Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಲಕ್ಷಾಂತರ ವೌಲ್ಯದ ಅಕ್ರಮ ಮರ ಶೇಖರಣೆ:...

ಲಕ್ಷಾಂತರ ವೌಲ್ಯದ ಅಕ್ರಮ ಮರ ಶೇಖರಣೆ: ಓರ್ವನ ಬಂಧನ

ವಾರ್ತಾಭಾರತಿವಾರ್ತಾಭಾರತಿ23 Oct 2016 11:55 PM IST
share
ಲಕ್ಷಾಂತರ ವೌಲ್ಯದ ಅಕ್ರಮ ಮರ ಶೇಖರಣೆ: ಓರ್ವನ ಬಂಧನ

ಬೆಳ್ತಂಗಡಿ, ಅ.23: ತಾಲೂಕಿನ ಶಿಬಾಜೆ ಗ್ರಾಮದ ನಿರಾಣ - ನಿರ್ಮುಡೆ ರಸ್ತೆಯ ಪೊಸೋಡಿ ಬಂಗೇರಡ್ಕ ಎಂಬಲ್ಲಿ ಸರಕಾರಿ ಸ್ಥಳದಲ್ಲಿದ್ದ ಬೀಟೆ ಜಾತಿಯ ಹಾಗೂ ಇತರೆ 7ಲಕ್ಷ ಮೌಲ್ಯದ ಮರಗಳನ್ನು ಅಕ್ರಮವಾಗಿ ಕಡಿದು ಹಲಗೆಗಳನ್ನಾಗಿ ಮಾಡಿಟ್ಟ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಂಗಳೂರು ಅರಣ್ಯ ಸಂಚಾರ ದಳದ ಡಿಎಫ್‌ಒ ಸದಾಶಿವ ಭಟ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಮರಗಳನ್ನು ವಶಪಡಿಸಿಕೊಂಡು, ಆರೋಪಿ ಅಣ್ಣು ಎಂಬಾತನನ್ನು ಬಂಧಿಸಿದ್ದಾರೆ.

ಕಳೆದ ಎರಡು ದಿನಗಳ ಹಿಂದೆಯೇ ಈ ಸ್ಥಳದಲ್ಲಿ ದೊಡ್ಡ ಗಾತ್ರದ ಬೀಟೆ, ಹಲಸು, ಬೇಂಗ ಮುಂತಾದ ಜಾತಿಯ ಮರಗಳನ್ನು ಕಡಿದು ಹಾಕಿದ್ದ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡ ಲಾಗಿತ್ತು. ಶನಿವಾರ ರಾತ್ರಿ ಮರಗಳನ್ನು ಸಾಗಾಟ ಮಾಡುವ ತಯಾ ರಿಯೂ ನಡೆದಿತ್ತು ಎನ್ನಲಾಗಿದೆ.

