Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ತಾಯ್ನಾಡು ತಲುಪಿದ ತೆಲಂಗಾಣದ ವ್ಯಕ್ತಿಯ...

ತಾಯ್ನಾಡು ತಲುಪಿದ ತೆಲಂಗಾಣದ ವ್ಯಕ್ತಿಯ ಮೃತದೇಹ

3 ತಿಂಗಳು ಶ್ರಮವಹಿಸಿದ ಇಂಡಿಯನ್ ಸೋಶಿಯಲ್ ಫೋರಂ

ವಾರ್ತಾಭಾರತಿವಾರ್ತಾಭಾರತಿ26 Oct 2016 9:42 PM IST
share
ತಾಯ್ನಾಡು ತಲುಪಿದ ತೆಲಂಗಾಣದ ವ್ಯಕ್ತಿಯ ಮೃತದೇಹ

ದಮ್ಮಾಮ್, ಅ.26: ಮೂರು ತಿಂಗಳ ಹಿಂದೆ ಸೌದಿ ಅರೇಬಿಯಾದ ದಮ್ಮಾಮ್ನಲ್ಲಿ ಪೈಂಟಿಂಗ್ ಮಾಡುತ್ತಿದ್ದಾಗ ಕಟ್ಟಡದಿಂದ ಕಾಲುಜಾರಿ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ತೆಲಂಗಾಣ ನಿವಾಸಿ ಭೂಮಾನಂದನ್ ಎಂಬವರ ಮೃತದೇಹವನ್ನು ಇಂಡಿಯನ್ ಸೋಶಿಯಲ್ ಫೋರಮ್ನ ಸಹಕಾರದಲ್ಲಿ ಅವರ ತಾಯ್ನಾಡಿಗೆ ಕಳುಹಿಸಿಕೊಡಲಾಗಿದೆ. ತೀರಾ ಅಪರೂಪದ ಪ್ರಕರಣ ಇದಾಗಿದ್ದು, ಸಾಕಷ್ಟು ಕಾನೂನು ತೊಡಕುಗಳನ್ನು ನಿವಾರಿಸಿ ಭೂಮಾನಂದನ್ ಮೃತದೇಹವನ್ನು ಊರಿಗೆ ತಲುಪಿಸುವಲ್ಲಿ ಇಂಡಿಯನ್ ಸೋಶಿಯಲ್ ಫೋರಂ ಸಾಕಷ್ಟು ಶ್ರಮವಹಿಸಿದೆ.

ತೆಲಂಗಾಣ ಮೂಲದ ಭೂಮಾನಂದನ್ ತನ್ನ ಪ್ರಾಯೋಜಕನ ಕೈಕೆಳಗೆ ದುಡಿಯದೆ ವೈಯಕ್ತಿಕವಾಗಿ ಹೊರಗಡೆ ದುಡಿಯುತ್ತಿದ್ದರು. ಪೈಂಟರ್ ಆಗಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ದುರಂತ ಸಂಭವಿಸಿ ಸಾವನ್ನಪ್ಪಿರುವುದರಿಂದ ಇದೊಂದು ಅಪರಾಧ ಪ್ರಕರಣವಾಗಿ ದಾಖಲಾಗಿ ಪ್ರಾಯೋಜಕ ಕೂಡ ದಂಡ ಹಾಗೂ ಶಿಕ್ಷೆಗೆ ಗುರಿಯಾಗಬೇಕಿತ್ತು. ಇಲ್ಲಿನ ಕಾರ್ಮಿಕ ಕಾನೂನು ಪ್ರಕಾರ ಸೂಕ್ತ ದಾಖಲೆಗಳಿಲ್ಲದೆ ಹೊರಗಡೆ ದುಡಿಯುವುದು ಅಪರಾಧವಾಗಿರುತ್ತದೆ. ದುರಂತದ ಸುದ್ದಿ ತಿಳಿದಾಕ್ಷಣ ಪ್ರಾಯೋಜಕ ಕಾನೂನು ಕ್ರಮದಿಂದ ಪಾರಾಗುವುದಕ್ಕಾಗಿ ಭೂಮಾನಂದನ್ ’’ನಾಪತ್ತೆ’’ ಎಂಬುದಾಗಿ ಕೇಸು ದಾಖಲಿಸಿದ್ದರು. ಇದರಿಂದಾಗಿ ಭೂಮಾನಂದನ್ ಅವರು ಬದುಕುಳಿದಿದ್ದರೂ ಸ್ವದೇಶಕ್ಕೆ ಮರಳಲು ಸಾಧ್ಯವಾಗುತ್ತಿರಲಿಲ್ಲ.

ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಭೂಮಾನಂದನ್‌ಗೆ ದಮ್ಮಾಮ್ ಆಸ್ಪತ್ರೆಯಲ್ಲಿ ತುರ್ತು ಶಸ್ತ್ರಚಿಕಿತ್ಸೆ ನಡೆಸಲಾಗಿತ್ತಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು. ಭೂಮಾನಂದನ್ ಅವರ ಪುತ್ರ ಕೂಡಾ ದಮ್ಮಾಮ್‌ನಲ್ಲೇ ಕೆಲಸ ಮಾಡುತ್ತಿದ್ದು, ಮೃತದೇಹವನ್ನು ಅಲ್ಲೇ ದಫನ ಮಾಡಲು ಸಾಧ್ಯವಾಗದೆ, ಊರಿಗೆ ಕೊಂಡೊಯ್ಯಲೂ ಸಾಧ್ಯವಾಗದೆ ಕಂಗಾಲಾಗಿದ್ದು, ಸೋಶಿಯಲ್ ಫೋರಮ್ ಕರ್ನಾಟಕ ಸಮಿತಿಯ ನೆರವು ಕೇಳಿದ್ದರು.

