Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣಿಪಾಲ: ಲಕ್ವಾ ಜಾಗೃತಿಗಾಗಿ...

ಮಣಿಪಾಲ: ಲಕ್ವಾ ಜಾಗೃತಿಗಾಗಿ ವಿದ್ಯಾರ್ಥಿಗಳಿಂದ ವಾಕಥಾನ್

ವಾರ್ತಾಭಾರತಿವಾರ್ತಾಭಾರತಿ22 Oct 2016 9:59 PM IST
share
ಮಣಿಪಾಲ: ಲಕ್ವಾ ಜಾಗೃತಿಗಾಗಿ ವಿದ್ಯಾರ್ಥಿಗಳಿಂದ ವಾಕಥಾನ್

ಉಡುಪಿ, ಅ.22: ಅ.29ರಂದು ವಿಶ್ವ ಲಕ್ವಾ ದಿನವನ್ನು ಆಚರಿಸುವ ಹಿನ್ನೆಲೆಯಲ್ಲಿ ಮಣಿಪಾಲ ಕಸೂತಿರ್ಬಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ನ್ಯೂರಾಲಜಿ ವಿಭಾಗದ ವತಿಯಿಂದ ವಾಕಥಾನ್ ನಡಿಗೆಯನ್ನು ಇಂದು ಆಯೋಜಿಸಲಾಗಿತ್ತು.

 ಇದರಲ್ಲಿ 300ಕ್ಕೂ ಅಧಿಕ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಲಕ್ವಾದ ಕುರಿತು ಜನರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸಲು ಈ ವಾಕಥಾನ್‌ನ್ನು ಆಯೋಜಿಸಲಾಗಿತ್ತು. ಭಾರತದಲ್ಲಿ ಅತೀ ದೊಡ್ಡ ಆರೋಗ್ಯ ಸಮಸ್ಯೆಯಾಗಿರುವ ಲಕ್ವಾದ ಕುರಿತು ಜಾಗೃತಿ ಮೂಡಿಸುವ ಅಗತ್ಯ ಕುರಿತು ಗಮನ ಸೆಳೆಯಲಾಗಿದೆ.

ವಯಸ್ಕರಲ್ಲಿ ಅತೀಹೆಚ್ಚು ಕಾಣಿಸಿಕೊಳ್ಳುವ ಈ ರೋಗ ಜಗತ್ತಿನಾದ್ಯಂತ ಅತೀ ಹೆಚ್ಚು ಜನರ ಸಾವಿಗೆ ಕಾರಣವಾಗುವ ಎರಡನೇ ರೋಗವೆನಿಸಿಕೊಂಡಿದೆ. ಆದರೆ ಕಳೆದ ಎರಡು ದಶಕಗಳಲ್ಲಿ ಹೊಸ ಚಿಕಿತ್ಸೆಗಳ ಮೂಲಕ ಲಕ್ವಾ ನಿರ್ವಹಣೆಯಲ್ಲಿ ಕಾಂತ್ರಿಕಾರಕ ಬದಲಾವಣೆಗಳಾಗಿವೆ. ಇದರಲ್ಲಿ ರೋಗಿಯನ್ನು ನಾಲ್ಕೂವರೆ ಗಂಟೆಯೊಳಗೆ ಆಸ್ಪತ್ರೆಗೆ ಕರೆದುಕೊಂಡು ಬಂದರೆ ಪರಿಣಾಮಕಾರಿ ಚಿಕಿತ್ಸೆ ಲಭ್ಯವಿದೆ ಎಂದು ಕೆಎಂಸಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
 
ಇದರಲ್ಲಿ ರಕ್ತ ಹೆಪ್ಪುಗಟ್ಟುವಿಕೆಯಿಂದ ಮೆದುಳಿಗೆ ರಕ್ತ ಪೂರೈಕೆ ಸ್ಥಗಿತ ಗೊಂಡಿರುವುದನ್ನು ನಿಗದಿತ ಸಮಯಾವಧಿಯ ಒಳಗೆ ಪುನರಾರಂಭಿಸದಿದ್ದರೆ, ಮೆದುಳಿಗೆ ಸರಿಪಡಿಸಲಾಗದ ಹಾನಿಯಾಗುತ್ತದೆ. ಎಲ್ಲಾ ವಯೋಮಾನಗಳ ಆರು ಜನರಲ್ಲಿ ಒಬ್ಬ ವ್ಯಕ್ತಿ ಲಕ್ವಾದ ಆಘಾತಕ್ಕೆ ಒಳಗಾಗುತ್ತಾರೆ. ಇವರಲ್ಲಿ ಕೇವಲ ಶೇ.50 ಮಂದಿ 6 ತಿಂಗಳಿಗಿಂತ ಹೆಚ್ಚು ಸಮಯ ಬದುಕುತ್ತಾರೆ. ಇವರಲ್ಲಿ ಅರ್ಧದಷ್ಟು ಮಂದಿ ದೈನಂದಿನ ಚಟುವಟಿಕೆಗಳಲ್ಲಿ ಆಂಶಿಕ ಅಥವಾ ಸಂಪೂರ್ಣ ನೆರವು ಬೇಕಾಗುತ್ತದೆ. ಶೇ.20 ಮಂದಿ ಮಾತ್ರ ಸಂಪೂರ್ಣವಾಗಿ ಚೇತರಿಸಿಕೊಳ್ಳುತ್ತಾರೆ. ಕ್ಲಪ್ತ ಸಮಯದಲ್ಲಿ ಪರಿಣಾಮಕಾರಿ ಚಿಕಿತ್ಸೆ ಒದಗಿಸುವ ಸಲುವಾಗಿ, ಲಕ್ವಾ ಉಂಟಾಗಿರುವ ವ್ಯಕ್ತಿಯನ್ನು ಆದಷ್ಟು ಬೇಗನೆ ಚಿಕಿತ್ಸೆಗಾಗಿ ಕರೆತರಬೇಕು ಎಂಬ ಸಂದೇಶವನ್ನು ಎಲ್ಲರಿಗೂ ತಲುಪುವುದು ಅಗತ್ಯ ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X