ಶನಿವಾರ ಸಂಜೆ ಪ್ರಕರಣದ ಸ್ಥಳಕ್ಕೆ ಹೋದ ಅರಣ್ಯಾಧಿಕಾರಿಗಳನ್ನು ಅಲ್ಲಿಗೆ ಬರದಂತೆ ಆರೋಪಿ ಹಾಗೂ ಇತರರು ತಡೆದಿದ್ದರು ಎನ್ನಲಾಗಿದೆ. ರವಿವಾರ ಧರ್ಮಸ್ಥಳ ಪೊಲೀಸರ ನೆರವಿನೊಂದಿಗೆ ಅರಣ್ಯಾಧಿಕಾರಿಗಳು ಧಾಳಿ ನಡೆಸಿ ಸ್ಥಳದಲ್ಲಿ ಸಾಗಾಟಕ್ಕೆ ತಯಾರಿಸಿಡಲಾಗಿದ್ದ ಅಂದಾಜು 7 ಲಕ್ಷಕ್ಕಿಂತಲೂ ಹೆಚ್ಚು ಮೌಲ್ಯದ 36 ಬೀಟೆ, 36 ಬೇಂಗ, ಹಲಸು ಮತ್ತು ಇನ್ನಿತರ ಜಾತಿಯ ಮರಗಳೂ ಸೇರಿದಂತೆ ಅಂದಾಜು 111 ಹಲಗೆಗಳನ್ನು ಅರಣ್ಯ ಇಲಾಖೆ ವಶಪಡಿಸಿಕೊಂಡಿದೆ. ಕಾರ್ಯಾಚರಣೆಯಲ್ಲಿ ಸಂಚಾರ ದಳದ ಅಧಿಕಾರಿಗಳಾದ ಬಾಲಕೃಷ್ಣ ಆಚಾರ್, ಎಸ್. ವಿನೋದ್ ಗೌಡ, ಅಶ್ವಿತ್ ಗಟ್ಟಿ, ಪ್ರಮೋದ್, ಸೀತಾರಾಮ್, ಸಂದೀಪ್ ಸಿ.ಕೆ., ಪ್ರಶಾಂತ್, ಸ್ಥಳೀಯ ಉಪ್ಪಿನಂಗಡಿ ವಲಯಾರಣ್ಯಾಧಿಕಾರಿ ಸಂಧ್ಯಾ, ಅರಣ್ಯಾಧಿಕಾರಿಗಳಾದ ಪ್ರಶಾಂತ್, ಜಯಕುಮಾರ್, ಸಿಬ್ಬಂದಿ ಭಾಗ ವಹಿಸಿದ್ದರು.

ಈ ಪ್ರಕರಣದಲ್ಲಿ ಬಂಧಿಸಲಾದ ವ್ಯಕ್ತಿ ಪಿಡಬ್ಲುಡಿ ಇಲಾಖೆಯಲ್ಲಿ ಚಾಲಕನಾಗಿ ಸರಕಾರಿ ನೌಕರನಾಗಿರು ವುದಾಗಿ ತಿಳಿದು ಬಂದಿದೆ. ಕಳೆದ ಹಲವು ಸಮಯಗಳಿಂದಲೂ ಶಿಬಾಜೆ ಗ್ರಾಮದಲ್ಲಿ ನಿರಂತರವಾಗಿ ರಕ್ಷಿತಾರಣ್ಯ ಮತ್ತು ಸರಕಾರಿ ಸ್ಥಳಗಳಲ್ಲಿ ಬೆಲೆ ಬಾಳುವ ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಉಪ್ಪಿನಂಗಡಿ ವಲಯಕ್ಕೆ ಸೇರಿದ ಅರಣ್ಯ ಪ್ರದೇಶಗಳಾದ ಶಿಬಾಜೆ, ಶಿರಾಡಿ, ಶಿಶಿಲ ಮತ್ತು ಕಳೆಂಜ ಭಾಗಗಳಲ್ಲಿ ನಿರಂತರವಾಗಿ ರಕ್ಷಿತಾರಣ್ಯದ ಒಳಗಿನಿಂದಲೇ ಮರಗಳು ರಾಜಾರೋಷವಾಗಿ ಸಾಗಾಟವಾಗುತ್ತಿದೆ.

ಆದರೂ ಉಪ್ಪಿನಂಗಡಿ ವಲಯದ ಯಾವುದೇ ಅರಣ್ಯಾಧಿಕಾರಿಗಳು ಸರಿಯಾದ ಕ್ರಮವನ್ನೇ ಕೈಗೊಳ್ಳದಿರುವ ಬಗ್ಗೆ ಬಲವಾದ ಆರೋಪಗಳು ಕಳೆದ ವಾರ ನಡೆದ ಶಿಬಾಜೆ ಗ್ರಾಮ ಸಭೆಯಲ್ಲಿ ಕೇಳಿ ಬಂದಿತ್ತು. ಇದೀಗ ಸಂಚಾರಿ ದಳದ ಸಮರ್ಪಕ ಕಾರ್ಯನಿರ್ವಹಣೆಯಿಂ ಭಾರೀ ಪ್ರಮಾಣದ ಅಕ್ರಮ ಮರ ಸಾಗಾಟ ಪ್ರಕರಣ ಬೆಳಕಿಗೆ ಬಂದಂತಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X