Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೊಲೀಸ್ ಇಲಾಖೆಯ ಸಲಹೆ ಪಡೆಯಿರಿ: ಕಮಿಷನರ್

ಪೊಲೀಸ್ ಇಲಾಖೆಯ ಸಲಹೆ ಪಡೆಯಿರಿ: ಕಮಿಷನರ್

ವಾರ್ತಾಭಾರತಿವಾರ್ತಾಭಾರತಿ25 Oct 2016 9:28 PM IST
share
ಪೊಲೀಸ್ ಇಲಾಖೆಯ ಸಲಹೆ ಪಡೆಯಿರಿ: ಕಮಿಷನರ್

ಮಂಗಳೂರು, ಅ. 25: ನಗರದಲ್ಲಿ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳುವಾಗ ಪೊಲೀಸ್ ಇಲಾಖೆಯ ಸಲಹೆಗಳನ್ನು ಪಡೆದುಕೊಳ್ಳುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಚಂದ್ರಶೇಖರ್ ಹೇಳಿದ್ದಾರೆ.

ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ವತಿಯಿಂದ ಸಂಚಾರಿ ನಿಯಮ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಮಂಗಳವಾರ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಸ್ತೆ, ಚರಂಡಿ ಹಾಗೂ ಇತರ ಯಾವುದೇ ಕಾಮಗಾರಿ ನಡೆಸುವಾಗ ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿದರೆ ಅಭಿವೃದ್ಧಿಗೆ ಪೂರಕವಾಗಬಹುದು. ಈ ನಿಟ್ಟಿನಲ್ಲಿ ಪಾಲಿಕೆ ಹಾಗೂ ಮೂಡಾದೊಂದಿಗೂ ಮಾತುಕತೆ ನಡೆಸಲಾಗಿತ್ತು. ಪೊಲೀಸ್ ಇಲಾಖೆಯ ನಡೆಸಿದ ಫೋನ್‌ಇನ್ ಕಾರ್ಯಕ್ರಮದಲ್ಲೂ ಶೇ. 90 ರಷ್ಟು ದೂರುಗಳು ಸಂಚಾರ ವಿಷಯಕ್ಕೆ ಸಂಬಂಧಿಸಿ ಬಂದಿದ್ದವು. ನಗರದ ಕೆಲವೆಡೆ ಅಗಲವಿಲ್ಲದ ರಸ್ತೆಗಳಲ್ಲೂ ಎರಡೂ ಕಡೆಗಳಿಂದ ವಾಹನಗಳು ಚಲಿಸಬೇಕಾದ ಪರಿಸ್ಥಿತಿ ಇದೆ. ಪೊಲೀಸರು ಈ ಸಂದರ್ಭಗಳಲ್ಲಿ ಸಂಚಾರ ನಿಭಾಯಿಸುತ್ತಾರಾದರೂ ಭವಿಷ್ಯದಲ್ಲಿ ಇಂತಹ ಸಮಸ್ಯೆಗಳಿಂದ ತೊಂದರೆ ತಪ್ಪಿದ್ದಲ್ಲ ಎಂದರು.

ನಮ್ಮಲ್ಲಿ ಸರಿಯಾದ ರೀತಿಯ ನಗರ ಯೋಜನೆ ಅಗತ್ಯವಿದೆ. ಇದರೊಂದಿಗೆ ಜನರ ಮನಸ್ಥಿತಿಯೂ ಬದಲಾಗಬೇಕಿದೆ. ಸಂಚಾರ ನಿಯಮಗಳನ್ನು ವ್ಯವಸ್ಥಿತ ರೂಪದಲ್ಲಿ ಪಾಲಿಸಬೇಕು. ಯಾವುದೇ ಬಲವಂತವಾದ ಅನುಷ್ಠಾನದ ಮೂಲಕ ನಿಯಮಗಳನ್ನು ಪಾಲಿಸುವಂತೆ ಮಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಜನರು ಕಾನೂನಿಗೆ ಹೆದರಬೇಕೇ ಹೊರತು ಪೊಲೀಸರಿಗೆ ಹೆದರಬೇಕಾಗಿಲ್ಲ. ಪೊಲೀಸರೊಂದಿಗೆ ಉತ್ತಮ ಸಂಪರ್ಕ ಹಾಗೂ ಸಹಕಾರದಿಂದ ಅಭಿವೃದ್ಧಿ ಸಾಧ್ಯ. ಮಂಗಳೂರು ಸಿಟಿ ಪೊಲೀಸ್ ಆ್ಯಪ್ ಹೊಂದಿದ್ದು, ಟ್ವಿಟ್ಟರ್ ಖಾತೆಯನ್ನೂ ತೆರೆಯಲಾಗಿದೆ. ಯಾವುದೇ ನ್ಯಾಯ ಸಮ್ಮತವಲ್ಲದ, ಕಾನೂನು ಬಾಹಿರ ವಿಷಯಗಳ ವಿರುದ್ಧ ಧ್ವನಿ ಎತ್ತಿ, ನ್ಯಾಯಪರವಾಗಿರಿ ಎಂದರು.

ಕಾರ್ಯಕ್ರಮದಲ್ಲಿ ಕೆಸಿಸಿಐ ಅಧ್ಯಕ್ಷ ಜೀವನ್ ಸಲ್ದಾನ, ಉಪಾಧ್ಯಕ್ಷೆ ವತಿಕಾ ಪೈ, ಕಾರ್ಯದರ್ಶಿಗಳಾದ ಪ್ರವೀಣ ಕುಮಾರ್ ಕಲ್ಬಾವಿ, ಪಿ.ಬಿ. ಸಅಬ್ದುಲ್ ಹಮೀದ್, ಖಜಾಂಚಿ ಗಣೇಶ್ ಭಟ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X