ಅವರ ಮನವಿಗೆ ಸ್ಪಂದಿಸಿದ ಸೋಶಿಯಲ್ ಫೋರಂ, ಸೌದಿ ಪ್ರಾಯೋಜಕನನ್ನು ಸಂಪರ್ಕಿಸಿ ಆತನ ಮನವೊಲಿಸಿತು. ಇದರಿಂದಾಗಿ ತನಗೆ ಯಾವುದೇ ಕಾನೂನು ಸಮಸ್ಯೆ ಎದುರಾಗದು. ಯಾವುದೇ ದಂಡ ತೆರಬೇಕಾದಲ್ಲಿ ಅದಕ್ಕೆ ಇಂಡಿಯನ್ ಸೋಶಿಯಲ್ ಫೋರಂ ತಂಡವೇ ಹೊಣೆ ಎಂದು ಮುಚ್ಚಳಿಕೆ ಬರೆಸಿಕೊಂಡ ಬಳಿಕ ಪ್ರಾಯೋಜಕನು ಅಗತ್ಯ ದಾಖಲೆ ಪತ್ರಗಳಿಗೆ ಸಹಿಹಾಕಿದ್ದರು. ಬಳಿಕ ಭೂಮಾನಂದನ್ ಮೇಲೆ ದಾಖಲಿಸಿದ್ದ ಕೇಸನ್ನು ವಾಪಸು ಪಡೆದರು. ಇದರಿಂದ ಮುಂದಿನ ಕಾನೂನು ಪ್ರಕ್ರಿಯೆಗಳನ್ನು ನೆರವೇರಿಸಲು ಸಾಧ್ಯವಾಯಿತು. ಆಸ್ಪತ್ರೆಯ ದಾಖಲೆ ಪತ್ರ, ಪೊಲೀಸ್ ಇಲಾಖೆಯ ದಾಖಲೆ ಪತ್ರ, ಭಾರತೀಯ ರಾಯಭಾರಿ ಕಚೇರಿಯ ದಾಖಲೆ, ಆಸ್ಪತ್ರೆಯ ಬಿಲ್, ಮೃತದೇಹವನ್ನು ವಿಮಾನದಲ್ಲಿ ಊರಿಗೆ ಕೊಂಡೊಯ್ಯಲು ಬೇಕಾದ ದಾಖಲೆಗಳು ಇತ್ಯಾದಿಗಳನ್ನು ಸಂಗ್ರಹಿಸುವಲ್ಲಿ ಸೋಶಿಯಲ್ ಫೋರಂನ ಸದಸ್ಯರು ಸಾಕಷ್ಟು ಶ್ರಮವಹಿಸಿದರು. ಸೋಶಿಯಲ್ ಫೋರಂನ ಕಾರ್ಯಕರ್ತರ ಪರಿಶ್ರಮದ ಫಲವಾಗಿ ಅ.21ರಂದು ಭೂಮಾನಂದನ್ ಅವರ ಮೃತದೇಹವು ತಾಯ್ನಾಡಿಗೆ ಕರೆತರಲಾಯಿತು.

ಫೋರಂನ ಕಮ್ಯುನಿಟಿ ವೆಲ್ಫೇರ್ ವಿಭಾಗದ ಮುಖ್ಯಸ್ಥ ನೌಶಾದ್ ಕಾಟಿಪಳ್ಳ ನೇತೃತ್ವದಲ್ಲಿ ಮುಹಮ್ಮದ್ ಶರಫುದ್ದೀನ್, ಇಬ್ರಾಹೀಂ ಕ್ರಷ್ಣಾಪುರ, ಝಕರಿಯಾ, ಅಬ್ದುಲ್ ಖಾದರ್ ಆಂಧ್ರ ಪ್ರದೇಶ ಮುಂತಾದವರು ಸಹಕರಿಸಿದ್ದರು. ಇಂಡಿಯನ್ ಸೋಶಿಯಲ್ ಫೋರಂನ ಪ್ರಯತ್ನಕ್ಕೆ ಸಹಕರಿಸಿ ಆಸ್ಪತ್ರೆಯ ಬಿಲ್‌ನ್ನು ಬಹಳಷ್ಟು ಕಡಿತಗೊಳಿಸಿದ ದಮ್ಮಾಮ್ ಆಸ್ಪತ್ರೆಯ ವೈದ್ಯ ಡಾ.ಅಭಿಜಿತ್, ವಿಮಾನದ ವೆಚ್ಚವನ್ನು ಭರಿಸಿದ ಭಾರತೀಯ ರಾಯಭಾರಿ ಕಚೇರಿ ಮತ್ತು ಅಗತ್ಯ ದಾಖಲೆಗಳಿಗೆ ಸಹಕರಿಸಿದ ಅಲ್ಲಿನ ಜಿಲ್ಲಾಡಳಿತಕ್ಕೂ ಸೋಶಿಯಲ್ ಫೋರಂ ಕೃತಜ್ಞತೆಗಳನ್ನು ಸಲ್ಲಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X