Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಬಿಷಪ್‌ರ ದೀಪಾವಳಿ ಸಂದೇಶ

ಉಡುಪಿ ಬಿಷಪ್‌ರ ದೀಪಾವಳಿ ಸಂದೇಶ

ವಾರ್ತಾಭಾರತಿವಾರ್ತಾಭಾರತಿ27 Oct 2016 8:26 PM IST
share
ಉಡುಪಿ ಬಿಷಪ್‌ರ ದೀಪಾವಳಿ ಸಂದೇಶ

ಉಡುಪಿ, ಅ.27: ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷರಾದ ಅ.ವಂ. ಡಾ.ಜೆರಾಲ್ಡ್ ಐಸಾಕ್ ಲೋಬೊ ಅವರು ನಾಡಿನ ಜನತೆಗೆ ದೀಪಾವಳಿಯ ಶುಭಾಶಯಗಳನ್ನು ತಿಳಿಸಿದ್ದಾರೆ. ಅವರ ಸಂದೇಶದ ಪೂರ್ಣಪಾಠ ಹೀಗಿದೆ.

‘ಕತ್ತಲನ್ನು ದೂರುವುದರ ಬದಲು ಒಂದು ದೀಪವನ್ನು ಹೊತ್ತಿಸು’ ಎಂಬುದು ಹಳೆಯ ಗಾದೆ ಮಾತು. ಅನೀತಿ, ಅನ್ಯಾಯ, ಅಜ್ಞಾನ, ಮರಣ ಇವು ಕತ್ತಲ ಲೋಕಕ್ಕೆ ಸೇರಿದ ಸಂಕೇತಗಳು. ಆದುದರಿಂದ ಉಪನಿಷತ್ತಿನ ‘ಅಸತೋಮಾ ಸದ್ಗಮಯ, ತಮಸೋಮ ಜ್ಯೋತಿರ್ಗಮಯ, ಮೃತ್ಯೋರ್ಮ ಅಮೃತಂ ಗಮಯ’ ಎಂಬ ಪ್ರಾರ್ಥನೆ ಅಪ್ಯಾಯಮಾನವಾಗಿದೆ. ಅಸತ್ಯದಿಂದ ಸತ್ಯದೆಡೆಗೂ, ತಮಸ್ಸಿನಿಂದ ಪ್ರಭೆಯೆಡೆಗೂ, ಮೃತ್ಯುವಿನಿಂದ ಅಮರತ್ವದೆಡೆಗೂ ನಮ್ಮನ್ನು ಕರೆದೊಯ್ಯು ಎಂಬುದು ಸೃಷ್ಠಿಕರ್ತನಾದ ಭಗವಂತನಲ್ಲಿ ಮಾನವನ ಅವಿರತ ಮೊರೆಯಾಗಿದೆ.

