Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮತ್ತೆ ವಿವಾದದ ಸುತ್ತ ಜೆಎನ್‌ಯು

ಮತ್ತೆ ವಿವಾದದ ಸುತ್ತ ಜೆಎನ್‌ಯು

ವಿದ್ಯಾರ್ಥಿಯ ಕೊಲೆ ಸಾಧ್ಯತೆ: ಪ್ರತ್ಯಕ್ಷದರ್ಶಿಯ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ22 Oct 2016 11:47 PM IST
share

ಹೊಸದಿಲ್ಲಿ, ಅ.22: ಸುಮಾರು 30 ಮಂದಿ ವಿದ್ಯಾರ್ಥಿಗಳಿದ್ದ ತಂಡವೊಂದು ನಜೀಬ್‌ನನ್ನು ಸುತ್ತುವರಿದು ಥಳಿಸುತ್ತಿತ್ತು. ಜಾತಿ ನಿಂದನೆ ಮಾಡುತ್ತಾ ನಿಂದಿಸುತ್ತಿದ್ದ ಆ ಗುಂಪಿನಲ್ಲಿದ್ದ ಕೆಲವರು, ಈತನನ್ನು 72 ಕನ್ಯೆಯರ ಬಳಿ ಕಳಿಸುತ್ತೇವೆ ಎಂದು ಹಂಗಿಸುತ್ತಿದ್ದರು... ಇದು ನಾಪತ್ತೆಯಾಗಿರುವ ಜೆಎನ್‌ಯು ವಿದ್ಯಾರ್ಥಿ ನಜೀಬ್ ಅಹ್ಮದ್‌ನನ್ನು ಥಳಿಸುತ್ತಿದ್ದ ವೇಳೆ ಸ್ಥಳದಲ್ಲಿದ್ದ ಎಂಫಿಲ್ ವಿದ್ಯಾರ್ಥಿ ಶಾಹಿದ್ ರಝಾ ಖಾನ್ ಎಂಬಾತನ ಹೇಳಿಕೆ.

   
 
  

