Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಮುದ್ರತೀರದಿಂದ 10 ಕಿ.ಮೀ. ಹೊರಗೆ...

ಸಮುದ್ರತೀರದಿಂದ 10 ಕಿ.ಮೀ. ಹೊರಗೆ ನಿರ್ಮಾಣಯೋಗ್ಯ ಮರಳು: ಭೂ ಸರ್ವೇಕ್ಷಣಾ ಇಲಾಖೆ

ವಾರ್ತಾಭಾರತಿವಾರ್ತಾಭಾರತಿ27 Oct 2016 6:50 PM IST
share
ಸಮುದ್ರತೀರದಿಂದ 10 ಕಿ.ಮೀ. ಹೊರಗೆ ನಿರ್ಮಾಣಯೋಗ್ಯ ಮರಳು: ಭೂ ಸರ್ವೇಕ್ಷಣಾ ಇಲಾಖೆ

ಮಂಗಳೂರು, ಅ.27: ಸಮುದ್ರ ತೀರದಿಂದ 10 ಕಿ.ಮೀ. ಹೊರಗೆ ನಿರ್ಮಾಣಯೋಗ್ಯ ಮರಳನ್ನು ಈಗಾಗಲೇ ಪತ್ತೆ ಹಚ್ಚಲಾಗಿದೆ ಎಂದು ಕೇಂದ್ರ ಸರಕಾರದ ಅಧೀನದಲ್ಲಿರುವ ಭೂ ಸರ್ವೇಕ್ಷಣಾ ಇಲಾಖೆಯ ಡೈರೆಕ್ಟರ್ ಜನರಲ್ ಎಂ.ರಾಜು ಹೇಳಿದರು.

ಜಿಲ್ಲಾ ಭೂ ಸರ್ವೇಕ್ಷಣಾ ಇಲಾಖೆಯ ಕಚೇರಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇರಳ ವ್ಯಾಪ್ತಿಯಲ್ಲಿ 2,797 ಚ.ಕಿ.ಮೀ.ನಲ್ಲಿ ಆಂಧ್ರಪ್ರದೇಶ, ತಮಿಳುನಾಡು, ಪಾಂಡಿಚೇರಿ ವ್ಯಾಪ್ತಿಯಲ್ಲಿ 4,525 ಚ.ಕಿ.ಮೀ. ಭೂಗರ್ಭ ಪ್ರದೇಶದಲ್ಲಿ ನಿರ್ಮಾಣಯೋಗ್ಯ ಮತ್ತು ಕಾರ್ಬೊನೇಟ್ ಮರಳು ನಿಕ್ಷೇಪಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಹೇಳಿದರು.

ಸಾಗರ ಭೂಗರ್ಭದೊಳಗಿರುವ ಮರಳು ಸೇರಿದಂತೆ ಲವಣಗಳ ಬಳಕೆಯ ಕುರಿತು ಕೇಂದ್ರ ಸರಕಾರ ಉತ್ಸುಕವಾಗಿದ್ದು, ಈ ಕುರಿತು ಕೇಂದ್ರ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನೀತಿ ನಿರೂಪಣೆಯ ಹಂತದಲ್ಲಿದೆ. ಆದರೆ ಸದ್ಯಕ್ಕೆ ಭೂ ಸರ್ವೇಕ್ಷಣಾ ಇಲಾಖೆಗೆ ಸೇರಿದ ಯಂತ್ರಗಳು ಸಾಗರ ಮಟ್ಟದಿಂದ ಕೇವಲ 3 ಮೀ. ಆಳವನ್ನಷ್ಟೇ ಕೊರೆಯುವ ಸಾಮರ್ಥ್ಯ ಹೊಂದಿವೆ. ಇದರಿಂದ ಭೂಮಿಯಡಿಯ ನಿಕ್ಷೇಪಗಳ ಸಮಗ್ರ ಮಾಹಿತಿ ದೊರೆಯುವುದಿಲ್ಲ. ಅದಕ್ಕಾಗಿ ಹೊಸ ತಂತ್ರಜ್ಞಾನದ ಮೂಲಕ ಕೊರೆಯುವ ಯಂತ್ರವನ್ನು ಬಳಕೆ ಮಾಡಲು ಉದ್ದೇಶಿಸಿದ್ದು, ಈ ಹೊಸ ಯಂತ್ರ 30 ಮೀ. ಆಳದವರೆಗೂ ಕೊರೆಯುವ ಸಾಮರ್ಥ್ಯ ಹೊಂದಿರುತ್ತದೆ. ಈ ಪ್ರಕ್ರಿಯೆಗೆ ಕೇಂದ್ರ ಸರಕಾರ ಅನುಮೋದನೆ ನೀಡಿದ್ದು, ಜಾಗತಿಕ ಟೆಂಡರ್ ಪ್ರಕ್ರಿಯೆ ನಡೆಸಲಾಗುತ್ತಿದೆ. ನಂತರ ಲವಣ ನಿಕ್ಷೇಪಗಳ ನಿಖರ ಹಾಗೂ ಸಮಗ್ರ ಮಾಹಿತಿ ಪಡೆಯಲು ಸಾಧ್ಯ ಎಂದು ಹೇಳಿದರು.

