Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭರವಸೆಯಂತೆ ಪರಿಹಾರ ನೀಡದ ಐಆರ್‌ಬಿ...

ಭರವಸೆಯಂತೆ ಪರಿಹಾರ ನೀಡದ ಐಆರ್‌ಬಿ ಕಂಪೆನಿ

ರಾ. ಹೆ. ಚತುಷ್ಪಥ ಕಾಮಗಾರಿ ವೇಳೆ ಅವಘಡ

ವಾರ್ತಾಭಾರತಿವಾರ್ತಾಭಾರತಿ25 Oct 2016 10:16 PM IST
share

ಕಾರವಾರ, ಅ.25: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯನ್ನು ವಹಿಸಿಕೊಂಡಿರುವ ಐಆರ್‌ಬಿ ಕಂಪೆನಿಯ ನಿರ್ಲಕ್ಷ್ಯದಿಂದ ಕಳೆದ ಜುಲೈ 7ರಂದು ನಡೆದ ಅವಘಡದಿಂದ ಗಾಯಗೊಂಡಿದ್ದ ದಂಪತಿ ಈಗ ಪರಿಹಾರ ಕ್ಕಾಗಿ ಅಲೆಯುವಂತಹ ಸ್ಥಿತಿ ನಿರ್ಮಾಣವಾಗಿದೆ. ಕಳೆದ ಜುಲೈ ತಿಂಗಳಿನಲ್ಲಿ ದಾಂಡೇಲಿಯಿಂದ ಕಾರವಾರಕ್ಕೆ ಆಗಮಿಸಿದ ಜಾವೇದ್ ಶೇಕ್ ಹಾಗೂ ರುಕ್ಸಾರ್ ಶೇಕ್ ಅವರು, ಮರಳಿ ತಮ್ಮ ವಾಹನದ ಮೂಲಕ ದಾಂಡೇಲಿಗೆ ಮರಳುತ್ತಿದ್ದಾಗಿ ಸದಾಶಿವಗಡದ ಗುಡ್ಡದಿಂದ ಕಲ್ಲು ಉರುಳಿ ಬಿದ್ದಿದೆ. ಇದರ ಪರಿಣಾಮ ಜಾವೇದ್ ಅವರು ಎಡಗೈ ಹಾಗೂ ರುಕ್ಸಾರ್ ಅವರ ಬಲಗೈ ಮುರಿದಿತ್ತು. ಬಳಿಕ ಜಿಲ್ಲಾಧಿಕಾರಿ ಆದೇಶದಂತೆ ಐಆರ್‌ಬಿ ಕಂಪೆನಿ ಪರಿಹಾರ ನೀಡಬೇಕು ಎಂದು ಆದೇಶ ನೀಡಿದ್ದರಿಂದ ಚಿಕಿತ್ಸೆಗಾಗಿ 60 ಸಾವಿರ ರೂ. ಪಡೆದುಕೊಂಡಿದ್ದರು ಎನ್ನಲಾಗಿದೆ.

ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಕಂಪೆನಿಯೇ ಭರಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದರು. ಆದರೆ ಈ ದಂಪತಿಗಳ ಹೆಚ್ಚಿನ ಚಿಕಿತ್ಸೆಗಾಗಿ ಲಕ್ಷಾಂತರ ರೂ. ಬೇಕಾಗಿದ್ದರಿಂದ ಹೆಚ್ಚಿನ ಪರಿಹಾರ ನೀಡಬೇಕಾ ಗಿದ್ದ ಐಆರ್‌ಬಿ ಕಂಪೆನಿ ಹಣ ನೀಡಲು ಮೀನಮೇಷ ಎಣಿಸುತ್ತಿದೆ. ಮಂಗಳವಾರ ಕಾರವಾರಕ್ಕೆ ಆಗಮಿಸಿದ ರುಕ್ಸಾರ್ ಶೇಕ್ ಹಾಗೂ ಜಾವೇದ್ ಶೇಕ್ ಅವರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಸದಾಶಿವಗಡದ ಗುಡ್ಡದ ಕಲ್ಲು ಕಾರಿನ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡ ತಮಗೆ ಇದುವರೆಗೆ ಐಆರ್‌ಬಿ ಕಂಪೆನಿಯಿಂದ ಹೆಚ್ಚಿನ ಪರಿಹಾರ ಲಭಿಸಿಲ್ಲ ಎನ್ನುವ ಬಗ್ಗೆ ಗಮನಕ್ಕೆ ತಂದರು.

ಸದ್ಯ ಜೀವನ ನಿರ್ವಹಣೆ ಕಷ್ಟಸಾಧ್ಯವಾಗಿದ್ದು ಕಳೆದ ನಾಲ್ಕು ತಿಂಗಳಿಂದ ಕೆಲಸ ಕಾರ್ಯವಿಲ್ಲದೆ ಖಾಲಿ ಕುಳಿತುಕೊಳ್ಳುವ ಸ್ಥಿತಿ ಎದುರಾಗಿದೆ. ತಕ್ಷಣ ಸೂಕ್ತ ಪರಿಹಾರ ಕಲ್ಪಿಸದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆಯನ್ನು ಮನವಿಯಲ್ಲಿ ನೀಡಿದ್ದಾರೆ.

ಜಿಲ್ಲಾಡಳಿತ ಐಆರ್‌ಬಿ ಕಂಪೆನಿ ಪರಿಹಾರದ ಹೆಚ್ಚಿನ ಹಣ ತಕ್ಷಣ ನೀಡುವಂತೆ ಸೂಚಿಸಬೇಕು. ಇಲ್ಲದ ಪಕ್ಷದಲ್ಲಿ ಜಿಲ್ಲಾಡಳಿತವೇ ಸೂಕ್ತ ಪರಿಹಾರ ನೀಡಬೇಕು ಎಂದು ದಾಂಡೇಲಿಯ ರುಕ್ಸಾರ್ ಶೇಕ್ ಜಿಲ್ಲಾಡಳಿತಕ್ಕೆ ಸೋಮವಾರ ಮನವಿಯಲ್ಲಿ ಪ್ರಸ್ತಾಪಿಸಿದ್ದಾರೆ. ಭರವಸೆ ಮರೆತ ಕಂಪೆನಿ:

ಕಂಪೆನಿಯ ಅವೈಜ್ಞ್ಞಾನಿಕ ಕಾಮಗಾರಿಯೇ ಈ ದುರಂತಕ್ಕೆ ಕಾರಣವಾಗಿದೆ. ಆ ಸಂದರ್ಭದಲ್ಲಿ ಕಂಪೆನಿಯು ಗಾಯಗೊಂಡ ತಮಗೆ ತುರ್ತು ಚಿಕಿತ್ಸೆ ನೀಡಿ ಕೈ ತೊಳೆದುಕೊಂಡಿತು. ಆದರೆ ಹೆಚ್ಚಿನ ಪರಿಹಾರ ನೀಡುವುದಾಗಿ ನೀಡಿದ ಭರವಸೆ ಮಾತ್ರ ಹಾಗೆಯೇ ಉಳಿದುಕೊಂಡಿದೆ. ಈ ಕುರಿತು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದಂಪತಿ ಆಗ್ರಹಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X