Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಡ್ಡ ಬೆಳೆಸುವುದರ ಕುರಿತು ಸಚಿವ ಜಲೀಲ್,...

ಗಡ್ಡ ಬೆಳೆಸುವುದರ ಕುರಿತು ಸಚಿವ ಜಲೀಲ್, ಲೀಗ್ ನಡುವೆ ವಿಧಾನಸಭೆಯಲ್ಲಿ ವಾಗ್ಯುದ್ಧ

ವಾರ್ತಾಭಾರತಿವಾರ್ತಾಭಾರತಿ26 Oct 2016 12:32 PM IST
share
ಗಡ್ಡ ಬೆಳೆಸುವುದರ ಕುರಿತು ಸಚಿವ ಜಲೀಲ್, ಲೀಗ್ ನಡುವೆ ವಿಧಾನಸಭೆಯಲ್ಲಿ ವಾಗ್ಯುದ್ಧ

ತಿರುವನಂತಪುರಂ, ಅಕ್ಟೋಬರ್ 26: ಪೊಲೀಸರಿಗೆ ಗಡ್ಡ ಬೆಳೆಸಲು ಅನುಮತಿಸಬೇಕೆಂದು ಕೇರಳ ವಿಧಾನಸಭೆಯಲ್ಲಿ ಸಚಿವ ಕೆ.ಟಿ ಜಲೀಲ್ ಮತ್ತು ಮುಸ್ಲಿಮ್ ಲೀಗ್ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದೆಎಂದು ವರದಿಯಾಗಿದೆ.ಪೊಲೀಸ್ ಇಲಾಖೆಯಲ್ಲಿರುವ ಮುಸ್ಲಿಮರಿಗೆ ಗಡ್ಡ ಬೆಳೆಸಲು ಅನುಮತಿ ನೀಡಬೇಕೆಂದು ಚರ್ಚೆಯೊಂದರಲ್ಲಿ ಭಾಗವಹಿಸಿದ ಲೀಗ್ ಸದಸ್ಯ ಟಿವಿ ಇಬ್ರಾಹೀಂ ಸೂಚಿಸಿದ್ದಾರೆ. ಆಗ ಅದಕ್ಕೆ ಪ್ರತಿಕ್ರಿಯಿಸಿದ ಸಚಿವ ಜಲೀಲ್ ಗಡ್ಡ ಬೆಳೆಸುವುದು ಧರ್ಮಕ್ಕೆ ಸಂಬಂಧಿಸಿದ ವಿಷಯವಲ್ಲ ಎಂದು ಉತ್ತರಿಸಿದ್ದಾರೆ. ಗಡ್ಡ ಬೆಳೆಸುವುದು ಒಂದು ಧಾರ್ಮಿಕ ಹಕ್ಕು ಎಂಬ ರೀತಿಯಲ್ಲಿ ಇಬ್ರಾಹೀಂ ವಿಷಯ ಮುಂದಿಟ್ಟಿದ್ದಾರೆ. ಆದರೆ ಅವರೇ ಗಡ್ಡ ಬೆಳೆಸಿಲ್ಲ. ಇದು ಗಡ್ಡ ಬೆಳೆಸುವುದು ಧಾರ್ಮಿಕ ಬಾಧ್ಯತೆ ಅಲ್ಲವೆಂಬುದನ್ನು ಸೂಚಿಸುತ್ತಿದೆ. ಅದಕ್ಕೂ ಧರ್ಮಕ್ಕೂ ಯಾವುದೇ ಸಂಬಂಧವಿಲ್ಲ.

