Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭರ್ಜರಿ ಜಯ ಗಳಿಸಿದ ಭಾರತ ಸೆಮಿಫೈನಲ್‌ಗೆ

ಭರ್ಜರಿ ಜಯ ಗಳಿಸಿದ ಭಾರತ ಸೆಮಿಫೈನಲ್‌ಗೆ

ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿ

ವಾರ್ತಾಭಾರತಿವಾರ್ತಾಭಾರತಿ25 Oct 2016 8:36 PM IST
share
ಭರ್ಜರಿ ಜಯ ಗಳಿಸಿದ ಭಾರತ ಸೆಮಿಫೈನಲ್‌ಗೆ

ಹೊಸದಿಲ್ಲಿ, ಅ.25: ಆಕಾಶ್‌ದೀಪ್ ಸಿಂಗ್(9,39ನೆ ನಿಮಿಷ), ಅಫ್ಫಾನ್ ಯೂಸುಫ್(19, 40 ನಿ.) ಹಾಗೂ ಜಸ್ಜೀತ್ ಸಿಂಗ್ (22,51ನೆ ನಿ.)ಬಾರಿಸಿದ ತಲಾ ಎರಡು ಗೋಲುಗಳ ನೆರವಿನಿಂದ ಭಾರತದ ಹಾಕಿ ತಂಡ ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಚೀನಾ ತಂಡವನ್ನು 9-0 ಗೋಲುಗಳ ಅಂತರದಿಂದ ಹೀನಾಯವಾಗಿ ಸೋಲಿಸಿದೆ.

ಟೂರ್ನಿಯಲ್ಲಿ ಮೂರನೆ ಗೆಲುವು ಸಾಧಿಸಿರುವ ಭಾರತ ಸೆಮಿ ಫೈನಲ್‌ಗೆ ಸ್ಥಾನ ಗಿಟ್ಟಿಸಿಕೊಂಡಿದೆ. ಬುಧವಾರ ನಡೆಯಲಿರುವ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಆತಿಥೇಯ ಮಲೇಷ್ಯಾವನ್ನು ಎದುರಿಸಲಿದೆ. ಮಲೇಷ್ಯಾ ಸತತ 3 ಪಂದ್ಯಗಳಲ್ಲಿ ಜಯ ಸಾಧಿಸಿ ಒಟ್ಟು 9 ಅಂಕ ಗಳಿಸಿದೆ. ಎರಡೂ ತಂಡಗಳು ರೌಂಡ್ ರಾಬಿನ್ ಲೀಗ್‌ನ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆಯಲು ಪೈಪೋಟಿ ನಡೆಸುತ್ತಿವೆ.

ಮಂಗಳವಾರ ಇಲ್ಲಿ ನಡೆದ ರೌಂಡ್ ರಾಬಿನ್ ಪಂದ್ಯದಲ್ಲಿ ಭಾರತ ತಂಡ ಗೋಲುಗಳ ಸುರಿಮಳೆಗರೆಯಿತು. 10ನೆ ಗೋಲು ಬಾರಿಸಿ ಜಪಾನ್ ವಿರುದ್ಧ ಇದೇ ಟೂರ್ನಿಯಲ್ಲಿ ದಾಖಲಿಸಿದ್ದ ಸಾಧನೆ ಸರಿಗಟ್ಟಲು ವಿಫಲವಾಯಿತು. 9ನೆ ನಿಮಿಷದಲ್ಲಿ ಗೋಲು ಬಾರಿಸಿದ ಆಕಾಶ್‌ದೀಪ್ ಸಿಂಗ್ ಭಾರತದ ಗೋಲು ಖಾತೆ ತೆರೆದರು. 19ನೆ ನಿಮಿಷದಲ್ಲಿ ಅಫ್ಘಾನ್ ಯೂಸುಫ್ ಭಾರತದ ಮುನ್ನಡೆಯನ್ನು 2-0ಗೆ ಏರಿಸಿದರು. 22ನೆ ನಿಮಿಷದಲ್ಲಿ ಜಸ್ಜಿತ್ ಸಿಂಗ್ ಗೋಲು ಬಾರಿಸಿ ತಂಡದ ಮುನ್ನಡೆಯನ್ನು 3-0ಗೆ ಏರಿಸಿದರು. 25ನೆ ನಿಮಿಷದಲ್ಲಿ ಗೋಲು ಬಾರಿಸಿದ ರೂಪಿಂದರ್ ಪಾಲ್ ಸಿಂಗ್ ಭಾರತ ಮೊದಲಾರ್ಧದಲ್ಲಿ 4-0 ಮುನ್ನಡೆ ಸಾಧಿಸಲು ನೆರವಾದರು.

ದ್ವಿತೀಯಾರ್ಧದಲ್ಲಿ ಕನ್ನಡಿಗ ನಿಕಿನ್ ತಿಮ್ಮಯ್ಯ(34ನೆ ನಿಮಿಷ) ಹಾಗೂ ಯುವ ಆಟಗಾರ ಲಲಿತ್ ಉಪಾಧ್ಯಾಯ(37ನೆ ನಿ.) ತಲಾ ಒಂದು ಗೋಲು ಬಾರಿಸಿ ಭಾರತದ ಮುನ್ನಡೆಯನ್ನು 6-0ಗೇರಿಸಿದರು.

39ನೆ ನಿಮಿಷದಲ್ಲಿ ಆಕಾಶ್‌ದೀಪ್ ಸಿಂಗ್ 2ನೆ ಗೋಲು ಬಾರಿಸಿ ಭಾರತದ ಮುನ್ನಡೆಯನ್ನು ಹೆಚ್ಚಿಸಿದರು. 40ನೆ ನಿಮಿಷದಲ್ಲಿ ಯೂಸುಫ್ ಬಾರಿಸಿದ ಗೋಲಿನ ನೆರವಿನಿಂದ ಭಾರತ 8-0 ಮುನ್ನಡೆ ಪಡೆಯಿತು. ಯೂಸುಫ್ ಪಂದ್ಯದಲ್ಲಿ ಬಾರಿಸಿದ ಎರಡನೆ ಗೋಲು ಇದಾಗಿತ್ತು.

51ನೆ ನಿಮಿಷದಲ್ಲಿ ಜಸ್ಜಿತ್ ಸಿಂಗ್ ಮತ್ತೊಂದು ಗೋಲು ಬಾರಿಸಿ ಭಾರತಕ್ಕೆ 9-0 ಅಂತರದ ಭರ್ಜರಿ ಗೆಲುವು ತಂದುಕೊಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X