Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಠಾತ್ ‘ಟಾಟಾ’ ಹೇಳಿದ ಹಿಂದಿನ ಕಾರಣಗಳೇನು...

ಹಠಾತ್ ‘ಟಾಟಾ’ ಹೇಳಿದ ಹಿಂದಿನ ಕಾರಣಗಳೇನು ಗೊತ್ತೇ ?

ಇದು ಪರಿಪೂರ್ಣವಾಗಿ ಪ್ಲ್ಯಾನ್ ಮಾಡಿದ ಕ್ಷಿಪ್ರ ಕ್ರಾಂತಿ

ವಾರ್ತಾಭಾರತಿವಾರ್ತಾಭಾರತಿ25 Oct 2016 2:11 PM IST
share
ಹಠಾತ್ ‘ಟಾಟಾ’ ಹೇಳಿದ ಹಿಂದಿನ ಕಾರಣಗಳೇನು ಗೊತ್ತೇ ?

ಸೈರಸ್ ಪದಚ್ಯುತಿ ಹಿಂದಿನ ’ಮಿಸ್ಟರಿ’ ಬಯಲು

ಮುಂಬೈ, ಅ.25: ಸೈರಸ್ ಮಿಸ್ತ್ರಿ ಅವರನ್ನು ಟಾಟಾ ಸನ್ಸ್ ಕಂಪೆನಿಯ ಅಧ್ಯಕ್ಷ ಹುದ್ದೆಯಿಂದ ಪದಚ್ಯುತಗೊಳಿಸಿದ್ದು ಇಡೀ ಉದ್ಯಮರಂಗಕ್ಕೆ ಆಶ್ಚರ್ಯ ಹುಟ್ಟಿಸಿದ್ದರೂ ಈ ಪದಚ್ಯುತಿಗೆ ಕ್ಷಣಗಣನೆ ಕೆಲ ತಿಂಗಳ ಹಿಂದಿನಿಂದಲೇ ಆರಂಭವಾಗಿತ್ತು.

ಆಗಸ್ಟ್ 26 ರಂದು ಟಾಟಾ ಸನ್ಸ್ ಆಡಳಿತ ಮಂಡಳಿ ವಿಸ್ತರಣೆಯಾದಾಗ ಪಿರಾಮಲ್ ಎಂಟರ್ ಪ್ರೈಸಸ್ ಅಧ್ಯಕ್ಷ ಅಜಯ್ ಪಿರಾಮಲ್ ಹಾಗೂ ಟಿವಿಎಸ್ ಮೋಟಾರ್ಸ್ ಅಧ್ಯಕ್ಷ ವೇಣು ಶ್ರೀನಿವಾಸನ್ ಅವರನ್ನು ಸೇರಿಸಲಾಗಿತ್ತು. ಆದರೆ ಆಶ್ಚರ್ಯವೆಂಬಂತೆ ಈ ವಿಚಾರದಲ್ಲಿ ಸೈರಸ್ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡಿರಲಿಲ್ಲ. ಅಂದ ಹಾಗೆ ಈ ಕ್ರಮ ಮಿಸ್ತ್ರಿ ನೇತೃತ್ವದ ಟಾಟಾ ಸನ್ಸ್ ಆಡಳಿತ ಮಂಡಳಿಯ ಮೇಲೆ ಟಾಟಾ ಟ್ರಸ್ಟ್ನ ಹಿಡಿತ ಬಿಗಿಗೊಳಿಸುವ ನಿಟ್ಟಿನಲ್ಲಿ ನಡೆದಿತ್ತು.

ಇದಕ್ಕೂ ಎರಡು ತಿಂಗಳ ಹಿಂದೆ ಟಾಟಾ ಪವರ್ ಕಂಪೆನಿಯು 1.4 ಬಿಲಿಯನ್ ಡಾಲರ್ ಮೌಲ್ಯದ ವೆಲ್ ಸ್ಪನ್ ಸೋಲಾರ್ ಫಾರ್ಮ್ಸ್‌ ಸ್ವಾಧೀನಪಡಿಸುವ ಪ್ರಕ್ರಿಯೆಗೆ ರತನ್ ಟಾಟಾ ಅಥವಾ ಇತರ ಪ್ರಮುಖ ಶೇರುದಾರರ ಅಭಿಪ್ರಾಯ ಕೇಳದೆಯೇ ಮಿಸ್ತ್ರಿ ಒಪ್ಪಿಗೆ ಸೂಚಿಸಿದ್ದರು.