ಆದ್ದರಿಂದಲೇ ಸಿ.ಎಚ್. ಮುಹಮ್ಮದ್ ಕೋಯ ಗೃಹಸಚಿವರಾಗಿದ್ದಾಗಲೂ ಅವರು ಪೊಲೀಸರಲ್ಲಿ ಇಂತಹ ಅವಕಾಶವನ್ನು ಅನುಮತಿಸಿರಲಿಲ್ಲ. ಆದ್ದರಿಂದ ಗಡ್ಡದ ಕುರಿತು ಒಂದು ಸೂಚನೆ ಹೊರಡಿಸದಿರುವುದೇ ಉತ್ತಮವೆಂದು ಜಲೀಲ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ಲೀಗ್ ಸದಸ್ಯರು ಗದ್ದಲ ಆರಂಭಿಸಿದರು. ಜಲೀಲ್‌ರ ಹೇಳಿಕೆ ಅನಗತ್ಯವಾದುದು ಎಂದು ಮಾಜಿ ಸಚಿವ ಪಿ.ಕೆ. ಕುಂಞಾಲಿಕುಟ್ಟಿ ಹೇಳಿದ್ದಾರೆ. ಗಡ್ಡ ಧಾರ್ಮಿಕ ವಿಶ್ವಾಸದ ಭಾಗವಾಗಿದೆಎಂದು ವಿಶ್ವಾಸ ಹೊಂದಿರುವ ಬಹುದೊಡ್ಡ ಜನವಿಭಾಗ ನಾಡಲ್ಲಿದೆ. ಗಡ್ಡ ಬೆಳೆಸುವುದು ಬೆಳೆಸದಿರುವುದು ಒಬ್ಬೊಬ್ಬರ ವೈಯಕ್ತಿಕ ಇಚ್ಛೆಗೆ ಸಂಬಂಧಿಸಿದ್ದಾಗಿದೆ ಪ್ರವಾದಿವರ್ಯರ(ಸ) ಚರ್ಯೆ ಎಂಬನೆಲೆಯಲ್ಲಿ ಅವರು ಗಡ್ಡಬೆಳೆಸುವುದಕ್ಕೆ ಬಯಸುವವರಿದ್ದಾರೆ. ಇದನ್ನು ಕೇಳಿಯೂ ನಾವು ಮಾತಾಡಿಲ್ಲ ಎಂದು ನಾಳೆ ಯಾರಾದರೂ ಹೇಳಲು ಆಸ್ಪದವಾಗಬಾರದೆಂದು ನಾನು ಮಾತಾಡುತ್ತಿದ್ದೇನೆ ಎಂದ ಕುಂಞಾಲಿಕುಟ್ಟಿ, ಗಡ್ಡ ಹಲವು ರೀತಿಯಲ್ಲಿ ಇಡುವವರಿದ್ದಾರೆ. ಲೆನಿನ್‌ರ ಗಡ್ಡ ಇಡುವವರಿದ್ದಾರೆ. ಫ್ಯಾಶನ್‌ಗಾಗಿ ಗಡ್ಡ ಬೆಳೆಸುವವರಿದ್ದಾರೆ. ಸ್ಪೀಕರ್ ಕೂಡಾ ಗಡ್ಡ ಬೆಳೆಸಿದ್ದಾರೆ. ಗಡ್ಡ ಬೆಳೆಸದವರೂ ಇದ್ದಾರೆ ಎಂದು ಅಭಿಪ್ರಾಯವ್ಯಕ್ತಪಡಿಸಿದರು. ಹಾಗಿದ್ದರೆ ಗಡ್ಡ ಬೆಳೆಸಿದ್ದಕ್ಕಾಗಿ ತನಗೆ ಆ ಸುನ್ನತ್ ಸಿಗಬಹುದೇ ಎಂದು ಸ್ಪೀಕರ್ ತಮಾಶೆಯಾಗಿ ಪ್ರಶ್ನಿಸಿದರು. ನಂತರ ಗಡ್ಡದ ಕುರಿತು ಚರ್ಚೆ ಮಾಡುವುದು ಬೇಡ ಎಂದು ಸ್ಪೀಕರ್ ಸೂಚಿಸಿದ್ದಾರೆ. ಪುನಃ ಎದ್ದು ನಿಂತು ಜಲೀಲ್ ಸ್ಪಷ್ಟೀಕರಣ ನೀಡತೊಡಗಿದರು. ಅವರು ಗಡ್ಡ ಒಂದು ಕಡ್ಡಾಯ ಕರ್ಮವಲ್ಲ ಎಂದು ತಾನು ಹೇಳಿದ್ದೇನೆ ಎಂದರು. ಒಂದುವೇಳೆ ಗಡ್ಡ ಕಡ್ಡಾಯವಾಗಿದ್ದರೆ ಲೀಗ್‌ನ ಹದಿನೆಂಟು ಶಾಸಕರು ಗಡ್ಡ ಬೆಳೆಸಿಲ್ಲ ಎಂದು ಜಲೀಲ್ ಪ್ರಶ್ನಿಸಿದರು. ಇಂದಿನ ವಾತಾವರಣದಲ್ಲಿ ಪೊಲೀಸರಿಗೆ ಗಡ್ಡ ಬೆಳೆಸಲು ಅನುಮತಿ ನೀಡುವುದನ್ನುಪರಿಗಣಿಸಬೇಕಿಲ್ಲ ಎಂದು ತಾನು ಹೇಳ ಬಯಸಿದ್ದೆ ಎಂದು ಜಲೀಲ್ ಸ್ಪಷ್ಟ ಪಡಿಸಿದರು. ಇಂತಹ ಚರ್ಚೆಗೆ ಅವಕಾಶ ನೀಡಬಾರದು ಎಂದು ಪ್ರತಿಪಕ್ಷ ನಾಯಕ ರಮೇಶ್ ಚೆನ್ನಿತ್ತಲ ಹೇಳಿದರು. ಇದು ಅನಗತ್ಯವಿವಾದಕ್ಕೆ ಆಸ್ಪದ ಆಗ ಬಹುದುಎಂದು ಅವರು ಎಚ್ಚರಿಸಿದರು ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X