Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ತೂಕ ಕಳೆದುಕೊಳ್ಳಲು 6 ಅತ್ಯುತ್ತಮ...

ತೂಕ ಕಳೆದುಕೊಳ್ಳಲು 6 ಅತ್ಯುತ್ತಮ ಪಾನೀಯಗಳು

ವಾರ್ತಾಭಾರತಿವಾರ್ತಾಭಾರತಿ26 Oct 2016 2:48 PM IST
share
ತೂಕ ಕಳೆದುಕೊಳ್ಳಲು 6 ಅತ್ಯುತ್ತಮ ಪಾನೀಯಗಳು

ಪೌಷ್ಟಿಕ ತಜ್ಞರ ಪ್ರಕಾರ ನೀವು ಕಠಿಣ ಶಿಸ್ತಿನ ಆಹಾರವನ್ನು ಪಾಲಿಸದೆ ಇದ್ದರೂ ಸರಿಯಾದ ಪಾನೀಯವನ್ನು ಆರಿಸುವುದು ನಿಮಗೆ ತೂಕ ಇಳಿಸಲು ನೆರವಾಗಲಿದೆ. ಇಲ್ಲಿ ಕೆಲವು ಆರೋಗ್ಯಕರ ಆಯ್ಕೆಗಳಿವೆ.

ನೀರು

ಇದು ನಿಮಗೆ ಅತ್ಯುತ್ತಮ ಪಾನೀಯ. ಹೆಚ್ಚು ನೀರು ಕುಡಿಯುವುದು ನಿಮಗೆ ಹೆಚ್ಚು ತೂಕ ಇಳಿಸಲು ನೆರವಾಗಲಿದೆ. ನೀರಿಗೆ ಸ್ವಲ್ಪ ನಿಂಬೆ ಬೆರೆಸಿದರೆ ಇನ್ನೂ ಆರೋಗ್ಯಕರ. ವ್ಯಾಯಾಮಕ್ಕೆ ಮೊದಲು ನಿಂಬೆರಸ ಕುಡಿದಲ್ಲಿ ಕೊಬ್ಬನ್ನು ಚೆನ್ನಾಗಿ ಇಳಿಸುತ್ತದೆ.

ತರಕಾರಿ ಸೂಪ್

ಪೂರ್ಣ ಪೌಷ್ಟಿಕಾಂಶವಾಗಿರುವ ಇದು ಚಯಾಪಚಯವನ್ನು ಉದ್ದೀಪನಗೊಳಿಸುತ್ತದೆ. ಡಿನ್ನರ್‌ಗೆ ಮೊದಲು ತರಕಾರಿ ಸೂಪ್ ಕುಡಿಯುವುದರಿಂದ ಕೆಲವೇ ಕ್ಯಾಲರಿಗಳು ಕರಗುತ್ತವೆ.

ಗ್ರೀನ್ ಟೀ

ಗ್ರೀನ್ ಟೀ ಕಚ್ಛಾವಸ್ತುಗಳು ತೂಕ ಇಳಿಸಲು ಉತ್ತಮ. ಇದು ದೇಹದಲ್ಲಿ ಗ್ಲುಕೋಸ್ ಅಂಶವನ್ನು ನಿಯಂತ್ರಿಸಲು ನೆರವಾಗುತ್ತದೆ. ನಿತ್ಯವೂ ಎರಡು ಕಪ್ ಗ್ರೀನ್ ಟೀ ಕುಡಿದರೆ ನಿಮಗೆ ಹೆಚ್ಚು ಲಾಭವಾಗಲಿದೆ. ಗ್ರೀನ್ ಟೀ ದೇಹವನ್ನು ವಿವಿಧ ರೋಗಗಳಿಂದ ರಕ್ಷಿಸುತ್ತದೆ. ಹಾಗೆ ನಿಮ್ಮ ನಿರೋಧಕ ಶಕ್ತಿಯನ್ನೂ ಸುಧಾರಿಸುತ್ತದೆ.

ತರಕಾರಿ ಜ್ಯೂಸ್

ಇದು ತರಕಾರಿ ಸೂಪ್‌ನಂತೆಯೇ ಲಾಭಕರ. ಜ್ಯೂಸ್ ಅನ್ನು ಬೇಸಗೆಯಲ್ಲಿ ಕುಡಿಯಬಹುದು. ಸೂಪ್ ಅನ್ನು ಚಳಿಗಾಲದಲ್ಲಿ ಕುಡಿಯಬಹುದು. ಆದರೆ ಕಡಿಮೆ ಸೋಡಿಯಂ ಇರಲಿ.

ಬ್ಲಾಕ್ ಕಾಫಿ

ಕಟ್ಟಂ ಚಹಾ ಕುಡಿಯುವುದು ಚಯಾಪಚಯವನ್ನು ಉತ್ತೇಜಿಸುತ್ತದೆ. ಇದು ವೇಗದದರದಲ್ಲಿ ಕೊಬ್ಬು ಇಳಿಸಿ ನಿಮ್ಮ ಶಕ್ತಿಯ ಮಟ್ಟವನ್ನು ಹೆಚ್ಚಿಸುತ್ತದೆ. ಬ್ಲಾಕ್ ಕಾಫಿಯಲ್ಲಿ ಕೆಫೈನ್ ಇದ್ದು, ವಿಶ್ರಾಂತ ಸ್ಥಿತಿಯಲ್ಲೂ ಹೆಚ್ಚು ಕ್ಯಾಲರಿಗಳನ್ನು ಕರಗಿಸಲು ನೆರವಾಗುತ್ತದೆ. ಆದರೆ ಖಾಲಿ ಹೊಟ್ಟೆಗೆ ಮತ್ತು ದಿನಕ್ಕೆ ಎರಡಕ್ಕಿಂತ ಹೆಚ್ಚು ಬಾರಿ ಕುಡಿಯುವುದು ಚಯಾಪಚಯದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ.

ಸ್ಕಿಮ್ಡ್ ಹಾಲು

ಪ್ರೊಟೀನ್ ಹೆಚ್ಚಾಗಿರುವ ಆಹಾರವಿದು. ವಿಟಮಿನ್ ಡಿ ಮತ್ತು ಕ್ಯಾಲ್ಸಿಯಂ ಮೂಳೆಗಳನ್ನು ಗಟ್ಟಿಯಾಗಿಡುತ್ತವೆ. ಮುಖ್ಯವಾಗಿ ನಿತ್ಯವೂ ಕ್ಯಾಲರಿ ಸೇರಿಸದೆಯೇ ದೇಹಕ್ಕೆ ವಿಟಮಿನ್ ಕೊಡುತ್ತದೆ.

ಕೃಪೆ: http://timesofindia.indiatimes.com/

share
ವಾರ್ತಾಭಾರತಿ
ವಾರ್ತಾಭಾರತಿ
Next Story
X