Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು ದೇವಳ ಗದ್ದೆಯಲ್ಲಿ ವಾರದ ಸಂತೆ...

ಪುತ್ತೂರು ದೇವಳ ಗದ್ದೆಯಲ್ಲಿ ವಾರದ ಸಂತೆ ಪ್ರಸ್ತಾಪಕ್ಕೆ ವಿರೋಧ

ಗಣೇಶೋತ್ಸವ ಸಮಿತಿಯ ವತಿಯಿಂದ ಎಸಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ22 Oct 2016 8:39 PM IST
share
ಪುತ್ತೂರು ದೇವಳ ಗದ್ದೆಯಲ್ಲಿ ವಾರದ ಸಂತೆ ಪ್ರಸ್ತಾಪಕ್ಕೆ ವಿರೋಧ

ಪುತ್ತೂರು, ಅ.22: ಪುತ್ತೂರಿನ ಮಹಾಲಿಂಗೇಶ್ವರ ದೇವಾಲಯದ ಗದ್ದೆಯಲ್ಲಿ ವಾರದ ಸಂತೆ ನಡೆಸಲು ತೀರ್ಮಾನಿಸಲಾಗಿದ್ದು, ಈ ಕುರಿತು ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಿಗೆ ಮನವಿ ಮಾಡಿಕೊಳ್ಳಲಾಗಿದೆ ಎಂದು ನಗರಸಭೆಯ ಅಧ್ಯಕ್ಷೆ ಜಯಂತಿ ಬಲ್ನಾಡು ಅವರು ಶುಕ್ರವಾರ ಹೇಳಿಕೆ ನೀಡಿದ್ದು, ಇದರ ಬೆನ್ನಲ್ಲೇ ದೇವಾಲಯ ವಠಾರದ ಗಣೇಶೋತ್ಸವ ಸಮಿತಿಯವರು ಅವಕಾಶ ನೀಡಬಾರದು ಎಂದು ಮನವಿ ಸಲ್ಲಿಸುವುದರೊಂದಿಗೆ ಪುತ್ತೂರಿನ ಸಂತೆ ವಿವಾದ ಮತ್ತೆ ಮುಂದುವರಿಯುತ್ತಿದೆ.

ಪುತ್ತೂರು ಸಂತೆ ಎಪಿಎಂಸಿ ಪ್ರಾಂಗಣದಲ್ಲಿಯೇ ಆಗಬೇಕು. ಯಾವುದೇ ಕಾರಣಕ್ಕೂ ಮಹಾಲಿಂಗೇಶ್ವರ ದೇವಾಲಯದ ಗದ್ದೆಯಲ್ಲಿ ಸಂತೆ ಮಾಡಲು ಅವಕಾಶ ನಿಡಬಾರದು ಎಂದು ಆಗ್ರಹಿಸಿ ಮಹಾಲಿಂಗೇಶ್ವರ ದೇವಾಲಯ ವಠಾರದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪ್ರಮುಖರು ಶನಿವಾರ ಪುತ್ತೂರು ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.

 ಪುತ್ತೂರು ಮಿನಿ ವಿಧಾನಸೌಧದ ಎದುರು ಶನಿವಾರ ಸೇರಿದ ಮಹಾಲಿಂಗೇಶ್ವರ ದೇವಾಲಯ ವಠಾರದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು ಪುತ್ತೂರಿನ ಎಪಿಎಂಸಿ ಪ್ರಾಂಗಣದಲ್ಲಿಯೇ ಸಂತೆ ನಡೆಯಬೇಕು. ಯಾವುದೇ ಕಾರಣಕ್ಕೂ ಮಹಾಲಿಂಗೇಶ್ವರ ದೇವಾಲಯದ ಗದ್ದೆಯಲ್ಲಿ ಆಗಬಾರದು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಡಾ.ಎಂ.ಕೆ.ಪ್ರಸಾದ್ ಭಂಡಾರಿ, ಎಪಿಎಂಸಿ ಪ್ರಾಂಗಣದಲ್ಲಿ ಒಳ್ಳೆಯ ರೀತಿಯಲ್ಲಿ ತುಂಬಾ ಜನ ಸೇರಿ ಸಂತೆ ನಡೆಯುತ್ತಿದೆ. ಹಾಗಿರುವಾಗ ಅಲ್ಲಿ ನಡೆಯುತ್ತಿರುವ ಸಂತೆಯನ್ನು ಇನ್ನೊಂದು ಕಡೆಗೆ ಸ್ಥಳಾಂತರಿಸುವುದು ಸರಿಯಲ್ಲ. ರೈತರ ಸರಕನ್ನು ಮಾರುವ ಉದ್ದೇಶದಿಂದಲೇ ಸರಕಾರ ಎಪಿಎಂಸಿ ವ್ಯವಸ್ಥೆಯನ್ನು ಮಾಡಿದ್ದು, ಸಂತೆ ಅಲ್ಲಿಯೇ ನಡೆಯಬೇಕು. ಮಹಾಲಿಂಗೇಶ್ವರ ದೇವಾಲಯದ ಗದ್ದೆಯಲ್ಲಿ ಮಾತ್ರ ಆಗಬಾರದು ಎಂದರು.