ಮನೆ ಮನೆಯಲಿ, ಮನ ಮನದಲಿ ಜ್ಯೋತಿ ಬೆಳಗಲಿ, ಜ್ಞಾನ ಜ್ಯೋತಿ ಬೆಳಗಲಿ ಎಂಬ ಗೀತೆಯಂತೆ ಬೆಳಕಿನ ಹಬ್ಬ ದೀಪಾವಳಿ ಮನೆ, ಮನಗಳ ಕತ್ತಲೆಯನ್ನು ಹೋಗಲಾಡಿಸಲಿ. ಮಾನವನ ಜೀವನದಲ್ಲಿ ಸತ್ಯದ ಬೆಳಕಿನ ಮತ್ತು ಅಮರತ್ವದ ಮಹತ್ವವನ್ನು ದೀಪಾವಳಿ ತಿಳಿಸುತ್ತದೆ. ತಾನು ಬೆಳಗಿ ಬೇರೆಯ ವರನ್ನು ಬೆಳಗಿಸುವ ಶಕ್ತಿ ದೀಪಕ್ಕಿದೆ. ಅಂತರಂಗದಲ್ಲಿರುವ ಕತ್ತಲೆಯನ್ನೋಡಿಸಿ, ಬೆಳಕಿನ ಪ್ರಣತಿಯ ಹಚ್ಚಿ ದೀಪ ಬೆಳಗಿಸುವ ಮೂಲಕ ಬೆಳಗುವ ದಿವ್ಯ ಜ್ಯೋತಿಯ ಹಬ್ಬ ದೀಪಾವಳಿ. ಎಲ್ಲೆಲ್ಲೂ ಜ್ಞಾನ, ನಿರ್ಮಲ ಆನಂದ, ಶುದ್ಧ ಮನಸ್ಸಿನ ಪ್ರೀತಿಯ ಬೆಳಗಿಸುವ ಸಂಕೇತವಾಗಿ ಆಚರಿಸಲ್ಪಡುವ ಹಬ್ಬವಿದು.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ದೇವಾಲಯ ಮತ್ತು ಮನೆಗಳನ್ನು ಅನೇಕ ದಿನಗಳವರೆಗೆ ದೀಪಗಳಿಂದ ಅಲಂಕರಿಸಲಾಗುತ್ತದೆ. ಯಾವ ಮನೆಗಳಲ್ಲಿ ದೀಪಗಳು ಬೆಳಗುತ್ತವೋ ಆ ಕುಟುಂಬಕ್ಕೆ ಸುಭಿಕ್ಷೆ, ಸಮೃದ್ಧಿ, ಸುಖ ಸಂತೋಷ ದೊರಕುತ್ತದೆ ಎಂಬ ನಂಬಿಕೆಯೊಡನೆ ಮನೆ-ಮನಗಳಲ್ಲಿರುವ ದುಃಖ, ದುಷ್ಟಶಕ್ತಿಗಳನ್ನು ಹೊಡೆದೋಡಿಸಿ, ಉತ್ತಮ ಬೆಳಕನ್ನು ಹರಿಸುವ ಮೂಲಕ ಸಮೃದ್ಧಿ, ಸನ್ಮಂಗಳ ಉಂಟು ಮಾಡುವುದು ಎಂಬ ಭರವಸೆ ದೀಪಾವಳಿಯದ್ದು.
ದೀಪಾವಳಿ ಹಬ್ಬದ ಆಚರಣೆ ಮಾನವನಲ್ಲಿ ಸುಜ್ಞಾನವನ್ನೂ, ಸಾತ್ವಿಕ ಗುಣವನ್ನೂ ಪ್ರಜ್ವಲಗೊಳಿಸಲಿ. ಅಂತರಂಗ ಮತ್ತು ಬಹಿರಂಗ ಶುದ್ಧಿ ಈ ಹಬ್ಬಕ್ಕೆ ರಂಗನ್ನು ಕೊಡಲಿ. ಶುಭ್ರ ಮನಸ್ಸೆಂಬ ತುಂಬು ಹಣತೆಯಲ್ಲಿ, ಪ್ರೀತಿಯೆಂಬ ಬತ್ತಿ ಹೊಸೆದು, ಮಮತೆಯ ಎಣ್ಣೆ ಸುರಿದು, ನಿರ್ಮಲ ಮನಸ್ಸೆಂಬ ಬೆಂಕಿ ಹಚ್ಚಿದಾಗ, ಕಾಣುವ ಪ್ರಭೆಯು ಎಲ್ಲರ ಮನಗಳನ್ನು ಬೆಳಗಿ ಬಾಳನ್ನು ಚಿರಂತನ ಪರಂಜ್ಯೋತಿಯಾಗಿ ಅನವರತ ಬೆಳಗುತ್ತಿರಲಿ ಎಂಬುದೇ ನಮ್ಮ ಹಾರೈಕೆ.
ನಾಡಿನ ಸಮಸ್ತ ಬಂಧುಬಾಂಧವರಿಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X