 ಆ ರಾತ್ರಿ ಏನೋ ಶಬ್ದ ಕೇಳಿ ತಾನು ಪ್ರಥಮ ಮಹಡಿಗೆ ಇಳಿದು ಬಂದೆ. ಅಲ್ಲಿ ನಜೀಬ್ ತೀವ್ರ ಹಲ್ಲೆಗೊಳಗಾದ ಸ್ಥಿತಿಯಲ್ಲಿದ್ದ. ಆತನ ಮುಖ, ಮೂಗಿನಲ್ಲಿ ರಕ್ತ ಒಸರುತ್ತಿತ್ತು. ವಾರ್ಡನ್‌ರನ್ನು ಕರೆದು ನಜೀಬ್‌ನನ್ನು ಬಾತ್‌ರೂಂಗೆ ಕರೆದುಕೊಂಡು ಹೋಗುವಂತೆ ತಿಳಿಸಿದೆ. ಆದರೆ ಅಷ್ಟರಲ್ಲೇ ಧಾವಿಸಿ ಬಂದ 25ರಿಂದ 30ರಷ್ಟು ವಿದ್ಯಾರ್ಥಿಗಳು ಬಾತ್‌ರೂಂನಲ್ಲೇ ನಜೀಬ್‌ನನ್ನು ಥಳಿಸಲಾರಂಭಿಸಿದರು . ವಾರ್ಡನ್‌ರ ಕಚೇರಿಗೆ ಕರೆತರುವ ಹಾದಿಯಲ್ಲೂ ನಜೀಬ್ ಮೇಲೆ ಹಲ್ಲೆ ನಡೆಸಲಾಗಿದೆ. ಮೇಲಿನ ಮಹಡಿಯಲ್ಲಿದ್ದ ಒಬ್ಬರು ಲೈಟ್ ಆರಿಸಿಬಿಟ್ಟರು. ಕತ್ತಲಿನಲ್ಲೂ ಥಳಿತ ನಿಲ್ಲಲಿಲ್ಲ. ಆತನಿಗೆ ಚಿತ್ರಹಿಂಸೆ ನೀಡುತ್ತಿದ್ದರು. ಬಳಿಕ ಲೈಟ್ ಹಾಕಿದಾಗಲೂ ಆತನಿಗೆ ಥಳಿಸುತ್ತಲೇ ಇದ್ದರು. ದೈಹಿಕ ಚಿತ್ರಹಿಂಸೆಯ ಜೊತೆಗೆ ಅಸಭ್ಯ ಪದಗಳಲ್ಲಿ ಜಾತಿ ನಿಂದನೆ ನಡೆಯುತ್ತಿತ್ತು. ವಾರ್ಡನ್ ನಿಷ್ಪಕ್ಷಪಾತ ರೀತಿಯಲ್ಲಿ ವರ್ತಿಸಲಿಲ್ಲ. ಅವರ ಕಚೇರಿಯೊಳಗೆ ನಡೆದ ವಿಚಾರಣೆಯಲ್ಲಿ ನಜೀಬ್‌ನ ಮೇಲೆಯೇ ತಪ್ಪು ಹೊರಿಸಲಾಯಿತು. ಅಲ್ಲೂ ಆತನನ್ನು ನಿಂದಿಸಲಾಯಿತು. ಅಲ್ಲಿ ಕೆಲವರು ಈತನನ್ನು 72 ಕನ್ಯೆಯರ ಬಳಿ ಕಳಿಸುತ್ತೇವೆ ಎಂದು ಹಂಗಿಸುತ್ತಿದ್ದರು... ಇದರ ಅರ್ಥ ನಿಮಗೆ ಗೊತ್ತಿರಬೇಕು ಎಂದು ಘಟನೆಯ ಬಗ್ಗೆ ವಿವರಿಸುತ್ತಾನೆ ಶಹೀದ್. ಮೆಸ್‌ನ ಕಾರ್ಯದರ್ಶಿ ಸ್ಥಾನಕ್ಕೆ ನಡೆಯುವ ಚುನಾವಣೆಯ ಪ್ರಚಾರಕ್ಕೆಂದು ಎಬಿವಿಪಿ ಕಾರ್ಯಕರ್ತ ವಿಕ್ರಾಂತ್ ನಜೀಬ್‌ನ ಕೋಣೆಗೆ ಹೋಗಿದ್ದ. ಅಲ್ಲಿ ಅವರಿಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ವಿಕ್ರಾಂತ್ ಕೈಯಲ್ಲಿ ಹಾಕಿಕೊಂಡಿದ್ದ ಕೇಸರಿ ದಾರವನ್ನು ಕಂಡು ನಜೀಬ್ ಜಗಳಕ್ಕೆ ಇಳಿದಿದ್ದ ಎಂಬುದು ಎಬಿವಿಪಿ ವಿದ್ಯಾರ್ಥಿಗಳ ಹೇಳಿಕೆ. ನಜೀಬ್ ಜಾಮಿಯಾ ಮಿಲಿಯಾ ವಿವಿಗೆ ಪ್ರವೇಶ ಪತ್ರ ಪಡೆದಿದ್ದರೂ ಆತ ಜೆಎನ್‌ಯು ವಿವಿಯಲ್ಲಿ ಶಿಕ್ಷಣ ಮುಂದು ವರಿಸಲು ನಿರ್ಧರಿಸಿದ್ದ. ಕೇವಲ 15 ದಿನಗಳ ಹಿಂದೆಯಷ್ಟೇ ಹಾಸ್ಟೆಲ್‌ಗೆ ಸೇರಿದ್ದ. ಆತ ಅಲ್ಲಿ ಜಗಳವಾಡುವ ಪ್ರಮೇಯವೇ ಇಲ್ಲ ಎನ್ನುತ್ತಾರೆ ನಜೀಬ್‌ನ ಸೋದರ ಮುಜೀಬ್. ನಜೀಬ್ ನಾಪತ್ತೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿ, ವಿಶೇಷ ತನಿಖಾ ತಂಡ ತನಿಖೆ ಆರಂಭಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X