ಎರಡು ವರ್ಷಗಳ ಹಿಂದೆ ಶಪೂರ್ಜಿ ಪಲ್ಲೊಂಜಿ ಜನ್ಮ ಶತಮಾನೋತ್ಸವ ಆಚರಣೆ ಸಂದರ್ಭದಲ್ಲಿ ದೇಶದ ಉದ್ಯಮ ಹಾಗೂ ಕೈಗಾರಿಕಾ ರಂಗದ ದಿಗ್ಗಜರೆಲ್ಲರು ಭಾಗವಹಿಸಿದ್ದರೂ ರತನ್ ಟಾಟಾ ಅವರು ಅಲ್ಲಿರಲಿಲ್ಲ. ಅವರು ಥಾಯ್ ಪೆವಿಲಿಯನ್ ನಲ್ಲಿ ಸೈರಸ್ ಅವರ ಸಂಬಂಧಿಯೊಬ್ಬರೊಂದಿಗೆ ಊಟ ಮಾಡುತ್ತಿದ್ದರು. ಟಾಟಾ ಅವರು ಈ ಕಾರ್ಯಕ್ರಮದಲ್ಲಿ ಅಗತ್ಯ ಭಾಗವಹಿಸಬೇಕಿದ್ದರೂ ಅವರ ಅನುಪಸ್ಥಿತಿ ಹಲವರಿಗೆ ಸರಿ ಕಂಡಿರಲಿಲ್ಲ.

ಇಂಡಿಯನ್ ಹೊಟೇಲ್ ಕೋ ಇದರ ವಿದೇಶಿ ಆಸ್ತಿಗಳನ್ನುಮಾರಾಟ ಮಾಡುವ ಹಾಗೂ ಇಂಗ್ಲೆಂಡಿನಲ್ಲಿ ಸಂಸ್ಥೆಯ ಸ್ಟೀಲ್ ಉದ್ಯಮವನ್ನು ಮುಚ್ಚುವ ಮಿಸ್ತ್ರಿ ನಿರ್ಧಾರ ಟಾಟಾ ಟ್ರಸ್ಟ್ ಗಳಿಗೆ ಸರಿ ಕಂಡಿರಲಿಲ್ಲ.

ಅಂತೆಯೇ ಎನ್‌ಟಿಟಿ ಡೊಕೊಮೊ ವಿರುದ್ಧ ನಡೆದ ದೊಡ್ಡ ಮಟ್ಟದ ಕಾನೂನು ಹೋರಾಟವೂ ಸಂಸ್ಥೆಯ ಹಿರಿಯ ತಲೆಗಳಿಗೆ ಅಸಮಾಧಾನ ತಂದಿತ್ತು. 2014 ರಲ್ಲಿ ರತನ್ ಟಾಟಾ ಜತೆ ಹೆಚ್ಚು ಆತ್ಮೀಯವಾಗಿದ್ದ ಇಂಡಿಯನ್ ಹೊಟೇಲ್ಸ್ ಇದರ ಆಡಳಿತ ನಿರ್ದೇಶಕ ರೇಮಂಡ್ ಬಿಕ್ಸನ್ ಅವರನ್ನು ಮಿಸ್ತ್ರಿ ಪದಚ್ಯುತಗೊಳಿಸಿದಾಗ ಟಾಟಾ ಮತ್ತು ಮಿಸ್ತ್ರಿ ಸಂಬಂಧ ಹಿಂದಿನಂತಿರಲಿಲ್ಲವೆಂಬ ಅರಿವು ಎಲ್ಲರಿಗೂ ಆಗಿತ್ತು.

ಮಿಸ್ತ್ರಿ ಕಂಪೆನಿಗೆ ಮಾಡುತ್ತಿದ್ದ ನೇಮಕಾತಿಗಳು ಕೂಡ ಹಲವರಿಗೆ ಅಸಮಾಧಾನ ತಂದಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X