ದೇವಾಲಯದ ಗದ್ದೆಗೆ ಬಂದು ವ್ಯಾಪಾರಿಗಳು ತರಕಾರಿ, ಮೀನು, ಕೋಳಿ ಮಾರುವುದು ಸರಿಯಲ್ಲ. ದೇವಾಲಯದ ವಠಾರ ಸ್ವಚ್ಛವಾಗಿರಬೇಕು. ಒಳ್ಳೆಯ ಗಾಳಿ, ಬೆಳಕು ನೀಡುವ ವಾತಾವರಣವಿರಬೇಕು. ಶಿವನ ದೃಷ್ಟಿ ಸ್ಮಶಾನದ ಮೇಲೆ ಬೀಳುವುದು ಕಾಶಿ ಮತ್ತು ಪುತ್ತೂರಿನಲ್ಲಿ ಮಾತ್ರ. ದೇವಾಲಯದ ಎದುರಿನ ಗದ್ದೆಯಲ್ಲಿ ಸಂತೆ ವ್ಯಾಪಾರ ಮಾಡಿದರೆ ಇಲ್ಲಿನ ಮಹಾಲಿಂಗೇಶ್ವರ ದೇವರ ದೃಷ್ಟಿ ಸ್ಮಶಾನದ ಮೇಲೆ ಬೀಳುವುದು ತಪ್ಪಿಹೋಗುತ್ತದೆ. ಇದು ಪುತ್ತೂರಿಗೆ ಒಳ್ಳೆಯದಲ್ಲ ಎಂದ ಅವರು ಯಾವುದೇ ಕಾರಣಕ್ಕೂ ದೇವಾಲಯ ಗದ್ದೆಯಲ್ಲಿ ಸಂತೆ ಮಾಡಬಾರದು ಎಂದು ಒತ್ತಾಯಿಸಿದರು.

ಎಪಿಎಂಸಿ ಪ್ರಾಂಗಣದ ಸಂತೆಗೆ ಜನ ಬರುತ್ತಿಲ್ಲ ಎನ್ನುವುದು ಸುಳ್ಳು, ನಾವು ಪ್ರತೀ ವಾರವೂ ಅಲ್ಲಿಗೆ ಹೋಗುತ್ತಿದ್ದೇವೆ. ಬಹಳಷ್ಟು ಜನ ಬರುತ್ತಿದ್ದಾರೆ ಎಂದ ಡಾ.ಎಂ.ಕೆ.ಪ್ರಸಾದ್ ಭಂಡಾರಿ, ಕಾಂಗ್ರೆಸ್ ಮತ್ತು ಬಿಜೆಪಿಯವರು ಸಂತೆ ಎಪಿಎಂಸಿಯಲ್ಲಿ ಬೇಡ ಎನ್ನುತ್ತಿದ್ದಾರೆ. ಆದರೆ ನಾವು ಎಪಿಎಂಸಿಯಲ್ಲೇ ಆಗಬೇಕೆಂದು ಹೇಳುತ್ತಿದ್ದೇವೆ. ಇದರಲ್ಲಿ ರಾಜಕೀಯವಿಲ್ಲ ಎಂದು ಹೇಳಿದರು.

ಬಳಿಕ ಮನವಿ ಸಲ್ಲಿಸಲಾಯಿತು. ಪುತ್ತೂರು ಉಪವಿಭಾಗಾಧಿಕಾರಿಗಳ ಅನುಪಸ್ಥಿತಿಯಲ್ಲಿ ಕಚೇರಿಯ ಮೆನೇಜರ್ ಮನವಿ ಸ್ವೀಕರಿಸಿದರು. ಮಹಾಲಿಂಗೇಶ್ವರ ದೇವಾಲಯದ ವಠಾರದ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಅರುಣ್‌ಕುಮಾರ್ ಪುತ್ತಿಲ, ಸಮಿತಿಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಪದಾಧಿಕಾರಿಗಳಾದ ಶೀನಪ್ಪ, ನವೀನ್ ಪಡ್ನೂರು, ದಯಾನಂದ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X