸಿಸಿಬಿಗೆ ವರ್ಗಾವಣೆಗೊಂಡ ಸುನಿಲ್ ನಾಯಕ್, ಪಡುಬಿದ್ರೆ ಠಾಣೆಯಲ್ಲಿ ಸೇವೆ ಸಲ್ಲಿಸಿ ಪದೋನ್ನತಿ ಹಾಗೂ ವರ್ಗಾವಣೆಗೊಂಡು ವಿವಿಧ ಠಾಣೆಗಳಿಗೆ ತೆರಳುತ್ತಿರುವ ರಘುವೀರ್, ರವಿಕುಮಾರ್, ವಿಶ್ವಜಿತ್, ನಾಗೇಶ್, ಜೀವನ್, ವಿಶಾಲಾಕ್ಷಿಯವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.

ಪಡುಬಿದ್ರೆ ಪ್ರಭಾರ ಠಾಣಾಧಿಕಾರಿ ಬಸಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಎಸ್ಸೈ ರಮೇಶ್ ಸ್ವಾಗತಿಸಿ ಪ್ರಸ್ತಾವಿಸಿದರು. ಸಂತೋಷ್ ಪಡುಬಿದ್ರೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X