ದರ್ಶನ್ ಮನೆಯನ್ನು ವಶಪಡಿಸಿಕೊಂಡ ಸರಕಾರದ ಕ್ರಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

ಬೆಂಗಳೂರು, ಅ.25: ನಟ ದರ್ಶನ್ ಅವರ ಮನೆಯನ್ನು ವಶಕ್ಕೆ ಪಡೆದ ಸರಕಾರದ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ಇಂದು ತಾತ್ಕಾಲಿಕ ತಡೆಯಾಜ್ಞೆ ನೀಡಿದೆ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಬಡಾವಣೆಯಲ್ಲಿರುವ ದರ್ಶನ್ ಅವರ ಮನೆ ’ಐಡಿಯಲ್ ಹೋಮ್’ ಸೇರಿದಂತೆ ಒಟ್ಟು ಎಂಟು ಮನೆಗಳನ್ನು ಜಿಲ್ಲಾಡಳಿತ ಶನಿವಾರ ವಶಪಡಿಸಿಕೊಂಡಿತ್ತು.ದರ್ಶನ್ ಮನೆಯ ಗೋಡೆಯ ಮೇಲೆ 'ಇದು ಕರ್ನಾಟಕ ಸರಕಾರದ ಸ್ವತ್ತು' ಎಂದು ಜಿಲ್ಲಾಡಳಿತ ಬರೆದಿತ್ತು
ಸರಕಾರ ಬೆಂಗಳೂರು ನಗರ ಜಿಲ್ಲಾಡಳಿತದ ವಿರುದ್ಧ ನಟ ದರ್ಶನ್ ಅವರು ಸೋಮವಾರ ಹೈಕೋರ್ಟ್ ಮೆಟ್ಟಿಲೇರಿದ್ದರು.
ಮರು ಸರ್ವೆ ವೇಳೆ ದರ್ಶನ್ ಅವರು ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಮನೆ ಕಟ್ಟಿರುವುದು ಪತ್ತೆಯಾಗಿತ್ತು. ಜಿಲ್ಲಾಡಳಿತ ಐಡಿಯಲ್ ಹೋಮ್’ ನ್ನು ವಶಪಡಿಸಿಕೊಂಡ ನಿಲುವಿನ ಬಗ್ಗೆ ದರ್ಶನ್ ರಾಜ್ಹೋಯ ಹೈಕೋರ್ಟ್ ಮೆಟ್ಟಿಲೇರಿದ್ದರು. ಅವರ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.
ಈ ಮೊದಲು ಐಡಿಯಲ್ ಹೋಮ್ ಪಕ್ಕದಲ್ಲಿ ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಕಟ್ಟಿರುವ ಮಾಜಿ ಸಚಿವ ಶ್ಯಾಮನೂರು ಶಿವಶಂಕರಪ್ಪ ಅವರ ಮಾಲಕತ್ವದ ಎಸ್ ಎಸ್ ಆಸ್ಪತ್ರೆಯನ್ನು ವಶಕ್ಕೆ ಪಡೆಯುವ ಜಿಲ್ಲಾಡಳಿತದ ಕ್ರಮಕ್ಕೆ ರಾಜ್ಯ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿತ್ತು.
ಆಸ್ಪತ್ರೆಯ ಸಂಪೂರ್ಣ ದಾಖಲೆಗಳನ್ನು ಸಕ್ಷಮ ಪ್ರಾಧಿಕಾರದ ಮುಂದೆ ಸಲ್ಲಿಸುವಂತೆ ಇದೇ ವೇಳೆ ಹೈಕೋರ್ಟ್ ಸೂಚಿಸಿದೆ ದಾಖಲೆ ಪರಿಶೀಲಿಸಿದ ಬಳಿಕ ಪ್ರಾಧಿಕಾರ ನೀಡುವ ವರದಿಯನ್ನಾಧರಿಸಿ ಮುಂದಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿತ್ತು.
ಜಿಲ್ಲಾಡಳಿತದ ಕ್ರಮವನ್ನು ಪ್ರಶ್ನಿಸಿ ಆಸ್ಪತ್ರೆಯ ಮಾಲಕರು ರಾಜ್ಯ ಹೈಕೋರ್ಟ್ನ ಮೊರೆ ಹೋಗಿದ್ದರು.





