Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಕ್ಷದಿಂದ ನಮ್ಮನ್ನು ಉಚ್ಛಾಟಿಸಲು ತಡವೇಕೆ...

ಪಕ್ಷದಿಂದ ನಮ್ಮನ್ನು ಉಚ್ಛಾಟಿಸಲು ತಡವೇಕೆ ? ದೇವೇಗೌಡರಿಗೆ ಝಮೀರ್‌ ಅಹ್ಮದ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ25 Oct 2016 7:21 PM IST
share
ಪಕ್ಷದಿಂದ ನಮ್ಮನ್ನು ಉಚ್ಛಾಟಿಸಲು ತಡವೇಕೆ ? ದೇವೇಗೌಡರಿಗೆ ಝಮೀರ್‌ ಅಹ್ಮದ್ ಪ್ರಶ್ನೆ

ಬೆಂಗಳೂರು, ಅ.25: ಜೆಡಿಎಸ್ ಪಕ್ಷಕ್ಕೆ ನಮ್ಮ ಅಗತ್ಯವಿಲ್ಲದಿದ್ದರೆ, ನಮ್ಮನ್ನು ಉಚ್ಛಾಟನೆ ಮಾಡಲು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಯಾಕೆ ತಡ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಬಂಡಾಯ ಶಾಸಕ ಬಿ.ಝೆಡ್.ಝಮೀರ್‌ಅಹ್ಮದ್‌ಖಾನ್ ಪ್ರಶ್ನಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ನಮ್ಮನ್ನು ಉಳಿಸಿಕೊಳ್ಳುವಂತೆ ಕುಮಾರಸ್ವಾಮಿ ಎದುರು ಅರ್ಜಿ ಹಾಕಿಲ್ಲ. ನಮ್ಮನ್ನು ನಂಬಿಕೊಂಡಿರುವ ಲಕ್ಷಾಂತರ ಜನ ಕಾರ್ಯಕರ್ತರಿಗಾಗಿ ಈ ಕ್ಷಣದವರೆಗೂ ಪಕ್ಷದಲ್ಲಿದ್ದೇವೆ ಎಂದರು.

ಜೆಡಿಎಸ್ ಪಕ್ಷವು ದೇವೇಗೌಡ ಹಾಗೂ ಕುಮಾರಸ್ವಾಮಿ ಅವರ ನಿಯಂತ್ರಣದಲ್ಲೆ ಇದೆ. ನಮ್ಮನ್ನು ಈಗಾಗಲೆ ಅಮಾನತ್ತು ಮಾಡಲಾಗಿದೆ. ಪಕ್ಷಕ್ಕೆ ನಮ್ಮ ಅಗತ್ಯವಿಲ್ಲದಿದ್ದರೆ ನಮ್ಮನ್ನು ಹೊರ ಹಾಕಲು ಯಾಕೆ ಇಷ್ಟೊಂದು ಸಮಯವನ್ನು ತೆಗೆದುಕೊಳ್ಳುತ್ತಿದ್ದಾರೆ. ಕುಮಾರಸ್ವಾಮಿ ಅವರ ರೀತಿಯಲ್ಲಿ ರಾಜಕಾರಣವನ್ನು ನಂಬಿಕೊಂಡೆ ನಾನು ಜೀವನ ನಿರ್ವಹಣೆ ಮಾಡಬೇಕಾದ ಅಗತ್ಯವಿಲ್ಲ ಎಂದು ಅವರು ಹೇಳಿದರು.

ಕುಮಾರಸ್ವಾಮಿಗೆ ಹೇಳಿಯೆ ನಾವು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತ ಚಲಾಯಿಸಿದ್ದೇವೆ. ಮಾಡಬಾರದ ತಪ್ಪನ್ನು ನಾವೇನು ಮಾಡಿಲ್ಲ. ಯಾವುದಾದರೂ ದೇವಸ್ಥಾನಕ್ಕೆ ಬಂದು ಪ್ರಮಾಣ ಮಾಡಬೇಕಾದರೂ ನಾವು ಸಿದ್ಧರಿದ್ದೇವೆ ಎಂದು ಝಮೀರ್‌ಅಹ್ಮದ್ ತಿಳಿಸಿದರು.

ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಬಿ.ಎಂ. ಫಾರೂಕ್ ಕಾಂಗ್ರೆಸ್ ಪಕ್ಷದ ಹಿನ್ನೆಲೆಯಿಂದ ಬಂದವರು. ಅವರ ಬದಲು ಜೆಡಿಎಸ್ ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ನೀಡಿದ್ದರೆ ನಾವು ಖಂಡಿತವಾಗಿಯೂ ಬೆಂಬಲ ನೀಡುತ್ತಿದ್ದೇವು ಎಂದು ಝಮೀರ್‌ಅಹ್ಮದ್ ಹೇಳಿದರು.

ವಿಧಾನಸೌಧದ ಆವರಣದಲ್ಲಿ ವಕೀಲರೊಬ್ಬರಿಂದ ವಶಪಡಿಸಿಕೊಂಡಿದ್ದ 1.97 ಕೋಟಿ ರೂ.ನಗದು ಆಸ್ತಿ ಖರೀದಿಗೆ ತೆಗೆದುಕೊಂಡು ಹೋಗುತ್ತಿದ್ದದ್ದು ಎಂದು ತನಿಖೆ ನಡೆಸಿದಂತಹ ಪೊಲೀಸರೆ ಸ್ಪಷ್ಟೀಕರಣ ನೀಡಿದ್ದಾರೆ. ಆದರೂ, ಈ ಹಣದ ಮೂಲದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಮಾಹಿತಿಯಿದೆ ಎಂದು ಹೇಳುವ ಅಗತ್ಯವೇನಿತ್ತು ಎಂದು ಅವರು ಪ್ರಶ್ನಿಸಿದರು.

ಜಬಾಬ್ದಾರಿಯುತ ಸ್ಥಾನದಲ್ಲಿರುವ ಮಾಜಿ ಮುಖ್ಯಮಂತ್ರಿಯೊಬ್ಬರು, ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ವಿರುದ್ಧ ಹೇಳಿಕೆಗಳನ್ನು ನೀಡುವಾಗ ಎಚ್ಚರಿಕೆಯಿಂದ ಇರಬೇಕು. ಸುಮ್ಮನೆ ‘ಹಿಟ್ ಅಂಡ್ ರನ್’ ಮಾಡುವುದು ಬೇಡ ಎಂದು ಝಮೀರ್ ಅಹ್ಮದ್ ಸಲಹೆ ನೀಡಿದರು.

ದಲಿತ ಪರ ಕಾಳಜಿಗೆ ವ್ಯಂಗ್ಯ: ಮಾಜಿ ಸಚಿವ ವಿ.ಶ್ರೀನಿವಾಸ್‌ಪ್ರಸಾದ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಕುಮಾರಸ್ವಾಮಿಗೆ ದಲಿತರ ಮೇಲೆ ಅಪಾರವಾದ ಕಾಳಜಿ ಹುಟ್ಟಿದೆ. ಹಾಗಿದ್ದಲ್ಲಿ, ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನು ದಲಿತರಿಗೆ ನೀಡಲಿ, ಪಕ್ಷ ಅಧಿಕಾರಕ್ಕೆ ಬಂದರೆ ದಲಿತರನ್ನು ಮುಖ್ಯಮಂತ್ರಿ ಮಾಡುತ್ತೇವೆ ಅಂತ ಘೋಷಣೆ ಮಾಡಲಿ ಎಂದು ಅವರು ಸವಾಲು ಹಾಕಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X