Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕರ್ನಾಟಕದ ಬರಪೀಡಿತ ಘೋಷಣೆಗೆ ತಮಿಳುನಾಡಿನ...

ಕರ್ನಾಟಕದ ಬರಪೀಡಿತ ಘೋಷಣೆಗೆ ತಮಿಳುನಾಡಿನ ಆಕ್ಷೇಪ

ಕಾವೇರಿ ವಿವಾದ

ವಾರ್ತಾಭಾರತಿವಾರ್ತಾಭಾರತಿ25 Oct 2016 11:37 PM IST
share

ಚೆನ್ನೈ,ಅ.25: ಕಾವೇರಿ ಜಲಾನಯನ ಪ್ರದೇಶದಲ್ಲಿಯ ತನ್ನ 48 ತಾಲೂಕುಗಳ ಪೈಕಿ 42 ತಾಲೂಕುಗಳು ಬರಪೀಡಿತವಾಗಿವೆ ಎಂಬ ಕರ್ನಾಟಕ ಸರಕಾರದ ಘೋಷಣೆಯನ್ನು ತಮಿಳುನಾಡು ಮಂಗಳವಾರ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದೆ.

ಕರ್ನಾಟಕದ ಹೇಳಿಕೆಯನ್ನು ತಮಿಳುನಾಡು ಒಪ್ಪಿಕೊಳ್ಳುವುದಿಲ್ಲ. ಮುಂಗಾರು ಬೆಳೆಯ ಅವಧಿಯಲ್ಲಿ 193 ಟಿಎಂಸಿ ಅಡಿ ನೀರನ್ನು ನೀರಾವರಿಗೆ ಬಳಸಿಕೊಳ್ಳಲು ಕರ್ನಾಟಕಕ್ಕೆ ಅನುಮತಿಯಿದೆ. ಆದರೆ ಅ.13ಕ್ಕೆ ಇದ್ದಂತೆ ಅದು ಈಗಾಗಲೇ ನೀರಾವರಿಗೆ 112 ಟಿಎಂಸಿ ಅಡಿ ಮತ್ತು ಕುಡಿಯುವ ಉದ್ದೇಶಕ್ಕಾಗಿ 9 ಟಿಎಂಸಿ ಅಡಿ ನೀರನ್ನು ಬಳಸಿ ಕೊಂಡಿದೆ. ನೀರಾವರಿಗಾಗಿ ಇನ್ನೂ 36.38 ಟಿಎಂಸಿ ಅಡಿ ನೀರನ್ನು ಬಳಸಲು ಅದು ಉದ್ದೇಶಿಸಿದೆ. ಇದರೊಂದಿಗೆ ನೀರಾವರಿಗೆ ನೀರಿನ ಒಟ್ಟು ಪ್ರಮಾಣ 149 ಟಿಎಂಸಿ ಅಡಿಗಳಷ್ಟಾಗುತ್ತದೆ. ಕರ್ನಾಟಕದ ಹೇಳಿಕೆ ಸರಿಯಲ್ಲ ಎನ್ನುವುದಕ್ಕೆ ಇದು ನಿದರ್ಶನವಾಗಿದೆ ಎಂದು ತಮಿಳುನಾಡು ಸರಕಾರವು ಸರ್ವೋಚ್ಚ ನ್ಯಾಯಾಲಯದಲ್ಲಿ ಸಲ್ಲಿಸಿರುವ ತಕರಾರು ಅರ್ಜಿಯಲ್ಲಿ ಹೇಳಿದೆ.
ಉಭಯ ರಾಜ್ಯಗಳ ಕಾವೇರಿ ಕೊಳ್ಳ ಪ್ರದೇಶಗಳಲ್ಲಿಯ ವಸ್ತುಸ್ಥಿತಿಯ ಅಧ್ಯಯನಕ್ಕಾಗಿ ನೇಮಿಸಲಾಗಿದ್ದ ಉನ್ನತ ಮಟ್ಟದ ತಾಂತ್ರಿಕ ತಂಡವು ಅ.17ರಂದು ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿರುವ ತನ್ನ ವರದಿಯಲ್ಲಿ ಕರ್ನಾಟಕವು ತನ್ನ 42 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿರುವುದನ್ನು ಬೆಟ್ಟು ಮಾಡಿತ್ತು.
ತಮಿಳುನಾಡು, ಪುದುಚೇರಿ ಮತ್ತು ಕರ್ನಾಟಕಗಳಲ್ಲಿಯ ಸ್ಥಾಪಿತ ನೀರಾವರಿ ಸೌಲಭ್ಯಗಳನ್ನು ರಕ್ಷಿಸಬೇಕು ಮತ್ತು ಮತ್ತು ಕರ್ನಾಟಕದಲ್ಲಿಯ ಅಭಿವೃದ್ಧಿಗಳನ್ನು ಮೆಚ್ಚಬೇಕಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಆದರೆ ಕರ್ನಾಟಕದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕಾವೇರಿ ನ್ಯಾಯಾಧಿಕರಣದ ಅಂತಿಮ ಆದೇಶಕ್ಕೆ ಅನುಗುಣವಾಗಿ ಕೈಗೊಳ್ಳಬೇಕು ಎನ್ನುವುದನ್ನು ತಂಡವು ಎತ್ತಿ ತೋರಿಸಿಲ್ಲ. ಕರ್ನಾಟಕವು ಮಾಡಿರುವ ಉಲ್ಲಂಘನೆಗಳನ್ನು ವರದಿಯಲ್ಲಿ ಪ್ರಸ್ತಾಪಿಸಲೂ ಇಲ್ಲ ಎಂದು ಅರ್ಜಿಯು ಹೇಳಿದೆ.
 ನ್ಯಾಯಾಧಿಕರಣದ ಅಂತಿಮ ಆದೇಶದಂತೆ ಅ.13ಕ್ಕೆ ಇದ್ದಂತೆ ಕೊರತೆಯಾಗಿರುವ ನೀರನ್ನು ಬಿಡುಗಡೆ ಮಾಡುವಂತೆ ಮತ್ತು ತನ್ನ ಸಾಂಬಾ ಬೆಳೆಯನ್ನು ರಕ್ಷಿಸಲು 2017, ಜನವರಿಯವರೆಗೆ ನೀರನ್ನು ಹರಿಸುವಂತೆ ಕರ್ನಾಟಕಕ್ಕೆ ನಿರ್ದೇಶ ನೀಡುವಂತೆ ತಮಿಳುನಾಡು ಅರ್ಜಿಯಲ್ಲಿ ಕೋರಿಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X