ಮರಳು ಸೇರಿದಂತೆ ಲವಣ ನಿಕ್ಷೇಪಗಳನ್ನು ಗುರುತಿಸಿ ಮಾಹಿತಿ ನೀಡುವುದು ಮಾತ್ರ ಭೂ ಸರ್ವೇಕ್ಷಣಾ ಇಲಾಖೆಯ ಹೊಣೆಗಾರಿಕೆ. ಲವಣಗಳನ್ನು ತೆಗೆಯುವ ಕಾರ್ಯವನ್ನು ಕೇಂದ್ರ ಸರಕಾರದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಡೆಸಲಿದೆ ಎಂದು ರಾಜು ತಿಳಿಸಿದರು.

ಗುಜರಾತ್ ವ್ಯಾಪ್ತಿಯ ಸಾಗರ ಭೂಗರ್ಭದ 31,954 ಚ.ಕಿ.ಮೀ.ನಲ್ಲಿ ಹಾಗೂ ಪೂರ್ವ ಕರಾವಳಿ ವ್ಯಾಪ್ತಿಯಲ್ಲಿ 1,300 ಚ.ಕಿ.ಮೀ. ಪ್ರದೇಶದಲ್ಲಿ ಲೈಮ್ ಮಡ್ ನಿಕ್ಷೇಪ ಗುರುತಿಸಲಾಗಿದೆ. ಪಶ್ಚಿಮ ಮತ್ತು ಪೂರ್ವ ಕರಾವಳಿಯ ಭೂಗರ್ಭದಲ್ಲಿ ಶೇ.35 ಪ್ರಮಾಣದ ರಸಗೊಬ್ಬರ ಕಾರ್ಖಾನೆಗೆ ಬಳಸುವ ಕಚ್ಚಾವಸ್ತು ಪಾಸ್ಫೋರೈಟ್ ನಿಕ್ಷೇಪ ಗುರುತಿಸಲಾಗಿದೆ. ಸೀಸ, ಝಿಂಕ್, ತಾಮ್ರ, ಕೊಬಾಲ್ಟ್, ಚಿನ್ನ, ಬೆಳ್ಳಿ ಇತ್ಯಾದಿ ಅಪರೂಪದ ಖನಿಜಗಳನ್ನೊಳಗೊಂಡ ಸೀ ಫ್ಲೋರ್ ಮ್ಯಾಸಿವ್ ಸಲ್ಫೈಡ್ (ಎಸ್‌ಎಂಎಸ್)ಗಳನ್ನು ಅಂಡಮಾನ್ ಸಮುದ್ರಗರ್ಭದಲ್ಲಿ ಗುರುತಿಸಲಾಗಿದೆ. ಬರಲಿರುವ ಹೊಸ ತಂತ್ರಜ್ಞಾನದಿಂದ ಇನ್ನಷ್ಟು ನಿಖರವಾಗಿ ನಿಕ್ಷೇಪಗಳನ್ನು ಗುರುತಿಸಲಾಗುವುದು ಎಂದರು.

ಭೂ ಸರ್ವೇಕ್ಷಣಾ ಇಲಾಖೆ ನೀಡುವ ಮಾಹಿತಿಗಳನ್ನು ಕೇಂದ್ರ ಸರಕಾರದ ಭೂ ವಿಜ್ಞಾನ ಸಚಿವಾಲಯ, ರಕ್ಷಣಾ ಸಚಿವಾಲಯ, ಒಎನ್‌ಜಿಸಿ (ಆಯಿಲ್ ಆ್ಯಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಶನ್ ಲಿಮಿಟೆಡ್) ಬಳಕೆ ಮಾಡಿಕೊಳ್ಳಲಿವೆ. ಆದರೆ ತೈಲ, ಅನಿಲ, ರೇಡಿಯೋಆಕ್ಟಿವ್ ನಿಕ್ಷೇಪಗಳ ಪತ್ತೆ ಕಾರ್ಯ ಭೂ ಸರ್ವೇಕ್ಷಣಾ ಇಲಾಖೆ ವ್ಯಾಪ್ತಿಗೆ ಬರುವುದಿಲ್ಲ. ಅದರ ಜವಾಬ್ದಾರಿಯನ್ನು ಒಎನ್‌ಜಿಸಿಗೆ ನೀಡಲಾಗಿದೆ ಎಂದು ಅವರು ಹೇಳಿದರು.

ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ಜನರಲ್ ವಿ.ದೇವದಾಸ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X